AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oppenheimer: ‘ಆಪನ್​ಹೈಮರ್​’ ಕಲೆಕ್ಷನ್​ ಕುಸಿಯಲು ಭಗವದ್ಗೀತೆ ವಿವಾದವೇ ಕಾರಣವಾಯ್ತಾ? 6 ದಿನಕ್ಕೆ 67 ಕೋಟಿ ರೂ. ಗಳಿಕೆ

Oppenheimer Movie Collection: ಭಾರತದಲ್ಲಿ ‘ಆಪನ್​ಹೈಮರ್​’ ಸಿನಿಮಾ ಓಪನಿಂಗ್​ ಪಡೆದುಕೊಂಡ ಪರಿ ಗಮನಿಸಿದರೆ ಬಹಳ ವೇಗವಾಗಿ 100 ಕೋಟಿ ರೂಪಾಯಿ ಗಳಿಕೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸಾಧ್ಯವಾಗಿಲ್ಲ.

Oppenheimer: ‘ಆಪನ್​ಹೈಮರ್​’ ಕಲೆಕ್ಷನ್​ ಕುಸಿಯಲು ಭಗವದ್ಗೀತೆ ವಿವಾದವೇ ಕಾರಣವಾಯ್ತಾ? 6 ದಿನಕ್ಕೆ 67 ಕೋಟಿ ರೂ. ಗಳಿಕೆ
ಕಿಲಿಯನ್​ ಮರ್ಫಿ
Follow us
ಮದನ್​ ಕುಮಾರ್​
|

Updated on: Jul 27, 2023 | 11:58 AM

ಹಾಲಿವುಡ್​ನ ಆಪನ್​ಹೈಮರ್​’ (Oppenheimer) ಸಿನಿಮಾಗೆ ಭಾರತದಲ್ಲಿ ಭರ್ಜರಿ ಓಪನಿಂಗ್​ ಸಿಕ್ಕಿತು. ಜುಲೈ 21ರಂದು ತೆರೆಕಂಡ ಈ ಸಿನಿಮಾಗೆ ಮೊದಲ ದಿನ ಆಗಿದ್ದು 14.5 ಕೋಟಿ ರೂಪಾಯಿ ಕಲೆಕ್ಷನ್​. ಭಾನುವಾರ ಬರೋಬ್ಬರಿ 17.25 ಕೋಟಿ ರೂಪಾಯಿ ಗಳಿಕೆ ಆಯಿತು. ಆದರೆ ಸೋಮವಾರದ (ಜುಲೈ 24) ವೇಳೆಗೆ ಈ ಚಿತ್ರದ ಕಲೆಕ್ಷನ್​ ಶೇಕಡ 50ರಷ್ಟು ಕುಸಿಯಿತು. ಸೋಮವಾರ ಕಲೆಕ್ಟ್​ ಆಗಿದ್ದು 7 ಕೋಟಿ ರೂಪಾಯಿ ಮಾತ್ರ. ಅಂದಿನಿಂದ ಈ ಚಿತ್ರದ ಕಲೆಕ್ಷನ್​ (Oppenheimer Box Office Collection) ಕುಸಿಯುತ್ತಲೇ ಇದೆ. ಈ ಸಿನಿಮಾದಲ್ಲಿ ಇರುವ ಭಗವದ್ಗೀತೆ (Bhagavad Gita) ಕುರಿತ ದೃಶ್ಯಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಕಲೆಕ್ಷನ್​ ಕುಸಿಯಲು ಇದು ಕೂಡ ಕಾರಣ ಎಂದು ಹೇಳಲಾಗುತ್ತಿದೆ.

ಕ್ರಿಸ್ಟೋಫರ್​ ನೋಲನ್​ ಅವರು ‘ಆಪನ್​ಹೈಮರ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕಿಲಿಯನ್​ ಮರ್ಫಿ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ರಾಬರ್ಟ್​​ ಡೌನಿ ಜ್ಯೂನಿಯರ್​, ಎಮಿಲಿ ಬ್ಲಂಟ್​, ಮ್ಯಾಟ್​ ಡೇಮನ್​ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಓಪನಿಂಗ್​ ಪಡೆದುಕೊಂಡ ಪರಿ ಗಮನಿಸಿದರೆ ಬಹಳ ವೇಗವಾಗಿ 100 ಕೋಟಿ ರೂಪಾಯಿ ಗಳಿಕೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. 6 ದಿನಕ್ಕೆ ಒಟ್ಟು 67.85 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ.

ಇದನ್ನೂ ಓದಿ: Hostel Hudugaru Bekagiddare: ‘ಆಪನ್​ಹೈಮರ್​’, ‘ಬಾರ್ಬಿ’ ಚಿತ್ರವನ್ನೂ ಮೀರಿಸಿ ‘ಬುಕ್​ ಮೈ ಶೋ’ ರೇಟಿಂಗ್​ ಪಡೆದ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’

‘ಆಪನ್​ಹೈಮರ್​’ ಸಿನಿಮಾದ ಕಥಾನಾಯಕ ಲೈಂಗಿಕ ಕ್ರಿಯೆ ವೇಳೆ ಭಗವದ್ಗೀತೆ ಓದುವ ದೃಶ್ಯ ಇದೆ. ಇದು ಹಿಂದೂ ಧರ್ಮಕ್ಕೆ ಮಾಡಿದ ಅಪಮಾನ ಎಂದು ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆ ಕಾರಣದಿಂದಲೇ ಈ ಚಿತ್ರದ ಕಲೆಕ್ಷನ್​ ಕುಸಿಯುತ್ತಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ವಾರದ ದಿನಗಳಲ್ಲಿ ಈ ರೀತಿ ಕಲೆಕ್ಷನ್​ ಕುಸಿಯುವುದು ಸಹಜ ಎಂದು ಕೂಡ ಹೇಳಲಾಗುತ್ತಿದೆ. ಎರಡನೇ ವೀಕೆಂಡ್​ನಲ್ಲಿ ಮತ್ತೆ ‘ಆಪನ್​ಹೈಮರ್​’ ಸಿನಿಮಾದ ಗಳಿಕೆ ಹೆಚ್ಚುವ ಸಾಧ್ಯತೆ ಇದೆ.

ಇದನ್ನೂ ಓದಿ: Ram Gopal Varma: ‘ಆಪನ್​ಹೈಮರ್​’ ಚಿತ್ರದಲ್ಲಿನ ಭಗವದ್ಗೀತೆ ಕುರಿತ ವಿವಾದಾತ್ಮಕ ದೃಶ್ಯದ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಪ್ರತಿಕ್ರಿಯೆ

ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಅಣು ಬಾಂಬ್​ ಕಂಡುಹಿಡಿದ ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್​ ಆಪನ್​ಹೈಮರ್​ ಜೀವನದ ಕುರಿತು ಈ ಸಿನಿಮಾ ಮೂಡಿಬಂದಿದೆ. ವಿಶ್ವಾದ್ಯಂತ ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಕ್ರಿಸ್ಟೋಫರ್​ ನೋಲನ್​ ನಿರ್ದೇಶನದ ಸಿನಿಮಾ ಎಂಬ ಕಾರಣಕ್ಕೆ ಪ್ರೇಕ್ಷಕರು ‘ಆಪನ್​ಹೈಮರ್​’ ಬಗ್ಗೆ ಹೆಚ್ಚು ಆಸಕ್ತಿ ತೋರಿಸಿದ್ದಾರೆ. ಮೊದಲ ಮೂರು ದಿನ ಭಾರತ ಹಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ