AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oppenheimer Movie: ಜಪಾನ್​ನಲ್ಲಿ ರಿಲೀಸ್ ‘ಆಪನ್​ಹೈಮರ್’ ಸಿನಿಮಾ; ಎದ್ದಿತು ಅಪಸ್ವರ

ಅಮೆರಿಕದಲ್ಲಿ ‘ಆಪನ್​ಹೈಮರ್’ ರಿಲೀಸ್ ಆಗಿ ಏಳು ತಿಂಗಳು ಕಳೆದಿದೆ. ಈ ಚಿತ್ರ ಆಸ್ಕರ್​​ನಲ್ಲಿ ಹಲವು ಪ್ರಶಸ್ತಿ ಗಳಿಸಿದೆ. ಈಗ ಸಿನಿಮಾ ಜಪಾನ್​ನಲ್ಲೂ ಬಿಡುಗಡೆ ಆಗಿದೆ. ಈ ಚಿತ್ರದ ಬಗ್ಗೆ ಹಿರೋಷಿಮಾದ ಮಾಜಿ ಮೇಯರ್ ತಕಾಶ ಹಿರೌಕಾ ಮಾತನಾಡಿದ್ದಾರೆ.

Oppenheimer Movie: ಜಪಾನ್​ನಲ್ಲಿ ರಿಲೀಸ್ ‘ಆಪನ್​ಹೈಮರ್’ ಸಿನಿಮಾ; ಎದ್ದಿತು ಅಪಸ್ವರ
ಆಪನ್​ಹೈಮರ್
ರಾಜೇಶ್ ದುಗ್ಗುಮನೆ
|

Updated on: Mar 30, 2024 | 8:30 AM

Share

ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಜಪಾನ್​ನ ಹಿರೋಷಿಮಾ ಹಾಗೂ ನಾಗಸಕಿ ಮೇಲೆ ಅಮೆರಿಕದವರು ಅಣುಬಾಂಬ್ ದಾಳಿ ಮಾಡಿದರು. ಈ ವೇಳೆ ಲಕ್ಷಾಂತರ ಮಂದಿ ಮೃತಪಟ್ಟರು. ಕ್ಷಣಮಾತ್ರದಲ್ಲಿ ನಗರಕ್ಕೆ ನಗರವೇ ನಾಶವಾಯಿತು. ಈ ಅಣುಬಾಂಬ್ ಕಂಡು ಹಿಡಿದಿದ್ದು ಜೆ. ರಾಬರ್ಟ್​ ಆಪನ್​ಹೈಮರ್. ಅವರಿಗೂ ಈ ಬಾಂಬ್​ ದಾಳಿಗೂ ನೇರ ಸಂಬಂಧವಿಲ್ಲ. ಆದರೆ, ಅಣುಬಾಂಬ್ ಕಂಡು ಹಿಡಿದಿದ್ದು ಅವರೇ. ಹೀಗಾಗಿ ‘ಆಪನ್​ಹೈಮರ್​’ ಸಿನಿಮಾ (Oppenheimer Movie) ಮಾಡಲಾಯಿತು. ಈ ಸಿನಿಮಾದಲ್ಲಿ ರಾಬರ್ಟ್ ಆಪನ್​ಹೈಮರ್ ಮನಸ್ಸಿನ ತುಮುಲಗಳನ್ನು ತೋರಿಸಲಾಗಿದೆ. ಈ ಸಿನಿಮಾ ಈಗ ಜಪಾನ್​ನಲ್ಲಿ ರಿಲೀಸ್ ಆಗಿದೆ.

ಅಮೆರಿಕದಲ್ಲಿ ‘ಆಪನ್​ಹೈಮರ್’ ರಿಲೀಸ್ ಆಗಿ ಏಳು ತಿಂಗಳು ಕಳೆದಿದೆ. ಈ ಚಿತ್ರ ಆಸ್ಕರ್​​ನಲ್ಲಿ ಹಲವು ಪ್ರಶಸ್ತಿ ಗಳಿಸಿದೆ. ಈಗ ಸಿನಿಮಾ ಜಪಾನ್​ನಲ್ಲೂ ಬಿಡುಗಡೆ ಆಗಿದೆ. ಈ ಚಿತ್ರದ ಬಗ್ಗೆ ಹಿರೋಷಿಮಾದ ಮಾಜಿ ಮೇಯರ್ ತಕಾಶ ಹಿರೌಕಾ ಮಾತನಾಡಿದ್ದಾರೆ. ‘ಹಿರೋಷಿಮಾದ ದೃಷ್ಟಿಕೋನದಿಂದ ನೋಡುವುದಾದರೆ ಪರಮಾಣು ಶಸ್ತ್ರಾಸ್ತ್ರಗಳ ಭಯಾನಕತೆಯನ್ನು ಸಿನಿಮಾಗಳಲ್ಲಿ ಸರಿಯಾಗಿ ಚಿತ್ರಿಸಿಲ್ಲ. ಅಮೆರಿಕನ್ನರ ಜೀವ ಉಳಿಸಲು ಪರಮಾಣು ಬಾಂಬ್ ಅನ್ನು ಬಳಸಲಾಗಿದೆ ಎಂಬ ರೀತಿಯಲ್ಲಿ ಸಿನಿಮಾ ಮೂಡಿ ಬಂದಿದೆ’ ಎಂದು ಅವರು ಹೇಳಿದ್ದಾರೆ.

ಕೆಲವರು ಸಿನಿಮಾನ ಮೆಚ್ಚಿಕೊಂಡಿದ್ದಾರೆ. ‘ಟೊಕಿಯೋದಲ್ಲಿ ಸಿನಿಮಾ ನೋಡಿದೆ. ಸಿನಿಮಾ ನಿಜಕ್ಕೂ ಉತ್ತಮವಾಗಿದೆ’ ಎಂದು ಕೆಲವರು ಹೇಳಿದ್ದಾರೆ. ಕಳೆದ ವರ್ಷ ‘ಬಾರ್ಬಿ’ ಹಾಗೂ ‘ಆಪನ್​ಹೈಮರ್’ ಸಿನಿಮಾಗಳು ಒಟ್ಟಿಗೆ ರಿಲೀಸ್ ಆಗಿದ್ದವು. ಈ ವೇಳೆ ಅನೇಕರು ‘Barbenheimer’ ಹ್ಯಾಶ್​ಟ್ಯಾಗ್ ಟ್ರೆಂಡ್ ಮಾಡಿದ್ದರು. ಈ ಬಗ್ಗೆ ಜಪಾನ್​ನಲ್ಲಿ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: ಕಾಶ್ಮೀರದಲ್ಲೂ ಧೂಳೆಬ್ಬಿಸಿದ ಕ್ರಿಸ್ಟೋಫರ್ ನೋಲನ್; ‘ಆಪನ್​ಹೈಮರ್’ ಟಿಕೆಟ್ ಸೋಲ್ಡ್ಔಟ್

ಕ್ರಿಸ್ಟೋಫರ್ ನೋಲನ್ ನಿರ್ದೇಶನದ ‘ಆಪನ್​ಹೈಮರ್’ ಸಿನಿಮಾ ಮಾಡಿದ್ದಾರೆ. ಕಿಲಿಯನ್​ ಮರ್ಫಿ ಅವರು ಆಪನ್​ಹೈಮರ್ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಅತ್ಯುತ್ತಮ ನಟ, ಅತ್ಯುತ್ತಮ ನಿರ್ದೇಶನ ಸೇರಿ ಏಳು ಅವಾರ್ಡ್​ಗಳನ್ನು ಇದು ಪಡೆದುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ