AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾ ಮುಷ್ಕರಕ್ಕೆ ತತ್ತರಿಸಿದ ಹಾಲಿವುಡ್​; ಬಿಗ್ ಬಜೆಟ್ ಚಿತ್ರದ ನಿರ್ಮಾಪಕರಿಗೆ ಆತಂಕ

ಈ ಮೊದಲು ಸಿನಿಮಾ ಬರಹಗಾರರು ಮುಷ್ಕರ ಆರಂಭಿಸಿದ್ದರು. ಇದರಿಂದ ಹಾಲಿವುಡ್ ತತ್ತರಿಸಿತ್ತು. ಈಗ ಇವರ ಜೊತೆ ನಟ, ನಟಿಯರು ಕೂಡ ಸೇರಿಕೊಂಡಿದ್ದಾರೆ.

ಮಹಾ ಮುಷ್ಕರಕ್ಕೆ ತತ್ತರಿಸಿದ ಹಾಲಿವುಡ್​; ಬಿಗ್ ಬಜೆಟ್ ಚಿತ್ರದ ನಿರ್ಮಾಪಕರಿಗೆ ಆತಂಕ
ಹಾಲಿವುಡ್ ಸ್ಟ್ರೈಕ್
ರಾಜೇಶ್ ದುಗ್ಗುಮನೆ
|

Updated on: Jul 15, 2023 | 7:59 AM

Share

ಹಾಲಿವುಡ್ (Hollywood)​ ಕಲಾವಿದರ ಮುಷ್ಕರ ಆರಂಭ ಆಗಿದೆ. ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಮುಷ್ಕರ ಶುರುವಾಗಿದೆ. ಇದನ್ನು ಮಹಾ ಮುಷ್ಕರ ಎಂದು ಕರೆಯಲಾಗಿದೆ. ಹಲವು ದಿನಗಳ ಕಾಲ ಈ ಮುಷ್ಕರ ಮುಂದುವರಿಯುವ ಸಾಧ್ಯತೆ ಇದೆ. ಹಾಲಿವುಡ್​ನ ಎಲ್ಲಾ ಸಿನಿಮಾಗಳ ಕೆಲಸ ವಿಳಂಬ ಆಗಲಿದೆ. ಇದರ ಪರಿಣಾಮ ಕೆಲ ತಿಂಗಳು ರಿಲೀಸ್​ಗೆ ಸಿನಿಮಾ ಇಲ್ಲದಂತೆಯೂ ಆಗಬಹುದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಈ ಮೊದಲು ಸಿನಿಮಾ ಬರಹಗಾರರು ಮುಷ್ಕರ ಆರಂಭಿಸಿದ್ದರು. ಇದರಿಂದ ಹಾಲಿವುಡ್ ತತ್ತರಿಸಿತ್ತು. ಈಗ ಇವರ ಜೊತೆ ನಟ, ನಟಿಯರು ಕೂಡ ಸೇರಿಕೊಂಡಿದ್ದಾರೆ. ಇವರು ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಉತ್ತಮ ವೇತನ ನೀಡಬೇಕು, ಬಂದ ಲಾಭದಲ್ಲಿ ಸರಿಯಾದ ರೀತಿಯಲ್ಲಿ ಪಾಲು ನೀಡಬೇಕು ಎಂದು ಕೋರಿದ್ದಾರೆ. ಇದರ ಜೊತೆಗೆ ಎಐ (ಕೃತಕ ಬುದ್ಧಿಮತ್ತೆ) ತಮ್ಮ ಕೆಲಸ ಕದಿಯುತ್ತಿದ್ದು, ಅದರಿಂದ ರಕ್ಷಣೆ ನೀಡಬೇಕು ಎಂಬುದು ಕಲಾವಿದರ ಕೋರಿಕೆ ಆಗಿದೆ.

ಹಾಲಿವುಡ್​ನಲ್ಲಿ ಈ ರೀತಿ ಬೃಹತ್ ಪ್ರತಿಭಟನೆ ನಡೆಯುತ್ತಿರುವುದು ಇದೇ ಮೊದಲೇನು ಅಲ್ಲ. 1960ರಲ್ಲಿ ಬೃಹತ್ ಮುಷ್ಕರ ನಡೆದಿತ್ತು. ಈ ವೇಳೆ ಕಲಾವಿದರು ಹಾಗೂ ಬರಹಗಾರರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದ್ದರು. ಈಗ ಒಟ್ಟಾಗಿ ಮುಷ್ಕರ ಕರೆದಿದ್ದಾರೆ. ಇದರಿಂದ ಬಿಗ್ ಬಜೆಟ್ ಚಿತ್ರಗಳಿಗೆ ಆತಂಕ ಎದುರಾಗಿದೆ.

ಇದನ್ನೂ ಓದಿ: ‘ಹಾಲಿವುಡ್​ ರೇಂಜ್​ನಲ್ಲಿ ಶೂಟ್ ಮಾಡಲಾಗಿದೆ’; ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಬಗ್ಗೆ ರಕ್ಷಿತ್ ಮೆಚ್ಚುಗೆ

ಸದ್ಯ, ಶೂಟಿಂಗ್, ರೆಕಾರ್ಡಿಂಗ್ ಸೇರಿ ಎಲ್ಲಾ ಕೆಲಸಗಳನ್ನು ನಿಲ್ಲಿಸಲಾಗಿದೆ. ಯಾವುದೇ ಕಲಾವಿದರೂ ಸಿನಿಮಾ ಪ್ರಚಾರಕ್ಕೆ ತೆರಳುತ್ತಿಲ್ಲ. ಇದು ದೊಡ್ಡ ಬಜೆಟ್ ಚಿತ್ರಗಳ ಆತಂಕ ಹೆಚ್ಚಿಸಿದೆ. ‘ಡೆಡ್​ಪೂಲ್ 3’, ‘ಅವತಾರ 3’ ಸೇರಿ ಅನೇಕ ಸಿನಿಮಾಗಳ ಕೆಲಸಗಳು ಅರ್ಧಕ್ಕೆ ನಿಂತಿದೆ. ಇದರಿಂದ ಸಿನಿಮಾ ಕೆಲಸಗಳು ಮತ್ತಷ್ಟು ವಿಳಂಬ ಆಗಲಿದ್ದು, ರಿಲೀಸ್ ದಿನಾಂಕ ಮುಂದಕ್ಕೆ ಹೋದರೂ ಅಚ್ಚರಿ ಏನಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ