AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿವುಡ್ ಚಿತ್ರದ ಸಿದ್ಧತೆಗೆ ಭಗದ್ಗೀತೆ ಓದಿಕೊಂಡ ಐರಿಷ್ ನಟ ಕಿಲಿಯನ್ ಮರ್ಫಿ

ಕೇವಲ ಭಾರತ ಮಾತ್ರವಲ್ಲದೆ ವಿದೇಶದವರೂ ಕೂಡ ಭಗವದ್ಗೀತೆಯಿಂದ ಪ್ರಭಾವಿತರಾಗಿದ್ದಾರೆ ಎಂಬುದಕ್ಕೆ ಹೊಸ ಉದಾಹರಣೆಯೊಂದು ಸಿಕ್ಕಿದೆ.  

ಹಾಲಿವುಡ್ ಚಿತ್ರದ ಸಿದ್ಧತೆಗೆ ಭಗದ್ಗೀತೆ ಓದಿಕೊಂಡ ಐರಿಷ್ ನಟ ಕಿಲಿಯನ್ ಮರ್ಫಿ
ಕಿಲಿಯನ್ ಮರ್ಫಿ
ರಾಜೇಶ್ ದುಗ್ಗುಮನೆ
|

Updated on: Jul 18, 2023 | 8:40 AM

Share

ಹಾಲಿವುಡ್​ನ ಖ್ಯಾತ ನಿರ್ದೇಶಕ ಕ್ರಿಸ್ಟೋಫರ್ ನೋಲನ್ (Christopher Nolan)​ ನಿರ್ದೇಶನ ಮಾಡಿರುವ ‘ಆಪನ್​ಹೈಮರ್​’ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಜುಲೈ 21ರಂದು ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಭರ್ಜರಿಯಾಗಿ ಪ್ರಚಾರ ನೀಡಲಾಗುತ್ತಿದೆ. ಅಣು ಬಾಂಬ್​ ಕಂಡು ಹಿಡಿದ ಜೆ. ರಾಬರ್ಟ್​ ಆಪನ್​ಹೈಮರ್ ಅವರ ಬದುಕನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ ಅನ್ನೋದು ವಿಶೇಷ. ಈ ಚಿತ್ರದಲ್ಲಿ ಬಣ್ಣ ಹಚ್ಚಿರುವ ಐರಿಷ್ ನಟ ಕಿಲಿಯನ್ ಮರ್ಫಿ (Cillian Murphy) ಅವರು ಅಚ್ಚರಿಯ ವಿಚಾರ ಒಂದನ್ನು ರಿವೀಲ್ ಮಾಡಿದ್ದಾರೆ. ಅವರು ಪಾತ್ರಕ್ಕಾಗಿ ಸಿದ್ಧತೆ ಮಾಡಿಕೊಳ್ಳಲು ಭಗವದ್ಗೀತೆ ಓದಿದ್ದರಂತೆ.

ಭಗವದ್ಗೀತೆಯಲ್ಲಿ ಒಟ್ಟೂ 18 ಅಧ್ಯಾಯಗಳು ಇವೆ. ಮಹಾಭಾರತದ ಕುರುಕ್ಷೇತ್ರ ಯುಧ್ಧದ ಸಂದರ್ಭದಲ್ಲಿ ಕೃಷ್ಣನಿಂದ ಅರ್ಜುನನಿಗೆ ಮಾಡಲ್ಪಟ್ಟ ಉಪದೇಶವೇ ಭಗವದ್ಗೀತೆ. ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಇದೂ ಒಂದು. ಇದು ಅನೇಕರಿಗೆ ಸ್ಫೂರ್ತಿ ನೀಡಿದೆ. ಕೇವಲ ಭಾರತ ಮಾತ್ರವಲ್ಲದೆ ವಿದೇಶದವರೂ ಕೂಡ ಇದರಿಂದ ಪ್ರಭಾವಿತರಾಗಿದ್ದಾರೆ ಎಂಬುದಕ್ಕ ಹೊಸ ಉದಾಹರಣೆಯೊಂದು ಸಿಕ್ಕಿದೆ.

ರಾಬರ್ಟ್​ ಆಪನ್​ಹೈಮರ್​ ಪಾತ್ರಕ್ಕೆ ಕಿಲಿಯನ್​ ಮರ್ಫಿ ಬಣ್ಣ ಹಚ್ಚಿದ್ದಾರೆ. ಇದೊಂದು ಚಾಲೆಂಜಿಂಗ್ ಪಾತ್ರ. ಈ ಪಾತ್ರವನ್ನು ನಿರ್ವಹಿಸಲು ಹೇಗೆ ಸಾಧ್ಯವಾಯಿತು ಎನ್ನುವ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ‘ನಾನು ಸಿದ್ಧತೆ ವೇಳೆ ಭಗವದ್ಗೀತೆ ಓದುತ್ತಿದ್ದೆ. ನಿಜಕ್ಕೂ ಸ್ಫೂರ್ತಿದಾಯಕವಾಗಿತ್ತು. ಇದು ಅವರಿಗೆ (ಆಪನ್​ಹೈಮರ್​) ಒಂದು ಸಾಂತ್ವನ ಎಂದು ನಾನು ಭಾವಿಸುತ್ತೇನೆ. ಅವರಿಗೆ ಇದು ಒಂದು ರೀತಿಯಲ್ಲಿ ಅಗತ್ಯವಾಗಿತ್ತು. ಇದು ಅವರ ಜೀವನದುದ್ದಕ್ಕೂ ಬಹಳಷ್ಟು ಸಾಂತ್ವನವನ್ನು ನೀಡಿತು’ ಎಂದಿದ್ದಾರೆ ಕಿಲಿಯನ್.

ಇದನ್ನೂ ಓದಿ: ಕ್ರಿಸ್ಟೋಫರ್ ನೋಲನ್​ ನಿರ್ದೇಶನದ ‘ಆಪನ್​ಹೈಮರ್​’ ಸಿನಿಮಾ ಮೇಲೆ ಇಷ್ಟೊಂದು ಕ್ರೇಜ್​ ಹೆಚ್ಚಲು ಕಾರಣ ಏನು? ಇಲ್ಲಿದೆ ವಿವರ..

ಅಚ್ಚರಿಯ ವಿಷಯ ಎಂದರೆ ಆಪನ್ ​ಹೈಮರ್ ಸಂಸ್ಕೃತ ಕಲಿತಿದ್ದರು. ಅವರು ಕೂಡ ಭಗವದ್ಗೀತೆ ಓದಿದ್ದರು. ಅಣು ಬಾಂಬ್ ಪರೀಕ್ಷೆ ಮಾಡಿದ ನಂತರದಲ್ಲಿ ಆಪನ್​ ಹೈಮರ್ ಅವರು ಭಗವದ್ಗೀತೆಯಲ್ಲಿ ಬರುವ ಸಾಲನ್ನು ಉಲ್ಲೇಖಿಸಿದ್ದರು. ‘ನಾನು ಈಗ ಮೃತ್ಯು ಆಗಿದ್ದೇನೆ. ಪ್ರಪಂಚವನ್ನು ನಾಶ ಮಾಡುವವನು’ ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ