AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Golden Globes 2024: 81ನೇ ಸಾಲಿನ ‘ಗೋಲ್ಡನ್​ ಗ್ಲೋಬ್ಸ್’ ಅವಾರ್ಡ್​; ಇಲ್ಲಿದೆ ವಿಜೇತರ ಪಟ್ಟಿ

ಕಳೆದ ವರ್ಷ ಭಾರತೀಯರ ಪಾಲಿಗೆ ‘ಗೋಲ್ಡನ್ ಗ್ಲೋಬ್ಸ್’ ಅವಾರ್ಡ್ ವಿಶೇಷ ಎನಿಸಿಕೊಂಡಿತ್ತು. ‘ಆರ್​ಆರ್​ಆರ್’ ಸಿನಿಮಾ ಕೂಡ ಕೆಲವು ವಿಭಾಗಗಳಲ್ಲಿ ನಾಮಿನೇಟ್ ಆಗಿ ಅವಾರ್ಡ್ ಪಡೆದಿತ್ತು.

Golden Globes 2024: 81ನೇ ಸಾಲಿನ ‘ಗೋಲ್ಡನ್​ ಗ್ಲೋಬ್ಸ್’ ಅವಾರ್ಡ್​; ಇಲ್ಲಿದೆ ವಿಜೇತರ ಪಟ್ಟಿ
ಆಪನ್​ಹೈಮರ್
TV9 Web
| Edited By: |

Updated on: Jan 08, 2024 | 9:56 AM

Share

81ನೇ ಸಾಲಿನ ಗೋಲ್ಡನ್ ಗ್ಲೋಬ್ಸ್ ಅವಾರ್ಡ್ (Golden Globes Awards) ಕಾರ್ಯಕ್ರಮ ಭಾನುವಾರ ಸಂಜೆ (ಭಾರತೀಯ ಕಾಲಮಾನದಲ್ಲಿ ಸೋಮವಾರ ಬೆಳಿಗ್ಗೆ) ನಡೆಯುತ್ತಿದೆ. ಅಮೆರಿಕದ ಲಾಸ್ ಏಂಜಲೀಸ್​ನಲ್ಲಿ ಈ ಅವಾರ್ಡ್ ಫಂಕ್ಷನ್ ನಡೆಯುತ್ತಿದೆ. ಬಾರ್ಬಿ ಸಿನಿಮಾ 9 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ‘ಆಪನ್​​ಹೈಮರ್’ ಸಿನಿಮಾ 8 ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿತ್ತು. ಎರಡೂ ಸಿನಿಮಾಗಳು ಹಲವು ಪ್ರಶಸ್ತಿ ಗೆದ್ದಿವೆ. ಎರಡೂ ಚಿತ್ರಗಳು ಒಟ್ಟಿಗೆ ರಿಲೀಸ್ ಆಗಿ ಸದ್ದು ಮಾಡಿದ್ದವು.

ಕ್ರಿಸ್ಟೋಫರ್​ ನೋಲನ್​ ನಿರ್ದೇಶನದ ‘ಆಪನ್​ಹೈಮರ್​’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರದ ನಿರ್ದೇಶನಕ್ಕಾಗಿ ಕ್ರಿಸ್ಟೋಫರ್​ ನೋಲನ್ ಅವರಿಗೆ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಸಿಕ್ಕಿದೆ. ‘ಅತ್ಯುತ್ತಮ ಸಿನಿಮ್ಯಾಟಿಕ್ ಹಾಗೂ ಬಾಕ್ಸ್ ಆಫೀಸ್ ಅಚೀವ್​ಮೆಂಟ್’ ಅವಾರ್ಡ್​ ‘ಬಾರ್ಬಿ’ ಪಡೆದಿದೆ. ಈ ರೇಸ್​ನಲ್ಲಿ ‘ಆಪನ್​ಹೈಮರ್’ ಸಿನಿಮಾ ಕೂಡ ಇತ್ತು.

‘ಅತ್ಯುತ್ತಮ ಸಿನಿಮಾ’ (ಆಂಗ್ಲೇತರ ಭಾಷೆ) ಪ್ರಶಸ್ತಿ ಫ್ರಾನ್ಸ್​ನ ‘ಆ್ಯನಟಮಿ ಆಫ್ ಫಾಲ್’ ಚಿತ್ರಕ್ಕೆ ಸಿಕ್ಕಿದೆ. ಅತ್ಯುತ್ತಮ ಮೋಷನ್ ಸಿನಿಮಾ ಅವಾರ್ಡ್ (ಡ್ರಾಮಾ) ‘ಆಪನ್​ಹೈಮರ್’ ಚಿತ್ರಕ್ಕೆ ಸಿಕ್ಕಿದೆ. ಅತ್ಯುತ್ತಮ ಪರ್ಫಾರ್ಮೆನ್ಸ್ ಅವಾರ್ಡ್​ ಕಿಲಿಯನ್ ಮರ್ಫಿಗೆ ಸಿಕ್ಕಿದೆ. ಅವರು ಆಪನ್​ಹೈಮರ್ ಪಾತ್ರದಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಸಿನಿಮಾ ಮಾತ್ರವಲ್ಲದೆ ಟಿವಿ ಸೀರಿಸ್​​ಗಳಿಗೂ ಇಲ್ಲಿ ಅವಾರ್ಡ್ ನೀಡಲಾಗಿದೆ.

ಇದನ್ನೂ ಓದಿ: ‘ಗೋಲ್ಡನ್ ಗ್ಲೋಬ್’: ವೃತ್ತಿಜೀವನದ ಆರಂಭದಲ್ಲಿ ಚಾನ್ಸ್​ ನೀಡಿದ ಅರ್ಜುನ್ ಸರ್ಜಾಗೆ ಕೀರವಾಣಿ ಧನ್ಯವಾದ

ಕಳೆದ ವರ್ಷ ಭಾರತೀಯರ ಪಾಲಿಗೆ ‘ಗೋಲ್ಡನ್ ಗ್ಲೋಬ್ಸ್’ ಅವಾರ್ಡ್ ವಿಶೇಷ ಎನಿಸಿಕೊಂಡಿತ್ತು. ‘ಆರ್​ಆರ್​ಆರ್’ ಸಿನಿಮಾ ಕೂಡ ಕೆಲವು ವಿಭಾಗಗಳಲ್ಲಿ ನಾಮಿನೇಟ್ ಆಗಿ ಅವಾರ್ಡ್ ಪಡೆದಿತ್ತು. ಇದನ್ನು ತಂಡ ಸಂಭ್ರಮಿಸಿತ್ತು. ಈ ವರ್ಷ ಭಾರತದ ಯಾವುದೇ ಸಿನಿಮಾಗಳು ನಾಮಿನೇಟ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?