AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾ ಮುಷ್ಕರಕ್ಕೆ ತತ್ತರಿಸಿದ ಹಾಲಿವುಡ್​; ಬಿಗ್ ಬಜೆಟ್ ಚಿತ್ರದ ನಿರ್ಮಾಪಕರಿಗೆ ಆತಂಕ

ಈ ಮೊದಲು ಸಿನಿಮಾ ಬರಹಗಾರರು ಮುಷ್ಕರ ಆರಂಭಿಸಿದ್ದರು. ಇದರಿಂದ ಹಾಲಿವುಡ್ ತತ್ತರಿಸಿತ್ತು. ಈಗ ಇವರ ಜೊತೆ ನಟ, ನಟಿಯರು ಕೂಡ ಸೇರಿಕೊಂಡಿದ್ದಾರೆ.

ಮಹಾ ಮುಷ್ಕರಕ್ಕೆ ತತ್ತರಿಸಿದ ಹಾಲಿವುಡ್​; ಬಿಗ್ ಬಜೆಟ್ ಚಿತ್ರದ ನಿರ್ಮಾಪಕರಿಗೆ ಆತಂಕ
ಹಾಲಿವುಡ್ ಸ್ಟ್ರೈಕ್
Follow us
ರಾಜೇಶ್ ದುಗ್ಗುಮನೆ
|

Updated on: Jul 15, 2023 | 7:59 AM

ಹಾಲಿವುಡ್ (Hollywood)​ ಕಲಾವಿದರ ಮುಷ್ಕರ ಆರಂಭ ಆಗಿದೆ. ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಮುಷ್ಕರ ಶುರುವಾಗಿದೆ. ಇದನ್ನು ಮಹಾ ಮುಷ್ಕರ ಎಂದು ಕರೆಯಲಾಗಿದೆ. ಹಲವು ದಿನಗಳ ಕಾಲ ಈ ಮುಷ್ಕರ ಮುಂದುವರಿಯುವ ಸಾಧ್ಯತೆ ಇದೆ. ಹಾಲಿವುಡ್​ನ ಎಲ್ಲಾ ಸಿನಿಮಾಗಳ ಕೆಲಸ ವಿಳಂಬ ಆಗಲಿದೆ. ಇದರ ಪರಿಣಾಮ ಕೆಲ ತಿಂಗಳು ರಿಲೀಸ್​ಗೆ ಸಿನಿಮಾ ಇಲ್ಲದಂತೆಯೂ ಆಗಬಹುದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಈ ಮೊದಲು ಸಿನಿಮಾ ಬರಹಗಾರರು ಮುಷ್ಕರ ಆರಂಭಿಸಿದ್ದರು. ಇದರಿಂದ ಹಾಲಿವುಡ್ ತತ್ತರಿಸಿತ್ತು. ಈಗ ಇವರ ಜೊತೆ ನಟ, ನಟಿಯರು ಕೂಡ ಸೇರಿಕೊಂಡಿದ್ದಾರೆ. ಇವರು ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಉತ್ತಮ ವೇತನ ನೀಡಬೇಕು, ಬಂದ ಲಾಭದಲ್ಲಿ ಸರಿಯಾದ ರೀತಿಯಲ್ಲಿ ಪಾಲು ನೀಡಬೇಕು ಎಂದು ಕೋರಿದ್ದಾರೆ. ಇದರ ಜೊತೆಗೆ ಎಐ (ಕೃತಕ ಬುದ್ಧಿಮತ್ತೆ) ತಮ್ಮ ಕೆಲಸ ಕದಿಯುತ್ತಿದ್ದು, ಅದರಿಂದ ರಕ್ಷಣೆ ನೀಡಬೇಕು ಎಂಬುದು ಕಲಾವಿದರ ಕೋರಿಕೆ ಆಗಿದೆ.

ಹಾಲಿವುಡ್​ನಲ್ಲಿ ಈ ರೀತಿ ಬೃಹತ್ ಪ್ರತಿಭಟನೆ ನಡೆಯುತ್ತಿರುವುದು ಇದೇ ಮೊದಲೇನು ಅಲ್ಲ. 1960ರಲ್ಲಿ ಬೃಹತ್ ಮುಷ್ಕರ ನಡೆದಿತ್ತು. ಈ ವೇಳೆ ಕಲಾವಿದರು ಹಾಗೂ ಬರಹಗಾರರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದ್ದರು. ಈಗ ಒಟ್ಟಾಗಿ ಮುಷ್ಕರ ಕರೆದಿದ್ದಾರೆ. ಇದರಿಂದ ಬಿಗ್ ಬಜೆಟ್ ಚಿತ್ರಗಳಿಗೆ ಆತಂಕ ಎದುರಾಗಿದೆ.

ಇದನ್ನೂ ಓದಿ: ‘ಹಾಲಿವುಡ್​ ರೇಂಜ್​ನಲ್ಲಿ ಶೂಟ್ ಮಾಡಲಾಗಿದೆ’; ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಬಗ್ಗೆ ರಕ್ಷಿತ್ ಮೆಚ್ಚುಗೆ

ಸದ್ಯ, ಶೂಟಿಂಗ್, ರೆಕಾರ್ಡಿಂಗ್ ಸೇರಿ ಎಲ್ಲಾ ಕೆಲಸಗಳನ್ನು ನಿಲ್ಲಿಸಲಾಗಿದೆ. ಯಾವುದೇ ಕಲಾವಿದರೂ ಸಿನಿಮಾ ಪ್ರಚಾರಕ್ಕೆ ತೆರಳುತ್ತಿಲ್ಲ. ಇದು ದೊಡ್ಡ ಬಜೆಟ್ ಚಿತ್ರಗಳ ಆತಂಕ ಹೆಚ್ಚಿಸಿದೆ. ‘ಡೆಡ್​ಪೂಲ್ 3’, ‘ಅವತಾರ 3’ ಸೇರಿ ಅನೇಕ ಸಿನಿಮಾಗಳ ಕೆಲಸಗಳು ಅರ್ಧಕ್ಕೆ ನಿಂತಿದೆ. ಇದರಿಂದ ಸಿನಿಮಾ ಕೆಲಸಗಳು ಮತ್ತಷ್ಟು ವಿಳಂಬ ಆಗಲಿದ್ದು, ರಿಲೀಸ್ ದಿನಾಂಕ ಮುಂದಕ್ಕೆ ಹೋದರೂ ಅಚ್ಚರಿ ಏನಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ