ಬರೋಬ್ಬರಿ 68 ಲಕ್ಷ ರೂಪಾಯಿಗೆ ಮಾರಾಟವಾಯ್ತು ಮೈಕಲ್ ಜಾಕ್ಸನ್ ಧರಿಸುತ್ತಿದ್ದ ಟೋಪಿ

Michael Jackson Hat: ಮಂಗಳವಾರ (ಸೆಪ್ಟೆಂಬರ್ 26) ಪ್ಯಾರಿಸ್​ನಲ್ಲಿ ಮೈಕಲ್ ಜಾಕ್ಸನ್ ಟೋಪಿಯನ್ನು ಹರಾಜಿಗೆ ಇಡಲಾಗಿತ್ತು. ಈ ಟೋಪಿ ಬರೋಬ್ಬರಿ 68 ಲಕ್ಷ ರೂಪಾಯಿಗೆ ಹರಾಜಾಗಿದೆ. ಈ ಮೊತ್ತ ಕೇಳಿ ಅನೇಕರಿಗೆ ಶಾಕ್ ಆಗಿದೆ.

ಬರೋಬ್ಬರಿ 68 ಲಕ್ಷ ರೂಪಾಯಿಗೆ ಮಾರಾಟವಾಯ್ತು ಮೈಕಲ್ ಜಾಕ್ಸನ್ ಧರಿಸುತ್ತಿದ್ದ ಟೋಪಿ
ಮೈಕಲ್ ಜಾಕ್ಸನ್
Follow us
| Updated By: Digi Tech Desk

Updated on:Sep 27, 2023 | 11:35 AM

ಸೆಲೆಬ್ರಿಟಿಗಳು ಬಳಕೆ ಮಾಡುತ್ತಿದ್ದ ವಸ್ತುಗಳಿಗೆ ಭರ್ಜರಿ ಬೆಲೆ ಇರುತ್ತದೆ. ಅದನ್ನು ಹರಾಜಿಗೆ ಇಟ್ಟರಂತೂ ಅಭಿಮಾನಿಗಳು ಎಷ್ಟು ದೊಡ್ಡ ಮೊತ್ತಕ್ಕಾದರೂ ಅದನ್ನು ಖರೀದಿಸಲು ಮುಂದೆ ಬರುತ್ತಾರೆ. ಈಗ ವಿಶ್ವ ಕಂಡ ಅದ್ಭುತ ಡ್ಯಾನ್ಸರ್ ಮೈಕಲ್ ಜಾಕ್ಸನ್ (Michael Jackson) ಅವರು ಧರಿಸುತ್ತಿದ್ದ ಟೋಪಿ ಭರ್ಜರಿ ಮೊತ್ತಕ್ಕೆ ಮಾರಾಟ ಆಗಿದೆ. ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಚರ್ಚೆ ಹುಟ್ಟುಹಾಕಿದೆ. ಇದು ಖರೀದಿ ಆದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಮೈಕಲ್ ಜಾಕ್ಸನ್ ಅವರು ಒಳ್ಳೆಯ ಮೂನ್ ವಾಕ್ ಮಾಡುತ್ತಿದ್ದರು. ಅಷ್ಟೇ ಅಲ್ಲ, ಅವರು ಬಳಕೆ ಮಾಡುತ್ತಿದ್ದ ಟೋಪಿ ಕೂಡ ಗಮನ ಸೆಳೆದಿತ್ತು. ಮಂಗಳವಾರ (ಸೆಪ್ಟೆಂಬರ್ 26) ಪ್ಯಾರಿಸ್​ನಲ್ಲಿ ಮೈಕಲ್ ಜಾಕ್ಸನ್ ಟೋಪಿಯನ್ನು ಹರಾಜಿಗೆ ಇಡಲಾಗಿತ್ತು. ಈ ಟೋಪಿ ಬರೋಬ್ಬರಿ 68 ಲಕ್ಷ ರೂಪಾಯಿಗೆ ಹರಾಜಾಗಿದೆ. ಈ ಮೊತ್ತ ಕೇಳಿ ಅನೇಕರಿಗೆ ಶಾಕ್ ಆಗಿದೆ.

ಮೂನ್ ವಾಕ್ ಮಾಡುವಾಗ, ಡ್ಯಾನ್ಸ್ ಮಾಡುವಾಗ ಮೈಕಲ್ ಜಾಕ್ಸನ್ ಅವರು ಮುಖಕ್ಕೆ ಹ್ಯಾಟ್​ನ ಅಡ್ಡಲಾಗಿ ಇಟ್ಟುಕೊಳ್ಳುತ್ತಿದ್ದರು. ಈ ಕಾರಣದಿಂದ ಆ ಟೋಪಿ ಸಾಕಷ್ಟು ಸುದ್ದಿ ಆಗಿತ್ತು. ಈಗ ಇದು ಬರೋಬ್ಬರಿ 68 ಲಕ್ಷ ರೂಪಾಯಿಗೆ ಹರಾಜಾಗಿ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ಕಳೆದ ವರ್ಷ ಮೈಕಲ್ ಜಾಕ್ಸನ್ ಅವರ ಗಿಟಾರ್​ನ ಹರಾಜಿಗೆ ಇಡಲಾಗಿತ್ತು. ಮೂರು ಕೋಟಿ ರೂಪಾಯಿಗೆ ಈ ಗಿಟಾರ್ ಮಾರಾಟ ಆಗಿತ್ತು.

ಇದನ್ನೂ ಓದಿ: ಎಲ್ಲೆಡೆ ಸಖತ್ ಸದ್ದು ಮಾಡ್ತಿದೆ ಈ ‘ದೇಸಿ ಮೈಕಲ್ ಜಾಕ್ಸನ್’ ನೃತ್ಯ; ವಿಡಿಯೊ ನೋಡಿ

ಮೈಕಲ್ ಜಾಕ್ಸನ್ ಅವರು 1958, ಆಗಸ್ಟ್ 29ರಂದು ಅಮೆರಿಕದಲ್ಲಿ ಜನಿಸಿದರು. 50ನೇ ವಯಸ್ಸಿಗೆ ಅವರು ಮೃತಪಟ್ಟರು. ಅವರು ಸಾಕಷ್ಟು ವಿವಾದ ಕೂಡ ಮಾಡಿಕೊಂಡಿದ್ದಾರೆ. ಅವರು ಹಲವು ಬಾರಿ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾರೆ ಎಂದು ಕೂಡ ಹೇಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:33 am, Wed, 27 September 23

ತಾಜಾ ಸುದ್ದಿ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ