AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ಆಸ್ಕರ್ ಪ್ರಶಸ್ತಿ ಪಡೆಯಲು ರಾಜಮೌಳಿ ಏಕೆ ವೇದಿಕೆ ಏರಿಲ್ಲ? ಇಲ್ಲಿದೆ ಉತ್ತರ

‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

SS Rajamouli: ಆಸ್ಕರ್ ಪ್ರಶಸ್ತಿ ಪಡೆಯಲು ರಾಜಮೌಳಿ ಏಕೆ ವೇದಿಕೆ ಏರಿಲ್ಲ? ಇಲ್ಲಿದೆ ಉತ್ತರ
ಚಂದ್ರಬೋಸ್​,ಕೀರವಾಣಿ, ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Mar 13, 2023 | 10:44 AM

Share

ರಾಜಮೌಳಿ (SS Rajamouli) ನಿರ್ದೇಶನದ ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಪ್ರಶಸ್ತಿ ಪಡೆದಿದೆ. ರಾಜಮೌಳಿ ಅವರ ಕನಸು ಈ ಚಿತ್ರದಿಂದ ನನಸಾಗಿದೆ. ಅಮೆರಿಕದ ಲಾಸ್ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ನಡೆದ ಅದ್ದೂರಿ ವೇದಿಕೆ ಏರಿ ಎಂಎಂ ಕೀರವಾಣಿ (MM Keeravani) ಹಾಗೂ ಹಾಡಿಗೆ ಸಾಹಿತ್ಯ ಬರೆದ ಚಂದ್ರಬೋಸ್ ಅವರು ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಆದರೆ, ರಾಜಮೌಳಿ ಅವರು ವೇದಿಕೆ ಹತ್ತಿಲ್ಲ.

‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು. ಆಸ್ಕರ್ ಪಡೆದುಕೊಳ್ಳಲು ರಾಜಮೌಳಿ ವೇದಿಕೆ ಏಕೆ ಏರಿಲ್ಲ ಎನ್ನುವ ಪ್ರಶ್ನೆ ಅನೇಕರಲ್ಲಿದೆ.

ಆಸ್ಕರ್​ ಇದು ಹಾಲಿವುಡ್​ ಪ್ರಶಸ್ತಿ. ಇಲ್ಲಿ ಭಾರತದ ಸಿನಿಮಾಗಳು ರೇಸ್​ಗೆ ಇಳಿಯೋದು, ಪ್ರಶಸ್ತಿ ಬಾಚಿಕೊಳ್ಳೋದು ಅಷ್ಟು ಸುಲಭದ ಮಾತಲ್ಲ. ಹೀಗಿದ್ದರೂ ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡಿಗೆ ಆಸ್ಕರ್ ಸಿಕ್ಕಿದೆ.  ‘ಫಾರ್ ಯುವರ್ ಕನ್ಸಿಡರೇಷನ್​’ ಕ್ಯಾಂಪೇನ್ ಮಾಡಿ ರಾಜಮೌಳಿ ಅವರು ‘ನಾಟು ನಾಟು..’ ಹಾಡನ್ನು ಆಸ್ಕರ್​ ಅವಾರ್ಡ್​ಗೆ ತೆಗೆದುಕೊಂಡರು. ಇದಕ್ಕಾಗಿ ಅವರು ಬರೋಬ್ಬರಿ 83 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎಂಬ ಮಾತಿದೆ. ಆದರೂ, ಅವರು ಪ್ರಶಸ್ತಿ ಪಡೆಯಲು ವೇದಿಕೆ ಏರಿಲ್ಲ. ಇದಕ್ಕೆ ಕಾರಣವೂ ಇದೆ.

ಇದನ್ನೂ ಓದಿ
Image
Oscar 2023 Winners List: ಈ ವರ್ಷ ಆಸ್ಕರ್ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ
Image
Oscar 2023: ಆಸ್ಕರ್ ಗೆದ್ದು ಬೀಗಿದ ‘ನಾಟು ನಾಟು..’ ಹಾಡು; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ
Image
The Elephant Whisperers: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ 

‘ಆರ್​ಆರ್​ಆರ್​’ ಚಿತ್ರವನ್ನು ನಿರ್ದೇಶನ ಮಾಡಿದ್ದು ರಾಜಮೌಳಿ. ಆಸ್ಕರ್ ಗೆದ್ದ ‘ನಾಟು ನಾಟು..’ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದು ಎಂ.ಎಂ. ಕೀರವಾಣಿ. ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಈ ಪ್ರಶಸ್ತಿ ಪಡೆದುಕೊಂಡಿದೆ. ಅವಾರ್ಡ್ ಪಡೆದುಕೊಳ್ಳುವಾಗ ಅದಕ್ಕೆ ಸಂಬಂಧಿಸಿದ ಕೆಲವೇ ಕೆಲವರು ವೇದಿಕೆ ಏರಬೇಕು. ಈ ಕಾರಣಕ್ಕೆ ‘ನಾಟು ನಾಟು..’ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ ಕೀರವಾಣಿ ಹಾಗೂ ಹಾಡಿಗೆ ಸಾಹಿತ್ಯ ಬರೆದ ಚಂದ್ರಬೋಸ್ ಮಾತ್ರ ಆಸ್ಕರ್ ವೇದಿಕೆ ಏರಿದ್ದಾರೆ. ಆಸ್ಕರ್​ ಅವಾರ್ಡ್​ ಕಾರ್ಯಕ್ರಮ ತುಂಬಾನೇ ಅಚ್ಚುಕಟ್ಟಾಗಿ ನಡೆಯುತ್ತದೆ. ಪ್ರಶಸ್ತಿ ಪಡೆದುಕೊಂಡವರು ದೀರ್ಘವಾಗಿ ಭಾಷಣ ಮಾಡುವಂತಿಲ್ಲ. ಹೀಗಾಗಿ, ಅಕಾಡೆಮಿ ಅವಾರ್ಡ್ ಪಡೆದ ನಂತರ ಕೆಲವೇ ನಿಮಿಷಗಳಲ್ಲಿ ತಮ್ಮ ಮಾತು ಮುಗಿಸುತ್ತಾರೆ.

ಇದನ್ನೂ ಓದಿ: Oscar 2023: ಆಸ್ಕರ್ ಗೆದ್ದು ಬೀಗಿದ ‘ನಾಟು ನಾಟು..’ ಹಾಡು; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ

ವೇದಿಕೆ ಏರಿದ ಕೀರವಾಣಿ ಏನ್ ಅಂದ್ರು?

‘ನಾಟು ನಾಟು ಹಾಡಿಗೆ ಆಸ್ಕರ್​ ಪ್ರಶಸ್ತಿ ಸಿಕ್ಕಿದ್ದಕ್ಕೆ ಖುಷಿಯಾಗಿದೆ.  ಆಸ್ಕರ್​ ಪ್ರಶಸ್ತಿಯ ಗರಿ ಪ್ರತಿ ಭಾರತೀಯ ಹೆಮ್ಮೆಪಡುವ ವಿಷಯ. ನನ್ನ ಮನಸ್ಸಿನಲ್ಲಿ ಒಂದೇ ಒಂದು ಆಸೆ ಇತ್ತು. ಆರ್​ಆರ್​ಆರ್​ ಚಿತ್ರ ಗೆಲ್ಲಬೇಕು, ಪ್ರತಿ ಭಾರತೀಯ ಹೆಮ್ಮೆ ಪಡಬೇಕು.  ಈ ಆಸೆ ಈಡೇರಿದೆ’ ಎಂದಿದ್ದಾರೆ ಕೀರವಾಣಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ