AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿವುಡ್​ಗೆ ಬಿತ್ತು ಬೆಂಕಿ, ಪ್ರಾಣ ಉಳಿಸಿಕೊಳ್ಳಲು ಊರು ಬಿಟ್ಟ ಸೆಲೆಬ್ರಿಟಿಗಳು

Hollywood Hills wild fire: ಲಾಸ್ ಏಂಜಲ್ಸ್​ನಲ್ಲಿ ಶುರುವಾಗಿರುವ ಭೀಕರ ಕಾಡ್ಗಿಚ್ಚು ಇದೀಗ ಹಾಲಿವುಡ್​ಗೆ ತಲುಪಿದೆ. ವಿಶ್ವದ ಖ್ಯಾತನಾಮರು ನೆಲೆಸಿರುವ ಹಾಲಿವುಡ್ ನಗರದವರೆಗೆ ಕಾಡ್ಗಿಚ್ಚು ವ್ಯಾಪಿಸಿದ್ದು, ಹಲವಾರು ಮಂದಿ ವಿಶ್ವಮಾನ್ಯ ಸೆಲೆಬ್ರಿಟಿಗಳು ಮನೆಗಳನ್ನು ತ್ಯಜಿಸಿ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ. ಇಲ್ಲಿದೆ ನೋಡಿ ಪೂರ್ಣ ವಿವರ...

ಹಾಲಿವುಡ್​ಗೆ ಬಿತ್ತು ಬೆಂಕಿ, ಪ್ರಾಣ ಉಳಿಸಿಕೊಳ್ಳಲು ಊರು ಬಿಟ್ಟ ಸೆಲೆಬ್ರಿಟಿಗಳು
Hollywood
ಮಂಜುನಾಥ ಸಿ.
|

Updated on:Jan 09, 2025 | 5:50 PM

Share

ಅಮೆರಿಕದ ಲಾಸ್ ಎಂಜಲ್ಸ್​ ನಲ್ಲಿ ಹಬ್ಬಿರುವ ಕಾಡ್ಗಿಚ್ಚು ಈಗಾಗಲೇ ಐದು ಮಂದಿಯ ಜೀವ ತೆಗೆದಿದ್ದು, ಲಕ್ಷಾಂತರ ಎಕರೆ ಕಾಡನ್ನು ನಾಶ ಮಾಡಿದೆ. ಗಂಟೆ ಗಂಟೆಗೂ ಬೆಂಕಿಯ ತೀವ್ರತೆ ಹೆಚ್ಚಾಗುತ್ತಲೇ ಇದ್ದು, ಇದೀಗ ಹಾಲಿವುಡ್ ಹಿಲ್ ಗೂ ಬೆಂಕಿ ವ್ಯಾಪಿಸಿದೆ. ಹಾಲಿವುಡ್ ಹಿಲ್, ವಿಶ್ವ ಪ್ರಸಿದ್ಧ ಹಾಲಿವುಡ್ ನಟ, ನಟಿಯರು ಮಾತ್ರವೇ ಅಲ್ಲದೆ ವಿಶ್ವದ ಟಾಪ್ ಉದ್ಯಮಿಗಳು, ಕ್ರೀಡಾಪಟುಗಳು ವಾಸಿಸುವ ಸ್ಥಳವಾಗಿದ್ದು, ಹಾಲಿವುಡ್​ ಹಿಲ್​ಗೆ ಬೆಂಕಿ ವ್ಯಾಪಿಸುತ್ತಿದ್ದಂತೆ ಹಾಲಿವುಡ್ ನಗರದ ಬಹುತೇಕರನ್ನು ಸ್ಥಳಾಂತರ ಮಾಡಲಾಗಿದೆ.

ಹಾಲಿವುಡ್​ ನಗರವಾಸಿಗಳಿಗೆ ‘ಇಮ್ಮಿಡಿಯಟ್ ಥ್ರೆಟ್​ ಟು ಲೈಫ್’ (ಜೀವ ಹೋಗುವ ತೀವ್ರತರವಾದ ಸಾಧ್ಯತೆ) ಎಚ್ಚರಿಕೆಯನ್ನು ನೀಡಲಾಗಿದ್ದು, ಹಾಲಿವುಡ್​ನ ಬಹುತೇಕ ಮನೆಗಳನ್ನು ಖಾಲಿ ಮಾಡಿಸಲಾಗಿದೆ. ಹಾಲಿವುಡ್​ ಹಿಲ್​ನ ಹತ್ತಿರದ ಕೆಲ ಬೃಹತ್ ಮನೆಗಳು ಈಗಾಗಲೇ ಬೆಂಕಿಗೆ ಆಹುತಿಯಾಗಿವೆ. ಹಾಲಿವುಡ್​ನ ರಸ್ತೆಗಳಲ್ಲೆಲ್ಲ ಧೂಳು ತುಂಬಿದ್ದು, ಸೂರ್ಯನ ಬೆಳಕು ಸಹ ತಲುಪದಂಥಾ ಸ್ಥಿತಿ ನಿರ್ಮಾಣವಾಗಿದೆ ಎಂದು ಕೆಲ ವರದಿಗಳು ಹೇಳುತ್ತಿವೆ.

ಇದನ್ನೂ ಓದಿ:ಹಾಲಿವುಡ್​ ಸಂಸ್ಥೆಯೊಂದಿಗೆ ಯಶ್ ಮಾತುಕತೆ, ಹಾಕಿದ್ದಾರೆ ದೊಡ್ಡ ಪ್ಲ್ಯಾನ್

ಹಾಲಿವುಡ್ ಹಿಲ್ ಮೇಲಿರುವ ಬೃಹತ್ ಮತ್ತು ವಿಶ್ವ ಪ್ರಸಿದ್ಧವಾಗಿರುವ ‘HOLLYWOOD’ ಸೈನ್ ಬೋರ್ಡ್​ಗೆ ಬೆಂಕಿ ಬಿದ್ದಿದೆ ಎಂದು ಹೇಳಲಾಗುತ್ತಿದ್ದು, ಅದರ ಕೆಲ ಚಿತ್ರಗಳು ಹರಿದಾಡುತ್ತಿವೆ. ಆದರೆ ಹಾಲಿವುಡ್ ಸೈನ್ ಬೋರ್ಡ್​ಗೆ ಬೆಂಕಿ ಬಿದ್ದಿಲ್ಲ, ಈಗ ಹರಿದಾಡುತ್ತಿರುವುದು ಎಐ ಚಿತ್ರ ಎಂಬ ಮಾತುಗಳು ಸಹ ಕೇಳಿ ಬರುತ್ತಿದೆ. ಆದರೆ ಹಾಲಿವುಡ್​ನ ರಸ್ತೆಯ ಕೆಲ ಚಿತ್ರ, ವಿಡಿಯೋಗಳು ಹರಿದಾಡುತ್ತಿದ್ದು, ಜನರು ಬೀದಿಗಳಲ್ಲಿ ಆತಂಕದಲ್ಲಿ ಓಡುತ್ತಿರುವ ವಿಡಿಯೋಗಳು ಆತಂಕ ಮೂಡಿಸಿವೆ.

ದಕ್ಷಿಣದ ಲಾಸ್ ಏಂಜಲ್ಸ್​ನಲ್ಲಿ ಈ ಕಾಡ್ಗಿಚ್ಚು ಪ್ರಾರಂಭವಾಗಿದ್ದು, ಈ ವರೆಗೆ ಐದು ಜನ ಕಾಡ್ಗಿಚ್ಚಿನಿಂದಾಗಿ ನಿಧನ ಹೊಂದಿದ್ದಾರೆ. 1200ಕ್ಕೂ ಹೆಚ್ಚು ಮನೆಗಳು ಸುಟ್ಟು ಹೋಗಿವೆ. ಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ ಲಕ್ಷಾಂತರ ಕೋಟಿ ಮೌಲ್ಯದ ನಷ್ಟವನ್ನು ಈ ಕಾಡ್ಗಿಚ್ಚು ಈಗಾಗಲೇ ಉಂಟು ಮಾಡಿದ್ದು, 2000 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ. ಗಾಳಿಯ ವೇಗ ಹೆಚ್ಚಾಗಿರುವ ಕಾರಣ ಕಾಡ್ಗಿಚ್ಚು ಬಲು ಬೇಗನೆ ಹಬ್ಬುತ್ತಿದ್ದು, ಬೆಂಕಿ ಇನ್ನೂ ತಹಬದಿಗೆ ಬಂದಿಲ್ಲ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Thu, 9 January 25

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ