AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘RRR​’ ಆಸ್ಕರ್ ಕನಸು ಭಗ್ನ; ಅಕಾಡೆಮಿ ಅವಾರ್ಡ್ಸ್​ಗೆ ಭಾರತದಿಂದ ಆಯ್ಕೆ ಆಯ್ತು ಗುಜರಾತಿ ಸಿನಿಮಾ

ಪ್ಯಾನ್​ ನಳಿನ್ ಅವರು ‘ಚೆಲ್ಲೋ ಶೋ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅನೇಕ ಸಿನಿಮೋತ್ಸವಗಳಲ್ಲಿ ಸಿನಿಮಾ ಪ್ರದರ್ಶನ ಕಂಡು ಗಮನ ಸೆಳೆದಿದೆ. ಪ್ರಶಸ್ತಿ ಕೂಡ ಗೆದ್ದಿದೆ.

‘RRR​’ ಆಸ್ಕರ್ ಕನಸು ಭಗ್ನ; ಅಕಾಡೆಮಿ ಅವಾರ್ಡ್ಸ್​ಗೆ ಭಾರತದಿಂದ ಆಯ್ಕೆ ಆಯ್ತು ಗುಜರಾತಿ ಸಿನಿಮಾ
chello show
TV9 Web
| Edited By: |

Updated on:Sep 21, 2022 | 3:17 PM

Share

‘ಆರ್​ಆರ್​ಆರ್​’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಆಸ್ಕರ್ ಪ್ರಶಸ್ತಿ ಗೆಲ್ಲಲಿ ಎಂದು ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಸೇರಿ ಅನೇಕರು ಬಯಸಿದ್ದರು. ಆದರೆ, ಈ ಕನಸು ಭಗ್ನವಾಗಿದೆ. ಈ ವರ್ಷ ಭಾರತದಿಂದ ಆಸ್ಕರ್​ ರೇಸ್​ಗೆ ಅಧಿಕೃತವಾಗಿ ಎಂಟ್ರಿಕೊಟ್ಟಿದ್ದು ಗುಜರಾತಿ ಸಿನಿಮಾ! ಹೌದು, ಗುಜರಾತಿ ಭಾಷೆಯ ‘ಚೆಲ್ಲೋ ಶೋ’ (Chhello Show) ಸಿನಿಮಾ ಭಾರತದಿಂದ ಆಸ್ಕರ್​ಗೆ ಎಂಟ್ರಿ ಕೊಟ್ಟಿದೆ. ಈ ವಿಚಾರಕ್ಕೆ ನಿರ್ದೇಶಕ ರಾಜಮೌಳಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬ ಕುತೂಹಲ ಸಿನಿಪ್ರಿಯರಲ್ಲಿ ಮೂಡಿದೆ.

ಅಕಾಡೆಮಿ ಅವಾರ್ಡ್ಸ್​​ನಲ್ಲಿ ‘ಅತ್ಯುತ್ತಮ ವಿದೇಶಿ ಫೀಚರ್​ ಸಿನಿಮಾ’ ವಿಭಾಗ ಇದೆ. ಈ ವಿಭಾಗದ ಅಡಿಯಲ್ಲಿ ಇಂಗ್ಲಿಷ್ ಅಲ್ಲದೆ ಬೇರೆ ಭಾಷೆಯ ಒಂದು ಸಿನಿಮಾಗೆ ಅವಾರ್ಡ್​ ಕೊಡಲಾಗುತ್ತದೆ. ಪ್ರತಿ ರಾಷ್ಟ್ರದವರು ಒಂದು ಚಿತ್ರವನ್ನು ಈ ವಿಭಾಗಕ್ಕೆ ಕಳುಹಿಸಿಕೊಡಬೇಕು. ಈ ಬಾರಿ ‘ಚೆಲ್ಲೋ ಶೋ’ ಸಿನಿಮಾ ಆಯ್ಕೆ ಆಗಿದ್ದು, ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ‘ಕೊನೆಯ ಸಿನಿಮಾ ಶೋ’ ಎಂಬ ಅರ್ಥವನ್ನು ಇದು ಹೊಂದಿದೆ.

ಪ್ಯಾನ್​ ನಳಿನ್ ಅವರು ‘ಚೆಲ್ಲೋ ಶೋ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅನೇಕ ಸಿನಿಮೋತ್ಸವಗಳಲ್ಲಿ ಸಿನಿಮಾ ಪ್ರದರ್ಶನ ಕಂಡು ಗಮನ ಸೆಳೆದಿದೆ. ಪ್ರಶಸ್ತಿ ಕೂಡ ಗೆದ್ದಿದೆ. ಈ ಚಿತ್ರ ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ಈ ಸಿನಿಮಾ ಅಕ್ಟೋಬರ್ 14ರಂದು ರಿಲೀಸ್ ಆಗಲಿದೆ. ಅದಕ್ಕೂ ಮೊದಲೇ ಈ ಚಿತ್ರ ಆಸ್ಕರ್​ ರೇಸ್​ನಲ್ಲಿ ಸ್ಥಾನ ಪಡೆದುಕೊಂಡಿರುವುದು ವಿಶೇಷ.

ಇದನ್ನೂ ಓದಿ
Image
RRR OTT Release: ‘ಆರ್​ಆರ್​ಆರ್​’ ಚಿತ್ರ ಒಟಿಟಿಯಲ್ಲಿ ಪ್ರಸಾರ ಆಗೋದು ಯಾವಾಗ? ಆ ದಿನಾಂಕಕ್ಕಾಗಿ ಕಾದಿರುವ ಫ್ಯಾನ್ಸ್​
Image
RRR 2: ಆರ್​ಆರ್​ಆರ್​ ಸೀಕ್ವೆಲ್​ ಮಾಡಲು ಉತ್ಸಾಹ ತೋರಿದ ರಾಜಮೌಳಿ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​
Image
‘RRR’ ಯಶಸ್ಸು; ಚಿತ್ರತಂಡಕ್ಕೆ 18 ಲಕ್ಷ ಮೌಲ್ಯದ ಚಿನ್ನದ ನಾಣ್ಯ ಉಡುಗೊರೆ ನೀಡಿದ ನಟ ರಾಮ್ ಚರಣ್
Image
RRR Twitter Review: ನಿದ್ದೆ ಬಿಟ್ಟು ‘ಆರ್​ಆರ್​ಆರ್​’ ಸಿನಿಮಾ ನೋಡಿ ಬಂದ ಪ್ರೇಕ್ಷಕರು ಏನಂದ್ರು?

‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​​ ರೇಸ್​ನಲ್ಲಿ ಸ್ಥಾನ ಪಡೆದುಕೊಳ್ಳಲಿದೆ, ಆಸ್ಕರ್​ ಗೆಲ್ಲಲಿದೆ ಎಂದು ರಾಜಮೌಳಿ ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಅನೇಕರು ಈ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ‘ಆರ್​ಆರ್​ಆರ್​’ ಚಿತ್ರಕ್ಕೆ ಅವಕಾಶ ನೀಡಲೇಬೇಕು ಎಂದು ಕೋರುತ್ತಿದ್ದಾರೆ.

ಇದನ್ನೂ ಓದಿ: RRR ಚಿತ್ರಕ್ಕೆ ಆಸ್ಕರ್​ ಸಿಕ್ಕರೆ ಏನಾಗುತ್ತದೆ? ಅಭಿಪ್ರಾಯ ತಿಳಿಸಿದ ನಿರ್ದೇಶಕ ರಾಜಮೌಳಿ

‘ಆರ್​ಆರ್​ಆರ್’ ಸಿನಿಮಾ ಮಾರ್ಚ್​ ತಿಂಗಳಲ್ಲಿ ರಿಲೀಸ್ ಆಯಿತು. ಈ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಬರೆಯಿತು. ವಿಶ್ವ ಬಾಕ್ಸ್​ ಆಫೀಸ್​ನಲ್ಲೂ ಚಿತ್ರ ಅಬ್ಬರಿಸಿತು. ಒಟಿಟಿಯಲ್ಲಿ ಸಿನಿಮಾ ರಿಲೀಸ್ ಆದ ಬಳಿಕೆ ವಿಶ್ವದ ನಾನಾ ಚಿತ್ರರಂಗದ ತಂತ್ರಜ್ಞರು, ನಟರು ಈ ಚಿತ್ರವನ್ನು ವೀಕ್ಷಿಸಿ ರಾಜಮೌಳಿ ಅವರನ್ನು ಹೊಗಳಿದ್ದರು.

Published On - 7:26 pm, Tue, 20 September 22

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​