AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

80ಕ್ಕೂ ಅಧಿಕ ಅತ್ಯಾಚಾರ ಆರೋಪ ಇರುವ ನಿರ್ಮಾಪಕನಿಗೆ ಈಗ ಮೈತುಂಬ ಕಾಯಿಲೆ

ಬ್ಲಡ್ ಕ್ಯಾನ್ಸರ್​, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದಲ್ಲಿ ನೀರು, ಮಧುಮೇಹ, ಅಧಿಕ ರಕ್ತದೊತ್ತಡ, ಬೆನ್ನು ನೋವು ಸೇರಿದಂತೆ ಹಲವು ಕಾಯಿಲೆಗಳು ಹಾರ್ವಿ ವೈನ್​ಸ್ಟೀನ್​ಗೆ ಅಂಟಿಕೊಂಡಿವೆ. 80ಕ್ಕೂ ಹೆಚ್ಚು ಮಹಿಳೆಯರು ಈತನ ಮೇಲೆ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಜೈಲಿನಲ್ಲಿ ಇರುವ ಹಾರ್ವಿ ವೈನ್​ಸ್ಟೀನ್​ಗೆ ಹತ್ತಾರು ಕಾಯಿಲೆಗಳು ಶುರುವಾಗಿವೆ.

80ಕ್ಕೂ ಅಧಿಕ ಅತ್ಯಾಚಾರ ಆರೋಪ ಇರುವ ನಿರ್ಮಾಪಕನಿಗೆ ಈಗ ಮೈತುಂಬ ಕಾಯಿಲೆ
ಹಾರ್ವಿ ವೈನ್​ಸ್ಟೀನ್​
ಮದನ್​ ಕುಮಾರ್​
|

Updated on: Oct 22, 2024 | 7:32 PM

Share

ಹಾಲಿವುಡ್​ನ ಕುಖ್ಯಾತ ನಿರ್ಮಾಪಕ ಹಾರ್ವಿ ವೈನ್​ಸ್ಟೀನ್ ಮೇಲೆ ಇರುವ ಆರೋಪಗಳು ಎಂದೆರಡಲ್ಲ. ಅನೇಕ ಮಹಿಳೆಯರು ಆತನ ಮೇಲೆ ಆರೋಪಗಳನ್ನು ಮಾಡಿದ್ದಾರೆ. ಮೀಟೂ ಆಂದೋಲನ ಶುರುವಾಗಲು ಕಾರಣನಾದ ಹಾರ್ವಿ ವೈನ್​ಸ್ಟೀನ್​ ಈಗ ಜೈಲಿನಲ್ಲಿ ಇದ್ದಾನೆ. ಹಲವು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಈಗ ಆತನಿಗೆ ಅನೇಕ ಕಾಯಿಲೆಗಳು ಬಂದಿವೆ. ಇತ್ತೀಚೆಗೆ ಕ್ಯಾನ್ಸರ್ ಕೂಡ ಬಂದಿದೆ ಎಂಬ ಮಾಹಿತಿ ಸಿಕ್ಕಿದೆ. ಜೈಲಿನಲ್ಲೇ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಹಾರ್ವಿ ವೈನ್​ಸ್ಟೀನ್​ಗೆ ಈಗ 72 ವರ್ಷ ವಯಸ್ಸು. ಅನೇಕ ಗಮನಾರ್ಹ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಈತ ಲೈಂಗಿಕ ದೌರ್ಜನ್ಯದ ಕಾರಣದಿಂದ ಅಪಖ್ಯಾತಿಗೆ ಒಳಗಾಗಿದ್ದಾನೆ. ಹಲವು ಪ್ರಕರಣಗಳಲ್ಲಿ ತನಿಖೆ ಮತ್ತು ವಿಚಾರಣೆ ನಡೆಯುತ್ತಿದ್ದು, ಆತನಿಗೆ ಅನೇಕ ರೋಗಗಳು ಕಾಡುತ್ತಿವೆ. ಸದ್ಯಕ್ಕೆ ಬ್ಲಡ್ ಕ್ಯಾನ್ಸರ್​ನಿಂದ ಆತ ಬಳಲುತ್ತಿದ್ದು, ನ್ಯೂಯಾರ್ಕ್​ ಜೈಲಿನ ಒಳಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅನಾರೋಗ್ಯದ ಕಾರಣದಿಂದ ಹಾರ್ವಿ ವೈನ್​ಸ್ಟೀನ್ ಸುದ್ದಿ ಆಗಿರುವುದು ಇದೇ ಮೊದಲೇನೂ ಅಲ್ಲ. ಈ ಮೊದಲು ಆತನಿಗೆ ಕೊವಿಡ್-19 ಸೋಕು ತಗುಲಿತ್ತು. ಇದಲ್ಲದೇ, ಡಯಾಬಿಟಿಸ್​, ಅಧಿಕ ರಕ್ತದೊತ್ತಡ, ಬೆನ್ನು ನೋವು ಕಾಣಿಸಿಕೊಂಡಿದೆ. ಅದೂ ಸಾಲದೆಂಬಂತೆ, ಹೃದಯ ಮತ್ತು ಶ್ವಾಸಕೋಶದಲ್ಲಿ ನೀರು ತುಂಬಿಕೊಳ್ಳುತ್ತಿದೆ. ಹೀಗೆ ಹಾರ್ವಿ ವೈನ್​ಸ್ಟೀನ್​ಗೆ ಮೈತುಂಬ ಕಾಯಿಲೆಗಳು ಅಂಟಿಕೊಂಡಿವೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿ ಹಾರ್ವಿ ವೈನ್​ಸ್ಟೀನ್​ಗೆ ವಿಧಿಸಿದ್ದ ಶಿಕ್ಷೆ ರದ್ದು; ಮಿಟೂ ಅಭಿಯಾನಕ್ಕೆ ಹಿನ್ನಡೆ

ಈಗಾಗಲೇ ಕೆಲವು ಆರೋಪಗಳಲ್ಲಿ ಹಾರ್ವಿ ವೈನ್​ಸ್ಟೀನ್​ಗೆ ಶಿಕ್ಷೆ ವಿಧಿಸಲಾಗಿತ್ತು. ಆದರೆ ವಿಚಾರಣೆ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂಬ ಕಾರಣಕ್ಕೆ ನ್ಯೂಯಾರ್ಕ್​ ನ್ಯಾಯಾಲಯವು ಆ ಶಿಕ್ಷೆಯನ್ನು ರದ್ದುಗೊಳಿಸಿತ್ತು. ಸಂಬಂಧವೇ ಇಲ್ಲದ ಸಾಕ್ಷಿಗಳ ಹೇಳಿಕೆಯನ್ನು ಪಡೆಯಲಾಗಿದೆ ಎಂಬ ಕಾರಣ ನೀಡಿ ನ್ಯಾಯಾಲಯ ಈ ಆದೇಶ ನೀಡಿತು. ಬಳಿಕ ಹೊಸದಾಗಿ ವಿಚಾರಣೆ ನಡೆಸುವಂತೆ ಆದೇಶಿಸಲಾಯಿತು. ಸದ್ಯಕ್ಕಂತೂ ಹಾರ್ವಿ ವೈನ್​ಸ್ಟೀನ್​ ಜೈಲಿನಲ್ಲಿ ಇದ್ದಾನೆ. ಜೈಲು ಶಿಕ್ಷೆಯ ಜೊತೆ ಕಾಯಿಲೆಗಳು ಅಂಟಿಕೊಂಡಿರುವುದರಿಂದ ಆತನ ಜೀವನ ನರಕ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ