ಆ ಡೀಲ್​​ನಿಂದ ಅಸಮಾಧಾನಗೊಂಡ ‘ಟೈಟಾನಿಕ್’ ನಿರ್ದೇಶಕ; ಹಾಲಿವುಡ್​​ಗೆ ಎಚ್ಚರಿಕೆ ಕೊಟ್ಟ ಜೇಮ್ಸ್ ಕ್ಯಾಮೆರಾನ್

ಜೇಮ್ಸ್ ಕ್ಯಾಮೆರಾನ್ ಅವರು ನೆಟ್‌ಫ್ಲಿಕ್ಸ್ ವಾರ್ನರ್ ಬ್ರದರ್ಸ್ ಖರೀದಿಸುವ ಪ್ರಸ್ತಾಪದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ಡೀಲ್ ಸಿನಿಮಾ ಉದ್ಯಮಕ್ಕೆ, ವಿಶೇಷವಾಗಿ ಚಿತ್ರಮಂದಿರಗಳಿಗೆ ದೊಡ್ಡ ಹಾನಿ ಮಾಡಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಒಟಿಟಿ ಕೇಂದ್ರೀಕೃತ ನಿರ್ಮಾಣಗಳಿಂದಾಗಿ ಚಿತ್ರ ನಿರ್ಮಾಣಗಳು ಕುಸಿಯಬಹುದು, ಉದ್ಯೋಗ ನಷ್ಟವಾಗಬಹುದು ಮತ್ತು ಸಾಂಪ್ರದಾಯಿಕ ಚಿತ್ರಮಂದಿರಗಳು ಮುಚ್ಚಬಹುದು ಎಂಬುದು ಅವರ ಪ್ರಮುಖ ಕಾಳಜಿ.

ಆ ಡೀಲ್​​ನಿಂದ ಅಸಮಾಧಾನಗೊಂಡ ‘ಟೈಟಾನಿಕ್’ ನಿರ್ದೇಶಕ; ಹಾಲಿವುಡ್​​ಗೆ ಎಚ್ಚರಿಕೆ ಕೊಟ್ಟ ಜೇಮ್ಸ್ ಕ್ಯಾಮೆರಾನ್
ಜೇಮ್ಸ್

Updated on: Feb 21, 2026 | 5:18 PM

ಹಾಲಿವುಡ್​​ನಲ್ಲಿ ‘ಟೈಟಾನಿಕ್’, ‘ಅವತಾರ್’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಜೇಮ್ಸ್ ಕ್ಯಾಮೆರಾನ್ ಅವರಿಗೆ ಇದೆ. ಅವರು ಸಿನಿಮಾ ರಂಗದ ಬಗ್ಗೆ ಕಾಳಜಿ ವಹಿಸುತ್ತಾರೆ. ಈಗ ಮುಂದಿನ ದಿನಗಳಲ್ಲಿ ಹಾಲಿವುಡ್​ಗೆ ಬರಬಹುದಾದ ತೊಂದರೆ ಬಗ್ಗೆ ಅವರು ಎಚ್ಚರಿಕೆ ನೀಡಿದ್ದಾರೆ. ಈ ಎಚ್ಚರಿಕೆ ನೀಡಲು ಕಾರಣ ಆಗಿದ್ದು, ಆ ಒಂದು ಡೀಲ್. ಅಷ್ಟಕ್ಕೂ ಜೇಮ್ಸ್ ಕ್ಯಾಮೆರಾನ್ (James Cameron) ಮಾತನಾಡಿದ್ದು, ಯಾವ ವಿಷಯದ ಬಗ್ಗೆ? ಇಲ್ಲಿದೆ ವಿವರ.

ಇತ್ತೀಚೆಗೆ ನೆಟ್​ಫ್ಲಿಕ್ಸ್ ಸಂಸ್ಥೆ ದೊಡ್ಡ ಮೊತ್ತ ನೀಡಿ ವಾರ್ನರ್ ಬ್ರೋಸ್​​ನ ಖರೀದಿ ಮಾಡಿತ್ತು. ಈ ಡೀಲ್​​ನಿಂದ ನೆಟ್​ಫ್ಲಿಕ್ಸ್ ದೊಡ್ಡ ಲಾಭ ಕಾಣುತ್ತಿದೆ. ಅತಿ ದೊಡ್ಡ ಸ್ಟುಡಿಯೋನ ತನ್ನ ತೆಕ್ಕೆಗೆ ತೆಗೆದುಕೊಂಡ ಖುಷಿ ನೆಟ್​ಫ್ಲಿಕ್ಸ್​ಗೆ ಇದೆ. ಆದರೆ, ಈ ಸಂಸ್ಥೆ ಒಟಿಟಿ ಚಿತ್ರಗಳನ್ನು ನಿರ್ಮಿಸುತ್ತದೆ. ಹೀಗಾಗಿ, ಆ ನಿಟ್ಟಿನಲ್ಲಿ ಮಾತ್ರ ಯೋಚಿಸುತ್ತದೆ ಎಂಬ ಭಯ ಜೆಮ್ಸ್ ಕ್ಯಾಮೆರೂನ್ ಅವರದ್ದು.

‘ವಾರ್ನರ್ ಬ್ರದರ್ಸ್ ಡಿಸ್ಕವರಿಯನ್ನು ನೆಟ್‌ಫ್ಲಿಕ್ಸ್‌ಗೆ ಮಾರಾಟ ಮಾಡುವ ಪ್ರಸ್ತಾಪವು ಸಿನಿಮಾ ರಂಗಕ್ಕೆ ಹಾನಿ ತರುವಂಥದ್ದು. ನಾನು ಚಿತ್ರರಂಗ ಹಾಗೂ ರಂಗಭೂಮಿಗೆ ನನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದೇನೆ. ನನ್ನ ಎಲ್ಲಾ ಸಿನಿಮಾಗಳು ಕೆಳಮಟ್ಟದ ವಿಡಯೋ ಮಾರುಕಟ್ಟೆಗಳಲ್ಲಿಯೂ ಪ್ರದರ್ಶನಗೊಳ್ಳುತ್ತವೆ ಅನ್ನೋದು ನನಗೆ ಗೊತ್ತು. ಆದರೆ ನನ್ನ ಮೊದಲ ಪ್ರೀತಿ ಸಿನಿಮಾ’ ಎಂದು ಜೇಮ್ಸ್ ಕ್ಯಾಮೆರಾನ್ ಅಮೇರಿಕನ್ ಸೆನೆಟರ್ ಮೈಕ್ ಲೀಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

ಇಂತಹ ಒಪ್ಪಂದ ಜಾರಿಗೆ ಬಂದರೆ ಚಿತ್ರಮಂದಿರಗಳು ಮುಚ್ಚಲ್ಪಡುತ್ತವೆ ಎಂದು ಜೇಮ್ಸ್ ಕ್ಯಾಮೆರಾನ್ ಆತಂಕ ಹೊರಹಾಕಿದ್ದಾರೆ. ಈ ಡೀಲ್​​ನಿಂದ ಕೆಲವೇ ಸಿನಿಮಾಗಳು ನಿರ್ಮಾಣ ಆಗುತ್ತವಂತೆ. ಸಾಕಷ್ಟು ಜನರಿಗೆ ಕೆಲಸ ಕೊಟ್ಟ ಚಿತ್ರರಂಗಕ್ಕೆ ಇದರಿಂದ ನಷ್ಟ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಾಲಿವುಡ್ ಫೇಮಸ್ ಸ್ಟುಡಿಯೋನ 74 ಲಕ್ಷ ಕೋಟಿ ರೂಪಾಯಿಗೆ ಖರೀದಿಸಿದ ನೆಟ್​ಫ್ಲಿಕ್ಸ್

‘ಉಳಿದಿರುವ ಕೆಲವೇ ಚಲನಚಿತ್ರ ನಿರ್ಮಾಣ ಸ್ಟುಡಿಯೋಗಳಲ್ಲಿ ವಾರ್ನರ್ ಬ್ರದರ್ಸ್ ಒಂದಾಗಿದೆ. ಅದು ಕೂಡ ಪಥವನ್ನು ಬದಲಾಯಿಸಿದರೆ ಚಿತ್ರರಂಗ ಸಾಕಷ್ಟು ನಷ್ಟ ಅನುಭವಿಸಲಿದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us