AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರು ಭಾರತೀಯರನ್ನು ಫಾಲೋ ಮಾಡುತ್ತಿರುವ ‘ಅಬ್ಸೆಷನ್’ ಸಿನಿಮಾ ನಿರ್ದೇಶಕ

ಜಾಗತಿಕ ಮಟ್ಟದ ಖ್ಯಾತ ಹಾರರ್ ನಿರ್ದೇಶಕ ಕರಿ ಬಾರ್ಕರ್ ಅವರು ಭಾರತದ ಮೂವರು ಪ್ರತಿಭೆಗಳನ್ನು ಫಾಲೋ ಮಾಡುತ್ತಿದ್ದಾರೆ. ‘ಅಬ್ಸೆಷನ್’ ಸಿನಿಮಾ ಮೂಲಕ ಸೆನ್ಸೇಷನ್ ಸೃಷ್ಟಿ ಮಾಡಿರುವ ಕರಿ ಬಾರ್ಕರ್ ಅವರಿಗೆ ಭಾರತದಲ್ಲಿ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಎಲ್ಲ ಕಡೆಗಳಲ್ಲಿ ‘ಅಬ್ಸೆಷನ್’ ಬಗ್ಗೆಯೇ ಮಾತುಗಳು ಕೇಳಿಬರುತ್ತಿವೆ.

ಮೂವರು ಭಾರತೀಯರನ್ನು ಫಾಲೋ ಮಾಡುತ್ತಿರುವ ‘ಅಬ್ಸೆಷನ್’ ಸಿನಿಮಾ ನಿರ್ದೇಶಕ
Curry Barker
ಮದನ್​ ಕುಮಾರ್​
|

Updated on: Jun 26, 2026 | 9:45 PM

Share

ಮುಖ್ಯಾಂಶಗಳು

  • ಭಾರತದಲ್ಲಿ ಸೂಪರ್ ಹಿಟ್ ಆಗಿದೆ ಹಾಲಿವುಡ್​ನ ‘ಅಬ್ಸೆಷನ್’ ಸಿನಿಮಾ.
  • ಈ ಹಾರರ್ ಚಿತ್ರದ ನಿರ್ದೇಶಕ ಕರಿ ಬಾರ್ಕರ್ ಕೂಡ ಫೇಮಸ್ ಆಗಿದ್ದಾರೆ.
  • ಭಾರತದ ಕೇವಲ 3 ಸೆಲೆಬ್ರಿಟಿಗಳನ್ನು ಫಾಲೋ ಮಾಡ್ತಿರುವ ಕರಿ ಬಾರ್ಕರ್.

ತಮ್ಮ ಇತ್ತೀಚಿನ ಸೈಕಲಾಜಿಕಲ್ ಹಾರರ್ ಹಿಟ್ ಸಿನಿಮಾ ‘ಅಬ್ಸೆಷನ್’ (Obsession) ಮೂಲಕ ಜಾಗತಿಕ ಮಟ್ಟದಲ್ಲಿ ಭಾರಿ ಸೌಂಡ್ ಮಾಡಿರುವ 26 ವರ್ಷದ ಪ್ರತಿಭಾವಂತ ಹಾಲಿವುಡ್ ನಿರ್ದೇಶಕ ಕರಿ ಬಾರ್ಕರ್ (Curry Barker) ಈಗ ಸೋಷಿಯಲ್ ಮೀಡಿಯಾದಲ್ಲಿ ಹೊಸ ಕಾರಣಕ್ಕೆ ಸುದ್ದಿ ಆಗುತ್ತಿದ್ದಾರೆ. ಕರಿ ಬಾರ್ಕರ್ ಅವರ ಇನ್‌ಸ್ಟಾಗ್ರಾಮ್ ಫಾಲೋಯಿಂಗ್ ಲಿಸ್ಟ್ ಗಮನಿಸಿದರೆ, ಅವರಿಗೆ ಭಾರತದ ಚಿತ್ರರಂಗದೊಂದಿಗೆ ಇರುವ ಒಂದು ವಿಶೇಷ ನಂಟಿನ ಬಗ್ಗೆ ಗೊತ್ತಾಗಿದೆ. ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಕೇವಲ ಮೂವರು ಭಾರತೀಯ ಸೆಲೆಬ್ರಿಟಿಗಳನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ. ಅವರಲ್ಲಿ ಇಬ್ಬರು ನಟರಾದರೆ, ಮತ್ತೊಬ್ಬರು ಸಿನಿಮಾ ನಿರ್ದೇಶಕರಾಗಿದ್ದಾರೆ.

ಬಾಲಿವುಡ್ ಸ್ಟಾರ್ ನಟ ಕಾರ್ತಿಕ್ ಆರ್ಯನ್:

ಹಿಂದಿ ಚಿತ್ರರಂಗದ ಖ್ಯಾತ ನಟ ಕಾರ್ತಿಕ್ ಆರ್ಯನ್ ಅವರನ್ನು ಕರಿ ಬಾರ್ಕರ್ ಫಾಲೋ ಮಾಡುತ್ತಿರುವುದು ಅಷ್ಟೇನೂ ಆಶ್ಚರ್ಯ ತಂದಿಲ್ಲ. ಏಕೆಂದರೆ, ಕರಿ ಬಾರ್ಕರ್ ಅವರ ‘ಅಬ್ಸೆಷನ್’ ಸಿನಿಮಾ ಬಿಡುಗಡೆಯಾದಾಗ ಬಾಲಿವುಡ್‌ನಿಂದ ಅದಕ್ಕೆ ಮೊದಲ ಬಾರಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ್ದು ಇದೇ ಕಾರ್ತಿಕ್ ಆರ್ಯನ್. ಈ ಚಿತ್ರದ ಬಗ್ಗೆ ಇಂಟರ್ನೆಟ್‌ನಲ್ಲಿ ತಮಗಿರುವ ಅಪಾರ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದ ಕಾರ್ತಿಕ್, ‘ಬಹಳ ದಿನಗಳ ನಂತರ ಬಂದ ಅತ್ಯುತ್ತಮ ಹಾರರ್ ಚಿತ್ರಗಳಲ್ಲಿ ಇದು ಒಂದು. ನಾನು ನಿಜಕ್ಕೂ ‘ಅಬ್ಸೆಷನ್’ ಚಿತ್ರಕ್ಕೆ ಫಿದಾ ಆಗಿದ್ದೇನೆ. ಯಾರೂ ಇದನ್ನು ಮಿಸ್ ಮಾಡಬೇಡಿ’ ಎಂದು ಬರೆದುಕೊಂಡಿದ್ದರು.

ಉದಯೋನ್ಮುಖ ನಟಿ ರಿಚ್ಚಾ ಸಿನ್ಹಾ:

ಲಕ್ನೋ ಮೂಲದ ಉದಯೋನ್ಮುಖ ನಟಿ ರಿಚ್ಚಾ ಸಿನ್ಹಾ ಅವರು ಕರಿ ಬಾರ್ಕರ್ ಫಾಲೋ ಮಾಡುತ್ತಿರುವ ಎರಡನೇ ಭಾರತೀಯ ನಟಿ. ರಿಚ್ಚಾ ಅವರು ಸದ್ಯ ಬ್ರಿಟಿಷ್ ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾವೊಂದರಲ್ಲಿ ಅನ್ಯಾ ಎಂಬ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಸಿದ್ಧ ಪೈನ್‌ವುಡ್ ಸ್ಟುಡಿಯೋಸ್‌ನಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರವು, ಹೊಸ ದೇಶಕ್ಕೆ ತೆರಳುವ ಯುವತಿಯೊಬ್ಬಳು ಅಲ್ಲಿ ಎದುರಿಸುವ ಭಾವುಕ ಹಾಗೂ ರೋಮಾಂಚನಕಾರಿ ಸನ್ನಿವೇಶಗಳ ಸುತ್ತ ಸಾಗುತ್ತದೆ.

ಇದನ್ನೂ ಓದಿ: ಭಾರತದಲ್ಲಿ ಸೂಪರ್ ಹಿಟ್ ಆದ ಹಾಲಿವುಡ್ ಸಿನಿಮಾ ‘ಅಬ್ಸೆಷನ್’ ಒಟಿಟಿಗೆ ಬರೋದು ಯಾವಾಗ?

ಯುವ ನಿರ್ದೇಶಕ ಕುಶಾಲ್ ಚಾವ್ಲಾ:

ಕರಿ ಬಾರ್ಕರ್ ಲಿಸ್ಟ್‌ನಲ್ಲಿರುವ ಮೂರನೇ ಭಾರತೀಯ ಅಂದರೆ ಅದು ನಿರ್ದೇಶಕ ಕುಶಾಲ್ ಚಾವ್ಲಾ. ಅಂತಾರಾಷ್ಟ್ರೀಯ ಶಾರ್ಟ್ ಫಿಲ್ಮ್ ಮತ್ತು ಇಂಡಿ ಸಿನಿಮಾ ವಲಯದಲ್ಲಿ ಕುಶಾಲ್ ದೊಡ್ಡ ಹೆಸರು ಮಾಡುತ್ತಿದ್ದಾರೆ. ಇತ್ತೀಚೆಗೆ ಅವರು ನಿರ್ದೇಶಿಸಿದ ‘ಅನದರ್ ಟೈಮ್’ ಸಿನಿಮಾ ಲಾಸ್ ಏಂಜಲೀಸ್‌ನ ಪ್ರಖ್ಯಾತ ವಾರ್ನರ್ ಬ್ರದರ್ಸ್ ಸ್ಟುಡಿಯೋಸ್‌ನಲ್ಲಿ ಪ್ರೀಮಿಯರ್ ಆಗುವ ಮೂಲಕ ದೊಡ್ಡ ಮೈಲಿಗಲ್ಲು ಸ್ಥಾಪಿಸಿತ್ತು. ಈ ಚಿತ್ರವು ನ್ಯೂಯಾರ್ಕ್ ಇಂಟರ್ನ್ಯಾಷನಲ್ ಫಿಲ್ಮ್ ಅವಾರ್ಡ್ಸ್‌ನಲ್ಲಿ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಸೇರಿದಂತೆ ಜಾಗತಿಕವಾಗಿ 15ಕ್ಕೂ ಹೆಚ್ಚು ಗೌರವಗಳನ್ನು ಮುಡಿಗೇರಿಸಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್