AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಚಿತ್ರದ ‘ತಗ್ಗೋದೆ ಇಲ್ಲ’ ಡೈಲಾಗ್​ನ ಕಾಪಿ ಮಾಡಿದ ಹಾಲಿವುಡ್​ ಗಾಯಕ

ಎಡ್ ಶೀರನ್ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನಲ್ಲಿ ಭಾಗಿ ಆಗಿದ್ದರು. ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಶೋ ಪ್ರಸಾರ ಕಾಣುತ್ತಿದೆ. ಇದರಲ್ಲಿ ಕಪಿಲ್ ಶರ್ಮಾ ಅವರು ಭಾರತದ ಬಗ್ಗೆ, ಭಾರತೀಯ ಸಂಸ್ಕೃತಿ ಬಗ್ಗೆ, ಭಾರತದ ಸಿನಿಮಾಗಳ ಬಗ್ಗೆ ಎಡ್ ಶೀರನ್ ಬಳಿ ಮಾತನಾಡಿದ್ದಾರೆ. ಆಗ ಅವರು ‘ತಗ್ಗದೆಲೆ’ ಡೈಲಾಗ್ ಹೇಳಿಕೊಟ್ಟಿದ್ದಾರೆ.

‘ಪುಷ್ಪ’ ಚಿತ್ರದ ‘ತಗ್ಗೋದೆ ಇಲ್ಲ’ ಡೈಲಾಗ್​ನ ಕಾಪಿ ಮಾಡಿದ ಹಾಲಿವುಡ್​ ಗಾಯಕ
ಎಡ್ ಶೀರನ್-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: May 23, 2024 | 8:58 AM

Share

ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ’ ಸಿನಿಮಾ ಮಾಡಿದ ದಾಖಲೆ ತುಂಬಾನೇ ದೊಡ್ಡದು. ಈ ಚಿತ್ರ ಒಳ್ಳೆಯ ರೀತಿಯಲ್ಲಿ ಬಿಸ್ನೆಸ್ ಮಾಡಿತ್ತು. ಈ ಚಿತ್ರದ ‘ತಗ್ಗೆದೆಲೆ’ (ಕನ್ನಡದಲ್ಲಿ ತಗ್ಗೋದೆ ಇಲ್ಲ, ಹಿಂದಿಯಲ್ಲಿ ಜುಕೇಗಾ ನಹಿ ಸಾಲಾ) ಡೈಲಾಗ್ ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಇದರ ಹವಾ ಇನ್ನೂ ಕಡಿಮೆ ಆಗಿಲ್ಲ. ಹಾಲಿವುಡ್ ಸಿಂಗರ್ ಎಡ್ ಶೀರನ್ ಕೂಡ ಈ ಡೈಲಾಗ್​ನ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಎಡ್ ಶೀರನ್ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನಲ್ಲಿ ಭಾಗಿ ಆಗಿದ್ದರು. ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಶೋ ಪ್ರಸಾರ ಕಾಣುತ್ತಿದೆ. ಇದರಲ್ಲಿ ಕಪಿಲ್ ಶರ್ಮಾ ಅವರು ಭಾರತದ ಬಗ್ಗೆ, ಭಾರತೀಯ ಸಂಸ್ಕೃತಿ ಬಗ್ಗೆ, ಭಾರತದ ಸಿನಿಮಾಗಳ ಬಗ್ಗೆ ಎಡ್ ಶೀರನ್ ಬಳಿ ಮಾತನಾಡಿದ್ದಾರೆ. ಆಗ ಅವರು ‘ತಗ್ಗದೆಲೆ’ (ತಗ್ಗೋದೆ ಇಲ್ಲ) ಡೈಲಾಗ್ ಹೇಳಿಕೊಟ್ಟಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ರಿಲೀಸ್​ ದಿನಾಂಕ ಬದಲಾಗತ್ತಾ? ಅನುಮಾನಕ್ಕೆ ಕಾರಣವಾದ ಎರಡು ಅಂಶಗಳು

‘ಪುಷ್ಪ’ ಸಿನಿಮಾದಲ್ಲಿ ಪುಷ್ಪರಾಜ್ (ಅಲ್ಲು ಅರ್ಜುನ್) ಆಗಾಗ ಗಡ್ಡದ ಬಳಿ ಕೈ ಇಟ್ಟುಕೊಂಡು ‘ತಗ್ಗೋದೆ ಇಲ್ಲ’ ಎನ್ನುತ್ತಿರುತ್ತಾನೆ. ಈ ಡೈಲಾಗ್ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಈ ಡೈಲಾಗ್​ನ ಕಪಿಲ್ ಶರ್ಮಾ ಅವರು ಎಡ್ ಶೀರನ್​ಗೆ ಹೇಳಿಕೊಟ್ಟಿದ್ದಾರೆ. ಇದನ್ನು ಪರ್ಫೆಕ್ಟ್ ಆಗಿ ಕಾಪಿ ಮಾಡಿದ್ದಾರೆ ಎಡ್ ಶೀರನ್. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ಮೊದಲ ಪಾರ್ಟ್ ಹಿಟ್ ಆದ ಕಾರಣ ಎರಡನೇ ಪಾರ್ಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸುಕುಮಾರ್ ಅವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ‘ಮೈತ್ರಿ ಮೂವೀ ಮೇಕರ್ಸ್’ ಇದನ್ನು ನಿರ್ಮಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!