AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಪನ್​ಹೈಮರ್​ ಚಿತ್ರದಲ್ಲಿ ಭಗವದ್ಗೀತೆ ದೃಶ್ಯವೇ ನನ್ನ ಫೇವರಿಟ್​’: ವಿಮರ್ಶೆ ತಿಳಿಸಿದ ಕಂಗನಾ ರಣಾವತ್​

Bhagavad Gita: ಭಗವದ್ಗೀತೆಗೆ ಸಂಬಂಧಿಸಿದಂತೆ ವಿವಾದಕ್ಕೆ ಕಾರಣ ಆಗುವಂತಹ ದೃಶ್ಯ ‘ಆಪನ್​ಹೈಮರ್​’ ಸಿನಿಮಾದಲ್ಲಿದೆ. ಅದು ತಮ್ಮ ಇಷ್ಟದ ದೃಶ್ಯ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

‘ಆಪನ್​ಹೈಮರ್​ ಚಿತ್ರದಲ್ಲಿ ಭಗವದ್ಗೀತೆ ದೃಶ್ಯವೇ ನನ್ನ ಫೇವರಿಟ್​’: ವಿಮರ್ಶೆ ತಿಳಿಸಿದ ಕಂಗನಾ ರಣಾವತ್​
ಕಂಗನಾ ರಣಾವತ್​, ಕಿಲಿಯನ್​ ಮರ್ಫಿ
ಮದನ್​ ಕುಮಾರ್​
|

Updated on: Jul 31, 2023 | 9:42 PM

Share

ನಟಿ ಕಂಗನಾ ರಣಾವತ್​ (Kangana Ranaut) ಅವರು ಯಾವಾಗ, ಯಾವ ರೀತಿಯ ಹೇಳಿಕೆ ನೀಡುತ್ತಾರೆ ಎಂಬುದೇ ಅರ್ಥವಾಗುವುದಿಲ್ಲ. ಒಂದಷ್ಟು ದಿನಗಳ ಕಾಲ ಅವರು ಹಾಲಿವುಡ್​ ಸಿನಿಮಾಗಳ ವಿರುದ್ಧ ಮಾತನಾಡಿದ್ದರು. ಈಗ ಏಕಾಏಕಿ ಅವರು ‘ಆಪನ್​ಹೈಮರ್​’ (Oppenheimer) ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ಈ ಸಿನಿಮಾವನ್ನು ಅವರು ವೀಕ್ಷಿಸಿದ್ದಾರೆ. ನಿರ್ದೇಶಕ ಕ್ರಿಸ್ಟೋಫರ್​ ನೋಲನ್​ (Christopher Nolan) ಅವರ ಸಿನಿಮಾಗಳಲ್ಲಿ ಇದೇ ಬೆಸ್ಟ್​ ಚಿತ್ರ ಎಂದು ಕಂಗನಾ ರಣಾವತ್​ ಹೊಗಳಿದ್ದಾರೆ. ಸಿನಿಮಾ ನೋಡಿದ ಬಳಿಕ ವಿಡಿಯೋ ಮೂಲಕ ತಮ್ಮ ಅನಿಸಿಕೆಯನ್ನು ಅವರು ಹಂಚಿಕೊಂಡಿದ್ದಾರೆ. ಒಂದಷ್ಟು ವಿವಾದ ಸೃಷ್ಟಿ ಮಾಡಿರುವ ಭಗವದ್ಗೀತೆಯ ದೃಶ್ಯದ ಬಗ್ಗೆಯೂ ಕಂಗನಾ ರಣಾವತ್​ ಅವರು ಮಾತನಾಡಿದ್ದಾರೆ.

ಅಣು ಬಾಂಬ್​ ಕಂಡುಹಿಡಿದ ವಿಜ್ಞಾನಿ ಜೆ. ರಾಬರ್ಟ್​ ಆಪನ್​ಹೈಮರ್​ ಅವರ ಜೀವನದ ವಿವರಗಳನ್ನು ಆಧರಿಸಿ ‘ಆಪನ್​ಹೈಮರ್​’ ಸಿನಿಮಾ ಮೂಡಿಬಂದಿದೆ. ಆಪನ್​ಹೈಮರ್​ ಅವರ ಪಾತ್ರವನ್ನು ಕಿಲಿಯನ್​ ಮರ್ಫಿ ನಿಭಾಯಿಸಿದ್ದಾರೆ. ವಿಶ್ವಾದ್ಯಂತ ಬಿಡುಗಡೆ ಆಗಿರುವ ಈ ಸಿನಿಮಾಗೆ ಜನಮೆಚ್ಚುಗೆ ಸಿಕ್ಕಿದೆ. ಭಾರತದಲ್ಲೂ ಪ್ರೇಕ್ಷಕರು ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ‘ಆಪನ್​ಹೈಮರ್​’ ಉತ್ತಮವಾಗಿ ಕಮಾಯಿ ಮಾಡಿದೆ. ಕಂಗನಾ ರಣಾವತ್​ ಅವರಿಗೂ ಈ ಸಿನಿಮಾ ಇಷ್ಟವಾಗಿದೆ. ಅದನ್ನು ಅವರು ವಿಡಿಯೋ ಮೂಲಕ ತಿಳಿಸಿದ್ದಾರೆ.

‘ಆಪನ್​ಹೈಮರ್​’ ಸಿನಿಮಾದ ಕಥೆ ಏನು? ಯಾವೆಲ್ಲ ಅಂಶಗಳ ಬಗ್ಗೆ ಈ ಸಿನಿಮಾದಲ್ಲಿ ಚರ್ಚೆ ಮಾಡಲಾಗಿದೆ? ತಮಗೆ ಯಾಕೆ ಈ ಸಿನಿಮಾ ಇಷ್ಟ ಆಯಿತು ಎಂಬಿತ್ಯಾದಿ ಅಂಶಗಳನ್ನು ಕಂಗನಾ ರಣಾವತ್ ಅವರು ವಿವರಿಸಿದ್ದಾರೆ. ‘ಭಗವದ್ಗೀತೆಯ ಉಲ್ಲೇಖ ಇರುವ ದೃಶ್ಯವೇ ನನ್ನ ಫೇವರಿಟ್​’ ಎಂದು ಅವರು ಹೇಳಿದ್ದಾರೆ. ‘ಇದು ಒಳ್ಳೆಯ ಸಿನಿಮಾ. ಎಲ್ಲರೂ ಹೋಗಿ ನೋಡಿ’ ಎಂದು ಕೂಡ ಕಂಗನಾ ಶಿಫಾರಸು ಮಾಡಿದ್ದಾರೆ.

ಇದನ್ನೂ ಓದಿ: Ram Gopal Varma: ‘ಆಪನ್​ಹೈಮರ್​’ ಚಿತ್ರದಲ್ಲಿನ ಭಗವದ್ಗೀತೆ ಕುರಿತ ವಿವಾದಾತ್ಮಕ ದೃಶ್ಯದ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಪ್ರತಿಕ್ರಿಯೆ

ಪ್ರೇಯಸಿಯ ಜೊತೆ ಲೈಂಗಿಕ ಕ್ರಿಯೆ ನಡೆಸುವಾಗ ಆಪನ್​ಹೈಮರ್​ ಅವರು ಭಗವದ್ಗೀತೆಯ ಸಾಲುಗಳನ್ನು ಓದುವ ದೃಶ್ಯ ಈ ಸಿನಿಮಾದಲ್ಲಿ ಇದೆ. ಅದಕ್ಕೆ ಭಾರತದಲ್ಲಿ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತದೆ ಎಂದು ಆಕ್ಷೇಪಿಸಲಾಗಿದೆ. ಈ ನಡುವೆ ಕಂಗನಾ ರಣಾವತ್​ ಅವರು ಇಂಥ ಹೇಳಿಕೆ ನೀಡಿರುವುದು ಅಚ್ಚರಿಗೆ ಕಾರಣ ಆಗಿದೆ. ಕಂಗನಾ ಹೇಳಿಕೆಗೆ ಕೆಲವರು ಸಹಮತ ಸೂಚಿಸಿದ್ದಾರೆ. ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ