AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಚಿತ್ರದ ‘ತಗ್ಗೋದೆ ಇಲ್ಲ’ ಡೈಲಾಗ್​ನ ಕಾಪಿ ಮಾಡಿದ ಹಾಲಿವುಡ್​ ಗಾಯಕ

ಎಡ್ ಶೀರನ್ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನಲ್ಲಿ ಭಾಗಿ ಆಗಿದ್ದರು. ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಶೋ ಪ್ರಸಾರ ಕಾಣುತ್ತಿದೆ. ಇದರಲ್ಲಿ ಕಪಿಲ್ ಶರ್ಮಾ ಅವರು ಭಾರತದ ಬಗ್ಗೆ, ಭಾರತೀಯ ಸಂಸ್ಕೃತಿ ಬಗ್ಗೆ, ಭಾರತದ ಸಿನಿಮಾಗಳ ಬಗ್ಗೆ ಎಡ್ ಶೀರನ್ ಬಳಿ ಮಾತನಾಡಿದ್ದಾರೆ. ಆಗ ಅವರು ‘ತಗ್ಗದೆಲೆ’ ಡೈಲಾಗ್ ಹೇಳಿಕೊಟ್ಟಿದ್ದಾರೆ.

‘ಪುಷ್ಪ’ ಚಿತ್ರದ ‘ತಗ್ಗೋದೆ ಇಲ್ಲ’ ಡೈಲಾಗ್​ನ ಕಾಪಿ ಮಾಡಿದ ಹಾಲಿವುಡ್​ ಗಾಯಕ
ಎಡ್ ಶೀರನ್-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: May 23, 2024 | 8:58 AM

Share

ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ’ ಸಿನಿಮಾ ಮಾಡಿದ ದಾಖಲೆ ತುಂಬಾನೇ ದೊಡ್ಡದು. ಈ ಚಿತ್ರ ಒಳ್ಳೆಯ ರೀತಿಯಲ್ಲಿ ಬಿಸ್ನೆಸ್ ಮಾಡಿತ್ತು. ಈ ಚಿತ್ರದ ‘ತಗ್ಗೆದೆಲೆ’ (ಕನ್ನಡದಲ್ಲಿ ತಗ್ಗೋದೆ ಇಲ್ಲ, ಹಿಂದಿಯಲ್ಲಿ ಜುಕೇಗಾ ನಹಿ ಸಾಲಾ) ಡೈಲಾಗ್ ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಇದರ ಹವಾ ಇನ್ನೂ ಕಡಿಮೆ ಆಗಿಲ್ಲ. ಹಾಲಿವುಡ್ ಸಿಂಗರ್ ಎಡ್ ಶೀರನ್ ಕೂಡ ಈ ಡೈಲಾಗ್​ನ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಎಡ್ ಶೀರನ್ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನಲ್ಲಿ ಭಾಗಿ ಆಗಿದ್ದರು. ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಶೋ ಪ್ರಸಾರ ಕಾಣುತ್ತಿದೆ. ಇದರಲ್ಲಿ ಕಪಿಲ್ ಶರ್ಮಾ ಅವರು ಭಾರತದ ಬಗ್ಗೆ, ಭಾರತೀಯ ಸಂಸ್ಕೃತಿ ಬಗ್ಗೆ, ಭಾರತದ ಸಿನಿಮಾಗಳ ಬಗ್ಗೆ ಎಡ್ ಶೀರನ್ ಬಳಿ ಮಾತನಾಡಿದ್ದಾರೆ. ಆಗ ಅವರು ‘ತಗ್ಗದೆಲೆ’ (ತಗ್ಗೋದೆ ಇಲ್ಲ) ಡೈಲಾಗ್ ಹೇಳಿಕೊಟ್ಟಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ರಿಲೀಸ್​ ದಿನಾಂಕ ಬದಲಾಗತ್ತಾ? ಅನುಮಾನಕ್ಕೆ ಕಾರಣವಾದ ಎರಡು ಅಂಶಗಳು

‘ಪುಷ್ಪ’ ಸಿನಿಮಾದಲ್ಲಿ ಪುಷ್ಪರಾಜ್ (ಅಲ್ಲು ಅರ್ಜುನ್) ಆಗಾಗ ಗಡ್ಡದ ಬಳಿ ಕೈ ಇಟ್ಟುಕೊಂಡು ‘ತಗ್ಗೋದೆ ಇಲ್ಲ’ ಎನ್ನುತ್ತಿರುತ್ತಾನೆ. ಈ ಡೈಲಾಗ್ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಈ ಡೈಲಾಗ್​ನ ಕಪಿಲ್ ಶರ್ಮಾ ಅವರು ಎಡ್ ಶೀರನ್​ಗೆ ಹೇಳಿಕೊಟ್ಟಿದ್ದಾರೆ. ಇದನ್ನು ಪರ್ಫೆಕ್ಟ್ ಆಗಿ ಕಾಪಿ ಮಾಡಿದ್ದಾರೆ ಎಡ್ ಶೀರನ್. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ಮೊದಲ ಪಾರ್ಟ್ ಹಿಟ್ ಆದ ಕಾರಣ ಎರಡನೇ ಪಾರ್ಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸುಕುಮಾರ್ ಅವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ‘ಮೈತ್ರಿ ಮೂವೀ ಮೇಕರ್ಸ್’ ಇದನ್ನು ನಿರ್ಮಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್