‘ಮಗು ಮಲಗಿದೆ, ಕೂಗಬೇಡಿ’; ವಿಮಾನ ನಿಲ್ದಾಣದಲ್ಲಿ ನಿಕ್ ಜೋನಸ್ ವಿಶೇಷ ಮನವಿ

ಪ್ರಿಯಾಂಕಾ ಚೋಪ್ರಾ ಈ ಬಾರಿ ಹೋಳಿಯನ್ನು ಭಾರತದಲ್ಲಿ ಆಚರಿಸಿದ್ದಾರೆ. ಉದ್ಯಮಿ ಮುಖೇಶ್ ಅಂಬಾನಿ ಮನೆಯ ಹೋಳಿ ಆಚರಣೆಯಲ್ಲಿ ಭಾಗಿ ಆಗಿದ್ದರು. ದೆಹಲಿಯಲ್ಲಿ ಕುಟುಂಬದವರು ಆಯೋಜಿಸಿದ್ದ ಹೋಳಿ ಪಾರ್ಟಿಯಲ್ಲಿ ಅವರು ಭಾಗವಹಿಸಿದರು.

‘ಮಗು ಮಲಗಿದೆ, ಕೂಗಬೇಡಿ’; ವಿಮಾನ ನಿಲ್ದಾಣದಲ್ಲಿ ನಿಕ್ ಜೋನಸ್ ವಿಶೇಷ ಮನವಿ
ನಿಕ್-ಪ್ರಿಯಾಂಕಾ
Follow us
|

Updated on: Apr 01, 2024 | 7:27 AM

ಪ್ರಿಯಾಂಕಾ ಚೋಪ್ರಾ (Priyanka Chopra) ಹಾಗೂ ನಿಕ್ ಜೋನಸ್ ಸುಖವಾಗಿ ಸಂಸಾರ ನಡೆಸಲು ಸಾಧ್ಯವೇ ಇಲ್ಲ ಎಂದು ಅನೇಕರು ಹೇಳಿದ್ದು ಇದೆ. ಆದರೆ, ಇದೆಲ್ಲವನ್ನೂ ಈ ದಂಪತಿ ಸುಳ್ಳು ಮಾಡಿ ತೋರಿಸಿದ್ದಾರೆ. ಈ ದಂಪತಿ ಹಾಯಾಗಿ ಸಂಸಾರ ನಡೆಸುತ್ತಾ ಇದ್ದಾರೆ. ಆಗಾಗ ಇವರು ಭಾರತಕ್ಕೆ ಬರುತ್ತಾರೆ. ಅವರು ಇತ್ತೀಚೆಗೆ ಭಾರತಕ್ಕೆ ಆಗಮಿಸಿದ್ದರು. ಈ ವೇಳೆ ಹಲವು ಕಡೆಗಳಲ್ಲಿ ಸುತ್ತಾಡಿದ್ದರು. ಈಗ ಅವರು ಮರಳಿ ನ್ಯೂಯಾರ್ಕ್​ಗೆ ಹೊರಟಿದ್ದಾರೆ. ವಿಮಾನ ನಿಲ್ದಾಣದ ವಿಡಿಯೋ ವೈರಲ್ ಆಗಿದೆ.

ಪ್ರಿಯಾಂಕಾ ಚೋಪ್ರಾ ಈ ಬಾರಿ ಹೋಳಿಯನ್ನು ಭಾರತದಲ್ಲಿ ಆಚರಿಸಿದ್ದಾರೆ. ಉದ್ಯಮಿ ಮುಖೇಶ್ ಅಂಬಾನಿ ಮನೆಯ ಹೋಳಿ ಆಚರಣೆಯಲ್ಲಿ ಭಾಗಿ ಆಗಿದ್ದರು. ದೆಹಲಿಯಲ್ಲಿ ಕುಟುಂಬದವರು ಆಯೋಜಿಸಿದ್ದ ಹೋಳಿ ಪಾರ್ಟಿಯಲ್ಲಿ ಅವರು ಭಾಗವಹಿಸಿದರು. ಸಹೋದರಿ ಮನ್ನಾರಾ ಚೋಪ್ರಾನ ಬರ್ತ್​ಡೇ ಪಾರ್ಟಿಯಲ್ಲೂ ಹಾಜರಿ ಹಾಕಿದ್ದರು. ಪ್ರಿಯಾಂಕಾ ಹೋದಲ್ಲೆಲ್ಲ ನಿಕ್ ಜೋನಸ್ ಹಾಗೂ ಮಗಳು ಮಾಲ್ತಿ ಮೇರಿ ಕೂಡ ತೆರಳಿದ್ದಾರೆ. ಈಗ ಅವರು ಭಾರತದಿಂದ ಅಮೆರಿಕಕ್ಕೆ ಹೊರಟಿದ್ದಾರೆ.

ಮುಂಬೈ ವಿಮಾನ ನಿಲ್ದಾಣಕ್ಕೆ ಪ್ರಿಯಾಂಕಾ, ನಿಕ್ ಹಾಗೂ ಮಾಲ್ತಿ ಆಗಮಿಸಿದರು. ಮಾಲ್ತಿ ಅಮ್ಮನ ತೋಳಲ್ಲಿ ಮಲಗಿದ್ದರು. ಸಾಮಾನ್ಯವಾಗಿ ಸೆಲೆಬ್ರಿಟಿಗಳು ಕಂಡಾಗ ಪಾಪರಾಜಿಗಳು ಅರಚುತ್ತಾರೆ. ಪೋಸ್ ಕೊಡುವಂತೆ ಕೂಗುತ್ತಾರೆ. ಇದನ್ನು ಅರಿತಿದ್ದ ನಿಕ್ ಜೋನಸ್ ಅವರು ಕಾರಿನಿಂದ ಇಳಿಯುತ್ತಿದ್ದಂತೆ ತುಟಿಯ ಮೇಲೆ ಬೆರಳು ಇಟ್ಟು ಸುಮ್ಮನೆ ಇರುವಂತೆ ಸೂಚಿಸಿದರು. ಈ ವಿಡಿಯೋ ವೈರಲ್ ಆಗಿದೆ. ಇದನ್ನು ನೋಡಿದ ಅನೇಕರು ನಿಕ್​ನ ಬಾಯ್ತುಂಬ ಹೊಗಳಿದ್ದಾರೆ.

ಇದನ್ನೂ ಓದಿ: ಪತಿ ನಿಕ್ ಜೋನಸ್ ಜೊತೆ ಅಯೋಧ್ಯೆಗೆ ಭೇಟಿ ನೀಡಿದ ಪ್ರಿಯಾಂಕಾ ಚೋಪ್ರಾ

‘ನಿಕ್ ಅವರು ಪತ್ನಿ ಹಾಗೂ ಮಗುವನ್ನು ಎಷ್ಟು ಕೇರ್ ಮಾಡುತ್ತಾರೆ ಅನ್ನೋದಕ್ಕೆ ಇದುವೇ ಸಾಕ್ಷಿ’ ಎಂದು ಅವರು ಬರೆದುಕೊಂಡಿದ್ದಾರೆ. ‘ನಿಕ್ ಅವರು ತಂದೆಯಾಗಿ ತಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ. ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿ ಸೆಟಲ್ ಆಗಿದ್ದು, ಹಾಲಿವುಡ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ನಿಕ್ ಅವರು ಪಾಪ್ ಸಿಂಗರ್ ಆಗಿ ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್