AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್​ ಖಾನ್​ರನ್ನು ‘ಟೈಟಾನಿಕ್’​ ನಿರ್ದೇಶಕನಿಗೆ ಹೋಲಿಸಿದ ಹಾಲಿವುಡ್​ ದಿಗ್ಗಜ; ಇಲ್ಲಿದೆ ಅಚ್ಚರಿ ವಿಚಾರ

Aamir Khan: ಆಮಿರ್ ಖಾನ್​ ಅವರು ಈಗ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಅದು ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಸಿನಿಮಾದ ಹಿಂದಿ ರಿಮೇಕ್​.

ಆಮಿರ್​ ಖಾನ್​ರನ್ನು ‘ಟೈಟಾನಿಕ್’​ ನಿರ್ದೇಶಕನಿಗೆ ಹೋಲಿಸಿದ ಹಾಲಿವುಡ್​ ದಿಗ್ಗಜ; ಇಲ್ಲಿದೆ ಅಚ್ಚರಿ ವಿಚಾರ
ಜೇಮ್ಸ್ ಕ್ಯಾಮೆರಾನ್, ಆಮಿರ್ ಖಾನ್​, ಸ್ಟೀವನ್​ ಸ್ಪೀಲ್​ಬರ್ಗ್
TV9 Web
| Edited By: |

Updated on: May 29, 2022 | 1:56 PM

Share

ನಟ ಆಮಿರ್​ ಖಾನ್ (Aamir Khan) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಸಿನಿಮಾಗಳನ್ನು ಜಗತ್ತಿನಾದ್ಯಂತ ಇರುವ ಪ್ರೇಕ್ಷಕರು ನೋಡುತ್ತಾರೆ. ಆಮಿರ್​ ಖಾನ್​ ನಟಿಸಿದ್ದ ‘ದಂಗಲ್​’ ಸಿನಿಮಾ ಚೀನಾದಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತ್ತು. ನಂತರ ‘ಸೀಕ್ರೆಟ್​ ಸೂಪರ್​ ಸ್ಟಾರ್​’ ಸಿನಿಮಾ ಕೂಡ ಸಖತ್​ ಸದ್ದು ಮಾಡಿತ್ತು. ಬರೀ ಚೀನಾದಲ್ಲಿ ಮಾತ್ರವಲ್ಲದೇ ಪಾಶ್ಚಿಮಾತ್ಯ ದೇಶಗಳಲ್ಲೂ ಆಮಿರ್ ಖಾನ್​ ಸಿನಿಮಾಗಳಿಗೆ ಮಾರುಕಟ್ಟೆ ಇದೆ. ಜನಸಾಮಾನ್ಯರು ಅಷ್ಟೇ ಅಲ್ಲದೇ ಹಾಲಿವುಡ್​ (Hollywood) ಸೆಲೆಬ್ರಿಟಿಗಳಿಗೂ ಆಮಿರ್​ ಖಾನ್​ ಬಗ್ಗೆ ತಿಳಿದಿದೆ. ಈ ಹಿಂದೆ ಖ್ಯಾತ ನಿರ್ದೇಶಕ ಸ್ಟೀವನ್​ ಸ್ಪೀಲ್​ಬರ್ಗ್​ ಅವರು ಆಮಿರ್​ ಖಾನ್​ರನ್ನು ‘ಟೈಟಾನಿಕ್​’ ಸಿನಿಮಾದ ನಿರ್ದೇಶಕ ಜೇಮ್ಸ್ ಕ್ಯಾಮೆರಾನ್​ಗೆ (James Cameron) ಹೋಲಿಸಿದ್ದರು. ಆ ಬಗ್ಗೆ ಇಲ್ಲಿದೆ ಪೂರ್ತಿ ವಿವರ..

ಆಮಿರ್ ಖಾನ್​ ಅವರು ಈಗ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಅದು ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಸಿನಿಮಾದ ಹಿಂದಿ ರಿಮೇಕ್​. ‘ಫಾರೆಸ್ಟ್​ ಗಂಪ್​’ ಚಿತ್ರದ ರಿಮೇಕ್​ ಹಕ್ಕುಗಳನ್ನು ಪಡೆಯಲು ಆಮಿರ್ ಖಾನ್​ ಸಾಕಷ್ಟು ಕಷ್ಟಪಟ್ಟಿದ್ದರು. ಆಗ ಅವರ ಸಹಾಯಕ್ಕೆ ಬಂದಿದ್ದೇ ‘ಜ್ಯುರಾಸಿಕ್​ ಪಾರ್ಕ್​’ ಸಿನಿಮಾ ನಿರ್ದೇಶಕ, ಹಾಲಿವುಡ್​ ದಿಗ್ಗಜ ಸ್ಟೀವನ್​ ಸ್ಪೀಲ್​ಬರ್ಗ್​. ಅದರ ಹಿಂದೆ ಒಂದು ಇಂಟರೆಸ್ಟಿಂಗ್​ ಘಟನೆ ಇದೆ.

ಇದನ್ನೂ ಓದಿ: ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರಕ್ಕೆ ಆಮಿರ್​, ಕರೀನಾ, ನಾಗ ಚೈತನ್ಯ ಪಡೆದ ಸಂಭಾವನೆ ಎಷ್ಟು ಕೋಟಿ?

ಇದನ್ನೂ ಓದಿ
Image
IPL Final ವೇಳೆ ರಿಲೀಸ್​ ಆಗತ್ತೆ ‘ಲಾಲ್​ ಸಿಂಗ್​ ಚಡ್ಡಾ’ ಟ್ರೇಲರ್​: ಇದು ಆಮಿರ್​ ಖಾನ್​ ಹೊಸ ಐಡಿಯಾ
Image
ಫ್ಯಾಮಿಲಿ ಜತೆ ಆಮಿರ್​ ಖಾನ್​ ಪುತ್ರಿ ಇರಾ ಖಾನ್​ ಬರ್ತ್​ಡೇ ಆಚರಣೆ; ಫೋಟೋ ನೋಡಿ ಫ್ಯಾನ್ಸ್​ ಹೇಳಿದ್ದೇನು?
Image
ನಟನೆಗೆ ವಿದಾಯ ಹೇಳಲು ಆಮಿರ್​ ಖಾನ್​ ನಿರ್ಧಾರ ಮಾಡಿದ್ದ ಸಂಗತಿ ಬಯಲು; ಮಾಜಿ ಪತ್ನಿ ಏನು ಹೇಳಿದ್ರು?
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​

‘ಫಾರೆಸ್ಟ್​ ಗಂಪ್​’ ರಿಮೇಕ್​ ಹಕ್ಕು ಪಡೆಯುವ ಸಲುವಾಗಿ ಅದರ ನಿರ್ದೇಶಕ ರಾಬರ್ಟ್​ ಝೆಮೆಕಿಸ್​ ಅವರನ್ನು ಭೇಟಿಯಾಗಲು ಆಮಿರ್​ ಖಾನ್​ ಬಯಸಿದ್ದರು. ಆದರೆ ಆಮಿರ್​ ಖಾನ್​ರನ್ನು ಭೇಟಿಯಾಗಲು ರಾರ್ಬಟ್​ ಝೆಮೆಕಿಸ್​ ಸಿದ್ಧರಿರಲಿಲ್ಲ. ಇದಕ್ಕಾಗಿ ಸ್ಟೀವನ್​ ಸ್ಪೀಲ್​ಬರ್ಗ್ ಅವರ ಸಹಾಯ ಪಡೆಯಲು ಆಮಿರ್​ ಖಾನ್​ ನಿರ್ಧರಿದರು. ಆಗ ‘ಬ್ರಿಜ್​ ಆಫ್​ ಸ್ಪೈಸ್​’ ಚಿತ್ರದ ಶೂಟಿಂಗ್​ನಲ್ಲಿ ಸ್ಟೀವನ್​ ಸ್ಪೀಲ್​ ಬ್ಯುಸಿ ಆಗಿದ್ದರು.

ಇದನ್ನೂ ಓದಿ: ‘ಕೆಜಿಎಫ್​ 2’ ಜತೆಗಿನ ರೇಸ್​​ನಿಂದ ಹಿಂದೆ ಸರಿದ ‘ಲಾಲ್​ ಸಿಂಗ್​ ಛಡ್ಡಾ’​; ಆಮಿರ್​ ಖಾನ್ ನೀಡಿದ ಕಾರಣ ಏನು?

‘ಬ್ರಿಜ್​ ಆಫ್​ ಸ್ಪೈಸ್​’ ಚಿತ್ರದಲ್ಲಿ ‘ಫಾರೆಸ್ಟ್​ ಗಂಪ್’ ಖ್ಯಾತಿಯ ನಟ ಟಾಮ್​ ಹ್ಯಾಂಕ್ಸ್​ ನಟಿಸುತ್ತಿದ್ದರು. ಅದೇ ಸೆಟ್​ನಲ್ಲಿ ಆಮಿರ್​ ಖಾನ್​ರನ್ನು ಟಾಮ್​ ಹ್ಯಾಂಕ್ಸ್​ಗೆ ಸ್ಟೀವನ್​ ಸ್ಪೀಲ್​ಬರ್ಗ್​ ಪರಿಚಯ ಮಾಡಿಕೊಟ್ಟರು. ‘ಇವರು ಭಾರತದ ಜೇಮ್ಸ್​ ಕ್ಯಾಮೆರಾನ್​ ಇದ್ದಂತೆ. ಯಾಕೆಂದರೆ ಇವರ ದಾಖಲೆಗಳನ್ನು ಇವರೇ ಮುರಿಯುತ್ತಾರೆ’ ಎಂದು ಸ್ಟೀವನ್​ ಸ್ಪೀಲ್​ಬರ್ಗ್ ಹೇಳಿದ್ದರಂತೆ. ಆಗ ಟಾಮ್​ ಹ್ಯಾಂಕ್ಸ್​ ನೀಡಿದ ಪ್ರತಿಕ್ರಿಯೆ ಕೂಡ ಅಚ್ಚರಿ ಮೂಡಿಸಿತ್ತು. ‘ನಾನು ಇವರನ್ನು ಬಲ್ಲೆ. ಇವರು ನಟಿಸಿದ ‘3 ಈಡಿಯಟ್ಸ್’​ ಚಿತ್ರವನ್ನು ಮೂರು ಬಾರಿ ನೋಡಿದ್ದೇನೆ’ ಎಂದು ಅವರು ಹೇಳಿದ್ದರು ಎಂಬ ವಿಷಯ ಕೇಳಿ ಆಮಿರ್ ಖಾನ್​ ಫ್ಯಾನ್ಸ್​ ಖುಷಿ ಪಟ್ಟಿದ್ದಾರೆ.

ಆಗಸ್ಟ್​ 11ರಂದು ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ತೆರೆಕಾಣಲಿದೆ. ಈ ಚಿತ್ರವನ್ನು ನೋಡಲು ಆಮಿರ್​ ಖಾನ್​ ಫ್ಯಾನ್ಸ್​ ಕಾದಿದ್ದಾರೆ. ಈ ಸಿನಿಮಾದಲ್ಲಿ ಕರೀನಾ ಕಪೂರ್​, ನಾಗ ಚೈತನ್ಯ ಕೂಡ ಅಭಿನಯಿಸಿದ್ದಾರೆ. ಹಲವು ಗೆಟಪ್​ಗಳಲ್ಲಿ ಆಮಿರ್​ ಖಾನ್​ ಕಾಣಿಸಿಕೊಳ್ಳಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!