AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

James Michael Tyler: ‘ಫ್ರೆಂಡ್ಸ್​’ ಖ್ಯಾತಿಯ ನಟ ಜೇಮ್ಸ್​ ಮೈಕೆಲ್​ ಟೈಲರ್​ ನಿಧನ

ಜೇಮ್ಸ್​ ಮೈಕೆಲ್​ ಟೈಲರ್​ ಅವರಿಗೆ ಕ್ಯಾನ್ಸರ್​ ಇರುವುದು 2018ರಲ್ಲಿ ತಿಳಿದು ಬಂದಿತ್ತು. ಅಂದಿನಿಂದಲೂ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕಡೆಗೂ ಅವರು ಕ್ಯಾನ್ಸರ್​ ವಿರುದ್ಧದ ಹೋರಾಟದಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ.

James Michael Tyler: ‘ಫ್ರೆಂಡ್ಸ್​’ ಖ್ಯಾತಿಯ ನಟ ಜೇಮ್ಸ್​ ಮೈಕೆಲ್​ ಟೈಲರ್​ ನಿಧನ
ಜೇಮ್ಸ್ ಮೈಕೆಲ್ ಟೈಲರ್
TV9 Web
| Edited By: |

Updated on: Oct 25, 2021 | 11:22 AM

Share

ಖ್ಯಾತ ಕಿರುತೆರೆ ನಟ ಜೇಮ್ಸ್​ ಮೈಕೆಲ್​ ಟೈಲರ್​ ನಿಧನರಾಗಿದ್ದಾರೆ. ಅಮೆರಿಕ ಕಿರುತೆರೆಯ ಕಾಮಿಡಿ ಸೀರಿಯಲ್​ ‘ಫ್ರೆಂಡ್ಸ್​’ ಮೂಲಕ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದ ಅವರಿಗೆ ಜಗತ್ತಿನಾದ್ಯಂತ ಅಭಿಮಾನಿಗಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಜೇಮ್ಸ್​ ಮೈಕೆಲ್​ ಟೈಲರ್​ ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅವರಿಗೆ 59 ವರ್ಷ ವಯಸ್ಸಾಗಿತ್ತು. ಲಾಸ್​ ಏಂಜಲಿಸ್​ನ ತಮ್ಮ ನಿವಾಸದಲ್ಲಿ ಭಾನುವಾರ (ಅ.24) ಅವರು ಕೊನೆಯುಸಿರೆಳೆದರು. ಈ ಸುದ್ದಿ ಅವರ ಅಭಿಮಾನಿಗ ಬಳಗಕ್ಕೆ ತೀವ್ರ ನೋವು ಉಂಟುಮಾಡಿದೆ. ಆಪ್ತರು, ಸೆಲೆಬ್ರಿಟಿಗಳು ಜೇಮ್ಸ್​ ಮೈಕೆಲ್​ ಟೈಲರ್​ ನಿಧನಕ್ಕೆ ಕಂಬನಿ ಮಿಡಿಯುತ್ತಿದ್ದಾರೆ.

1994ರಿಂದ 2004ರವರೆಗೆ 10 ಸೀಸನ್​ಗಳಲ್ಲಿ ‘ಫ್ರೆಂಡ್ಸ್​’ ಸೀರಿಯಲ್​ ಪ್ರಸಾರವಾಯಿತು. 150ಕ್ಕೂ ಹೆಚ್ಚು ಎಪಿಸೋಡ್​ಗಳಲ್ಲಿ ಜೇಮ್ಸ್​ ಮೈಕೆಲ್​ ಟೈಲರ್​ ಕಾಣಿಸಿಕೊಂಡಿದ್ದರು. ಅವರು ನಿಭಾಯಿಸಿದ್ದ ಕಾಫಿ ಶಾಪ್​ ಮ್ಯಾನೇಜರ್​ ಗಂತರ್​ ಪಾತ್ರ ಎಲ್ಲರ ಮೆಚ್ಚುಗೆ ಗಳಿಸಿತ್ತು.

ಜೇಮ್ಸ್​ ಮೈಕೆಲ್​ ಟೈಲರ್​ ಅವರಿಗೆ ಕ್ಯಾನ್ಸರ್​ ಇರುವುದು 2018ರಲ್ಲಿ ತಿಳಿದು ಬಂದಿತ್ತು. ಅಂದಿನಿಂದಲೂ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕಡೆಗೂ ಅವರು ಕ್ಯಾನ್ಸರ್​ ವಿರುದ್ಧದ ಹೋರಾಟದಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ನಟನಾಗಿ ಮಾತ್ರವಲ್ಲದೇ, ಸಂಗೀತಗಾರನಾಗಿ, ಕ್ಯಾನ್ಸರ್​ ಅಡ್ವಕೇಟ್​ ಆಗಿಯೂ ಗುರುತಿಸಿಕೊಂಡಿದ್ದರು.

ಇದನ್ನೂ ಓದಿ:

Paul Walker: ‘ಫಾಸ್ಟ್​ ಆ್ಯಂಡ್​ ಫ್ಯೂರಿಯಸ್’​ ಖ್ಯಾತಿಯ ಪೌಲ್​ ವಾಕರ್​ ಮಗಳ ಮದುವೆ; ಸಮುದ್ರ ತಟದಲ್ಲಿ ನಡೆಯಿತು ವಿವಾಹ

ಪಬ್​ನಲ್ಲಿ ಪಾತ್ರೆ ತೊಳೆಯುತ್ತಿದ್ದ ಯುವಕ ‘ಸ್ಪೈಡರ್​ ಮ್ಯಾನ್​’ ಆದ; ನಟ ಟಾಮ್​ ಹಾಲೆಂಡ್​ ಲೈಫ್​ ಸ್ಟೋರಿ

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ