AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oppenheimer: ‘ಆಪನ್​ಹೈಮರ್​’ ಕಲೆಕ್ಷನ್​ ಕುಸಿಯಲು ಭಗವದ್ಗೀತೆ ವಿವಾದವೇ ಕಾರಣವಾಯ್ತಾ? 6 ದಿನಕ್ಕೆ 67 ಕೋಟಿ ರೂ. ಗಳಿಕೆ

Oppenheimer Movie Collection: ಭಾರತದಲ್ಲಿ ‘ಆಪನ್​ಹೈಮರ್​’ ಸಿನಿಮಾ ಓಪನಿಂಗ್​ ಪಡೆದುಕೊಂಡ ಪರಿ ಗಮನಿಸಿದರೆ ಬಹಳ ವೇಗವಾಗಿ 100 ಕೋಟಿ ರೂಪಾಯಿ ಗಳಿಕೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸಾಧ್ಯವಾಗಿಲ್ಲ.

Oppenheimer: ‘ಆಪನ್​ಹೈಮರ್​’ ಕಲೆಕ್ಷನ್​ ಕುಸಿಯಲು ಭಗವದ್ಗೀತೆ ವಿವಾದವೇ ಕಾರಣವಾಯ್ತಾ? 6 ದಿನಕ್ಕೆ 67 ಕೋಟಿ ರೂ. ಗಳಿಕೆ
ಕಿಲಿಯನ್​ ಮರ್ಫಿ
ಮದನ್​ ಕುಮಾರ್​
|

Updated on: Jul 27, 2023 | 11:58 AM

Share

ಹಾಲಿವುಡ್​ನ ಆಪನ್​ಹೈಮರ್​’ (Oppenheimer) ಸಿನಿಮಾಗೆ ಭಾರತದಲ್ಲಿ ಭರ್ಜರಿ ಓಪನಿಂಗ್​ ಸಿಕ್ಕಿತು. ಜುಲೈ 21ರಂದು ತೆರೆಕಂಡ ಈ ಸಿನಿಮಾಗೆ ಮೊದಲ ದಿನ ಆಗಿದ್ದು 14.5 ಕೋಟಿ ರೂಪಾಯಿ ಕಲೆಕ್ಷನ್​. ಭಾನುವಾರ ಬರೋಬ್ಬರಿ 17.25 ಕೋಟಿ ರೂಪಾಯಿ ಗಳಿಕೆ ಆಯಿತು. ಆದರೆ ಸೋಮವಾರದ (ಜುಲೈ 24) ವೇಳೆಗೆ ಈ ಚಿತ್ರದ ಕಲೆಕ್ಷನ್​ ಶೇಕಡ 50ರಷ್ಟು ಕುಸಿಯಿತು. ಸೋಮವಾರ ಕಲೆಕ್ಟ್​ ಆಗಿದ್ದು 7 ಕೋಟಿ ರೂಪಾಯಿ ಮಾತ್ರ. ಅಂದಿನಿಂದ ಈ ಚಿತ್ರದ ಕಲೆಕ್ಷನ್​ (Oppenheimer Box Office Collection) ಕುಸಿಯುತ್ತಲೇ ಇದೆ. ಈ ಸಿನಿಮಾದಲ್ಲಿ ಇರುವ ಭಗವದ್ಗೀತೆ (Bhagavad Gita) ಕುರಿತ ದೃಶ್ಯಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಕಲೆಕ್ಷನ್​ ಕುಸಿಯಲು ಇದು ಕೂಡ ಕಾರಣ ಎಂದು ಹೇಳಲಾಗುತ್ತಿದೆ.

ಕ್ರಿಸ್ಟೋಫರ್​ ನೋಲನ್​ ಅವರು ‘ಆಪನ್​ಹೈಮರ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕಿಲಿಯನ್​ ಮರ್ಫಿ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ರಾಬರ್ಟ್​​ ಡೌನಿ ಜ್ಯೂನಿಯರ್​, ಎಮಿಲಿ ಬ್ಲಂಟ್​, ಮ್ಯಾಟ್​ ಡೇಮನ್​ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಓಪನಿಂಗ್​ ಪಡೆದುಕೊಂಡ ಪರಿ ಗಮನಿಸಿದರೆ ಬಹಳ ವೇಗವಾಗಿ 100 ಕೋಟಿ ರೂಪಾಯಿ ಗಳಿಕೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. 6 ದಿನಕ್ಕೆ ಒಟ್ಟು 67.85 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ.

ಇದನ್ನೂ ಓದಿ: Hostel Hudugaru Bekagiddare: ‘ಆಪನ್​ಹೈಮರ್​’, ‘ಬಾರ್ಬಿ’ ಚಿತ್ರವನ್ನೂ ಮೀರಿಸಿ ‘ಬುಕ್​ ಮೈ ಶೋ’ ರೇಟಿಂಗ್​ ಪಡೆದ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’

‘ಆಪನ್​ಹೈಮರ್​’ ಸಿನಿಮಾದ ಕಥಾನಾಯಕ ಲೈಂಗಿಕ ಕ್ರಿಯೆ ವೇಳೆ ಭಗವದ್ಗೀತೆ ಓದುವ ದೃಶ್ಯ ಇದೆ. ಇದು ಹಿಂದೂ ಧರ್ಮಕ್ಕೆ ಮಾಡಿದ ಅಪಮಾನ ಎಂದು ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆ ಕಾರಣದಿಂದಲೇ ಈ ಚಿತ್ರದ ಕಲೆಕ್ಷನ್​ ಕುಸಿಯುತ್ತಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ವಾರದ ದಿನಗಳಲ್ಲಿ ಈ ರೀತಿ ಕಲೆಕ್ಷನ್​ ಕುಸಿಯುವುದು ಸಹಜ ಎಂದು ಕೂಡ ಹೇಳಲಾಗುತ್ತಿದೆ. ಎರಡನೇ ವೀಕೆಂಡ್​ನಲ್ಲಿ ಮತ್ತೆ ‘ಆಪನ್​ಹೈಮರ್​’ ಸಿನಿಮಾದ ಗಳಿಕೆ ಹೆಚ್ಚುವ ಸಾಧ್ಯತೆ ಇದೆ.

ಇದನ್ನೂ ಓದಿ: Ram Gopal Varma: ‘ಆಪನ್​ಹೈಮರ್​’ ಚಿತ್ರದಲ್ಲಿನ ಭಗವದ್ಗೀತೆ ಕುರಿತ ವಿವಾದಾತ್ಮಕ ದೃಶ್ಯದ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಪ್ರತಿಕ್ರಿಯೆ

ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಅಣು ಬಾಂಬ್​ ಕಂಡುಹಿಡಿದ ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್​ ಆಪನ್​ಹೈಮರ್​ ಜೀವನದ ಕುರಿತು ಈ ಸಿನಿಮಾ ಮೂಡಿಬಂದಿದೆ. ವಿಶ್ವಾದ್ಯಂತ ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಕ್ರಿಸ್ಟೋಫರ್​ ನೋಲನ್​ ನಿರ್ದೇಶನದ ಸಿನಿಮಾ ಎಂಬ ಕಾರಣಕ್ಕೆ ಪ್ರೇಕ್ಷಕರು ‘ಆಪನ್​ಹೈಮರ್​’ ಬಗ್ಗೆ ಹೆಚ್ಚು ಆಸಕ್ತಿ ತೋರಿಸಿದ್ದಾರೆ. ಮೊದಲ ಮೂರು ದಿನ ಭಾರತ ಹಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು