AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಿಷನ್ ಇಂಪಾಸಿಬಲ್’ ನಟ ಟಾಮ್​ ಕ್ರೂಸ್​ಗೆ ಬಾಲಿವುಡ್ ಸಿನಿಮಾ ಮಾಡುವಾಸೆ

ಟಾಮ್ ಕ್ರೂಸ್ ಅಭಿಮಾನಿಗಳು ‘ಮಿಷನ್ ಇಂಪಾಸಿಬಲ್: ದಿ ಫೈನಲ್ ರೆಕನಿಂಗ್’ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಭಾರತದಲ್ಲಿರುವ ಅಭಿಮಾನಿಗಳಿಗೆ ಟಾಮ್ ಕ್ರೂಸ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ತಮಗೆ ಬಾಲಿವುಡ್ ಶೈಲಿಯ ಸಿನಿಮಾ ಮಾಡುವ ಆಸೆ ಇದೆ ಎಂದು ಅವರು ಹೇಳಿಕೊಂಡಿದ್ದಾರೆ.

‘ಮಿಷನ್ ಇಂಪಾಸಿಬಲ್’ ನಟ ಟಾಮ್​ ಕ್ರೂಸ್​ಗೆ ಬಾಲಿವುಡ್ ಸಿನಿಮಾ ಮಾಡುವಾಸೆ
Tom Cruise
ಮದನ್​ ಕುಮಾರ್​
|

Updated on: May 18, 2025 | 8:48 AM

Share

ಹಾಲಿವುಡ್ ಟಾಮ್ ಕ್ರೂಸ್ (Tom Cruise) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ‘ಮಿಷನ್ ಇಂಪಾಸಿಬಲ್’, ‘ಟಾಪ್ ಗನ್’ ಮುಂತಾದ ಸಿನಿಮಾಗಳ ಮೂಲಕ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಸಿನಿಮಾಗಳು ಎಲ್ಲ ದೇಶಗಳಲ್ಲೂ ಭರ್ಜರಿ ಕಲೆಕ್ಷನ್ ಮಾಡುತ್ತವೆ. ಭಾರತದಲ್ಲಿ ಕೂಡ ಅವರನ್ನು ಇಷ್ಟಪಡುವ ಕೋಟ್ಯಂತರ ಮಂದಿ ಇದ್ದಾರೆ. ಈಗ ಟಾಮ್ ಕ್ರೂಸ್ ನಟನೆಯ ‘ಮಿಷನ್ ಇಂಪಾಸಿಬಲ್: ದಿ ಫೈನಲ್ ರೆಕನಿಂಗ್’ (Mission Impossible The Final Reckoning) ಸಿನಿಮಾ ಬಿಡುಗಡೆ ಆಗಿದೆ. ಈ ಸಂದರ್ಭದಲ್ಲಿ ಅವರು ಬಾಲಿವುಡ್ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ. ತಮಗೂ ಬಾಲಿವುಡ್​​ (Bollywood) ಶೈಲಿಯಲ್ಲಿ ಸಿನಿಮಾ ಮಾಡುವ ಆಸೆ ಇದೆ ಎಂದು ಹೇಳಿದ್ದಾರೆ. ಟಾಮ್ ಕ್ರೂಸ್ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

‘ನನಗೆ ಬಾಲಿವುಡ್ ಸಿನಿಮಾಗಳು ತುಂಬ ಇಷ್ಟ. ಬೇರೆ ಬೇರೆ ಸಂಸ್ಕೃತಿಯ ಜೊತೆ ಕೆಲಸ ಮಾಡುವುದು ನನಗೆ ಇಷ್ಟ. ಡ್ರಾಮಾ, ಕಾಮಿಡಿ ನಡುವೆ ತಕ್ಷಣಕ್ಕೆ ಬರುವ ಹಾಡುಗಳನ್ನು ನಾನು ಇಷ್ಟಪಡುತ್ತೇನೆ. ನಾನು ಸಂಗೀತಮಯ ಸಿನಿಮಾಗಳನ್ನು ನೋಡಿಕೊಂಡು ಬೆಳೆದವನು. ಡ್ರಾಮಾ ಕೂಡ ಇಷ್ಟಪಡುತ್ತೇನೆ. ನಿಮ್ಮ ಸಂಸ್ಕೃತಿ ಕೂಡ ಅದೇ ರೀತಿ ಇದೆ. ಅದನ್ನೇ ನಾನು ಮಾಡಬೇಕು. ಆ ರೀತಿಯ ಸಿನಿಮಾ ಮಾಡಬೇಕು ಎನ್ನುವ ಬಯಕೆ ನನಗೆ ಇದೆ’ ಎಂದು ಟಾಮ್ ಕ್ರೂಸ್ ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

‘ಭಾರತ ಒಂದು ಅದ್ಭತ ರಾಷ್ಟ್ರ. ನಾನು ತಾಜ್ ಮಹಲ್​​ಗೆ ತೆರಳಿದ್ದು, ಮುಂಬೈನಲ್ಲಿ ಪ್ರೀಮಿಯರ್ ಆಗಿದ್ದು ಎಲ್ಲವೂ ಸ್ಮರಣೀಯ ಕ್ಷಣಗಳಾಗಿವೆ’ ಎಂದಿದ್ದಾರೆ ಟಾಮ್ ಕ್ರೂಸ್. ವೈರಲ್ ಆಗಿರುವ ಈ ಸಂದರ್ಶನದಲ್ಲಿ ಅವರು ಹಿಂದಿ ಡೈಲಾಗ್ ಹೇಳುವ ಮೂಲಕ ಭಾರತದ ಅಭಿಮಾನಿಗಳನ್ನು ಇಂಪ್ರೆಸ್ ಮಾಡಿದ್ದಾರೆ. ಸದ್ಯ ಭಾರತದಲ್ಲಿ ‘ಮಿಷನ್ ಇಂಪಾಸಿಬಲ್: ದಿ ಫೈನಲ್ ರೆಕನಿಂಗ್’ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ.

ಭಾರತದಲ್ಲಿ ಟಾಮ್ ಕ್ರೂಸ್ ಅವರಿಗೆ ಸಾಕಷ್ಟು ಸ್ನೇಹಿತರು ಇದ್ದಾರೆ. ಹಾಗಾಗಿ ಮತ್ತೆ ಭಾರತಕ್ಕೆ ಭೇಟಿ ನೀಡಲು ತಾವು ಕಾಯುತ್ತಿರುವುದಾಗಿ ಹೇಳಿದ್ದಾರೆ. ಟಾಮ್ ಕ್ರೂಸ್ ಸಿನಿಮಾಗಳಲ್ಲಿ ಮೈ ನವಿರೇಳಿಸುವ ಸಾಹಸ ದೃಶ್ಯಗಳು ಇರುತ್ತವೆ. ರಿಯಲ್ ಆಗಿ ಸ್ಟಂಟ್ಸ್ ಮಾಡುವ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಾರೆ. ಒಂದು ವೇಳೆ ಅವರು ಬಾಲಿವುಡ್ ಸಿನಿಮಾ ಮಾಡಿದರೆ ಹೇಗಿರುತ್ತದೆ ಎಂಬ ಕೌತುಕ ಮೂಡಿದೆ.

ಇದನ್ನೂ ಓದಿ: ಹೇಗಿದೆ ‘ಮಿಷನ್ ಇಂಪಾಸಿಬಲ್’? ಸಿನಿಮಾ ನೋಡಿ ಶಾಕ್ ಆದ ನೆಟ್ಟಿಗರು

ಮೇ 17ರಂದು ‘ಮಿಷನ್ ಇಂಪಾಸಿಬಲ್: ದಿ ಫೈನಲ್ ರೆಕನಿಂಗ್’ ಸಿನಿಮಾ ಬಿಡುಗಡೆ ಆಗಿದೆ. ಭಾರತದಲ್ಲಿ ಹಿಂದಿ, ಇಂಗ್ಲಿಷ್, ತಮಿಳು ಹಾಗು ತೆಲುಗು ವರ್ಷಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಟಾಮ್ ಕ್ರೂಸ್ ಅವರ ಅಭಿಮಾನಿಗಳು ಸಿನಿಮಾವನ್ನು ಎಂಜಾಯ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ