AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘RRR​’ ಆಸ್ಕರ್ ಕನಸು ಭಗ್ನ; ಅಕಾಡೆಮಿ ಅವಾರ್ಡ್ಸ್​ಗೆ ಭಾರತದಿಂದ ಆಯ್ಕೆ ಆಯ್ತು ಗುಜರಾತಿ ಸಿನಿಮಾ

ಪ್ಯಾನ್​ ನಳಿನ್ ಅವರು ‘ಚೆಲ್ಲೋ ಶೋ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅನೇಕ ಸಿನಿಮೋತ್ಸವಗಳಲ್ಲಿ ಸಿನಿಮಾ ಪ್ರದರ್ಶನ ಕಂಡು ಗಮನ ಸೆಳೆದಿದೆ. ಪ್ರಶಸ್ತಿ ಕೂಡ ಗೆದ್ದಿದೆ.

‘RRR​’ ಆಸ್ಕರ್ ಕನಸು ಭಗ್ನ; ಅಕಾಡೆಮಿ ಅವಾರ್ಡ್ಸ್​ಗೆ ಭಾರತದಿಂದ ಆಯ್ಕೆ ಆಯ್ತು ಗುಜರಾತಿ ಸಿನಿಮಾ
chello show
TV9 Web
| Edited By: |

Updated on:Sep 21, 2022 | 3:17 PM

Share

‘ಆರ್​ಆರ್​ಆರ್​’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಆಸ್ಕರ್ ಪ್ರಶಸ್ತಿ ಗೆಲ್ಲಲಿ ಎಂದು ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಸೇರಿ ಅನೇಕರು ಬಯಸಿದ್ದರು. ಆದರೆ, ಈ ಕನಸು ಭಗ್ನವಾಗಿದೆ. ಈ ವರ್ಷ ಭಾರತದಿಂದ ಆಸ್ಕರ್​ ರೇಸ್​ಗೆ ಅಧಿಕೃತವಾಗಿ ಎಂಟ್ರಿಕೊಟ್ಟಿದ್ದು ಗುಜರಾತಿ ಸಿನಿಮಾ! ಹೌದು, ಗುಜರಾತಿ ಭಾಷೆಯ ‘ಚೆಲ್ಲೋ ಶೋ’ (Chhello Show) ಸಿನಿಮಾ ಭಾರತದಿಂದ ಆಸ್ಕರ್​ಗೆ ಎಂಟ್ರಿ ಕೊಟ್ಟಿದೆ. ಈ ವಿಚಾರಕ್ಕೆ ನಿರ್ದೇಶಕ ರಾಜಮೌಳಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬ ಕುತೂಹಲ ಸಿನಿಪ್ರಿಯರಲ್ಲಿ ಮೂಡಿದೆ.

ಅಕಾಡೆಮಿ ಅವಾರ್ಡ್ಸ್​​ನಲ್ಲಿ ‘ಅತ್ಯುತ್ತಮ ವಿದೇಶಿ ಫೀಚರ್​ ಸಿನಿಮಾ’ ವಿಭಾಗ ಇದೆ. ಈ ವಿಭಾಗದ ಅಡಿಯಲ್ಲಿ ಇಂಗ್ಲಿಷ್ ಅಲ್ಲದೆ ಬೇರೆ ಭಾಷೆಯ ಒಂದು ಸಿನಿಮಾಗೆ ಅವಾರ್ಡ್​ ಕೊಡಲಾಗುತ್ತದೆ. ಪ್ರತಿ ರಾಷ್ಟ್ರದವರು ಒಂದು ಚಿತ್ರವನ್ನು ಈ ವಿಭಾಗಕ್ಕೆ ಕಳುಹಿಸಿಕೊಡಬೇಕು. ಈ ಬಾರಿ ‘ಚೆಲ್ಲೋ ಶೋ’ ಸಿನಿಮಾ ಆಯ್ಕೆ ಆಗಿದ್ದು, ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ‘ಕೊನೆಯ ಸಿನಿಮಾ ಶೋ’ ಎಂಬ ಅರ್ಥವನ್ನು ಇದು ಹೊಂದಿದೆ.

ಪ್ಯಾನ್​ ನಳಿನ್ ಅವರು ‘ಚೆಲ್ಲೋ ಶೋ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅನೇಕ ಸಿನಿಮೋತ್ಸವಗಳಲ್ಲಿ ಸಿನಿಮಾ ಪ್ರದರ್ಶನ ಕಂಡು ಗಮನ ಸೆಳೆದಿದೆ. ಪ್ರಶಸ್ತಿ ಕೂಡ ಗೆದ್ದಿದೆ. ಈ ಚಿತ್ರ ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ಈ ಸಿನಿಮಾ ಅಕ್ಟೋಬರ್ 14ರಂದು ರಿಲೀಸ್ ಆಗಲಿದೆ. ಅದಕ್ಕೂ ಮೊದಲೇ ಈ ಚಿತ್ರ ಆಸ್ಕರ್​ ರೇಸ್​ನಲ್ಲಿ ಸ್ಥಾನ ಪಡೆದುಕೊಂಡಿರುವುದು ವಿಶೇಷ.

ಇದನ್ನೂ ಓದಿ
Image
RRR OTT Release: ‘ಆರ್​ಆರ್​ಆರ್​’ ಚಿತ್ರ ಒಟಿಟಿಯಲ್ಲಿ ಪ್ರಸಾರ ಆಗೋದು ಯಾವಾಗ? ಆ ದಿನಾಂಕಕ್ಕಾಗಿ ಕಾದಿರುವ ಫ್ಯಾನ್ಸ್​
Image
RRR 2: ಆರ್​ಆರ್​ಆರ್​ ಸೀಕ್ವೆಲ್​ ಮಾಡಲು ಉತ್ಸಾಹ ತೋರಿದ ರಾಜಮೌಳಿ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​
Image
‘RRR’ ಯಶಸ್ಸು; ಚಿತ್ರತಂಡಕ್ಕೆ 18 ಲಕ್ಷ ಮೌಲ್ಯದ ಚಿನ್ನದ ನಾಣ್ಯ ಉಡುಗೊರೆ ನೀಡಿದ ನಟ ರಾಮ್ ಚರಣ್
Image
RRR Twitter Review: ನಿದ್ದೆ ಬಿಟ್ಟು ‘ಆರ್​ಆರ್​ಆರ್​’ ಸಿನಿಮಾ ನೋಡಿ ಬಂದ ಪ್ರೇಕ್ಷಕರು ಏನಂದ್ರು?

‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​​ ರೇಸ್​ನಲ್ಲಿ ಸ್ಥಾನ ಪಡೆದುಕೊಳ್ಳಲಿದೆ, ಆಸ್ಕರ್​ ಗೆಲ್ಲಲಿದೆ ಎಂದು ರಾಜಮೌಳಿ ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಅನೇಕರು ಈ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ‘ಆರ್​ಆರ್​ಆರ್​’ ಚಿತ್ರಕ್ಕೆ ಅವಕಾಶ ನೀಡಲೇಬೇಕು ಎಂದು ಕೋರುತ್ತಿದ್ದಾರೆ.

ಇದನ್ನೂ ಓದಿ: RRR ಚಿತ್ರಕ್ಕೆ ಆಸ್ಕರ್​ ಸಿಕ್ಕರೆ ಏನಾಗುತ್ತದೆ? ಅಭಿಪ್ರಾಯ ತಿಳಿಸಿದ ನಿರ್ದೇಶಕ ರಾಜಮೌಳಿ

‘ಆರ್​ಆರ್​ಆರ್’ ಸಿನಿಮಾ ಮಾರ್ಚ್​ ತಿಂಗಳಲ್ಲಿ ರಿಲೀಸ್ ಆಯಿತು. ಈ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಬರೆಯಿತು. ವಿಶ್ವ ಬಾಕ್ಸ್​ ಆಫೀಸ್​ನಲ್ಲೂ ಚಿತ್ರ ಅಬ್ಬರಿಸಿತು. ಒಟಿಟಿಯಲ್ಲಿ ಸಿನಿಮಾ ರಿಲೀಸ್ ಆದ ಬಳಿಕೆ ವಿಶ್ವದ ನಾನಾ ಚಿತ್ರರಂಗದ ತಂತ್ರಜ್ಞರು, ನಟರು ಈ ಚಿತ್ರವನ್ನು ವೀಕ್ಷಿಸಿ ರಾಜಮೌಳಿ ಅವರನ್ನು ಹೊಗಳಿದ್ದರು.

Published On - 7:26 pm, Tue, 20 September 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?