AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oppenheimer Movie: ಜಪಾನ್​ನಲ್ಲಿ ರಿಲೀಸ್ ‘ಆಪನ್​ಹೈಮರ್’ ಸಿನಿಮಾ; ಎದ್ದಿತು ಅಪಸ್ವರ

ಅಮೆರಿಕದಲ್ಲಿ ‘ಆಪನ್​ಹೈಮರ್’ ರಿಲೀಸ್ ಆಗಿ ಏಳು ತಿಂಗಳು ಕಳೆದಿದೆ. ಈ ಚಿತ್ರ ಆಸ್ಕರ್​​ನಲ್ಲಿ ಹಲವು ಪ್ರಶಸ್ತಿ ಗಳಿಸಿದೆ. ಈಗ ಸಿನಿಮಾ ಜಪಾನ್​ನಲ್ಲೂ ಬಿಡುಗಡೆ ಆಗಿದೆ. ಈ ಚಿತ್ರದ ಬಗ್ಗೆ ಹಿರೋಷಿಮಾದ ಮಾಜಿ ಮೇಯರ್ ತಕಾಶ ಹಿರೌಕಾ ಮಾತನಾಡಿದ್ದಾರೆ.

Oppenheimer Movie: ಜಪಾನ್​ನಲ್ಲಿ ರಿಲೀಸ್ ‘ಆಪನ್​ಹೈಮರ್’ ಸಿನಿಮಾ; ಎದ್ದಿತು ಅಪಸ್ವರ
ಆಪನ್​ಹೈಮರ್
ರಾಜೇಶ್ ದುಗ್ಗುಮನೆ
|

Updated on: Mar 30, 2024 | 8:30 AM

Share

ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಜಪಾನ್​ನ ಹಿರೋಷಿಮಾ ಹಾಗೂ ನಾಗಸಕಿ ಮೇಲೆ ಅಮೆರಿಕದವರು ಅಣುಬಾಂಬ್ ದಾಳಿ ಮಾಡಿದರು. ಈ ವೇಳೆ ಲಕ್ಷಾಂತರ ಮಂದಿ ಮೃತಪಟ್ಟರು. ಕ್ಷಣಮಾತ್ರದಲ್ಲಿ ನಗರಕ್ಕೆ ನಗರವೇ ನಾಶವಾಯಿತು. ಈ ಅಣುಬಾಂಬ್ ಕಂಡು ಹಿಡಿದಿದ್ದು ಜೆ. ರಾಬರ್ಟ್​ ಆಪನ್​ಹೈಮರ್. ಅವರಿಗೂ ಈ ಬಾಂಬ್​ ದಾಳಿಗೂ ನೇರ ಸಂಬಂಧವಿಲ್ಲ. ಆದರೆ, ಅಣುಬಾಂಬ್ ಕಂಡು ಹಿಡಿದಿದ್ದು ಅವರೇ. ಹೀಗಾಗಿ ‘ಆಪನ್​ಹೈಮರ್​’ ಸಿನಿಮಾ (Oppenheimer Movie) ಮಾಡಲಾಯಿತು. ಈ ಸಿನಿಮಾದಲ್ಲಿ ರಾಬರ್ಟ್ ಆಪನ್​ಹೈಮರ್ ಮನಸ್ಸಿನ ತುಮುಲಗಳನ್ನು ತೋರಿಸಲಾಗಿದೆ. ಈ ಸಿನಿಮಾ ಈಗ ಜಪಾನ್​ನಲ್ಲಿ ರಿಲೀಸ್ ಆಗಿದೆ.

ಅಮೆರಿಕದಲ್ಲಿ ‘ಆಪನ್​ಹೈಮರ್’ ರಿಲೀಸ್ ಆಗಿ ಏಳು ತಿಂಗಳು ಕಳೆದಿದೆ. ಈ ಚಿತ್ರ ಆಸ್ಕರ್​​ನಲ್ಲಿ ಹಲವು ಪ್ರಶಸ್ತಿ ಗಳಿಸಿದೆ. ಈಗ ಸಿನಿಮಾ ಜಪಾನ್​ನಲ್ಲೂ ಬಿಡುಗಡೆ ಆಗಿದೆ. ಈ ಚಿತ್ರದ ಬಗ್ಗೆ ಹಿರೋಷಿಮಾದ ಮಾಜಿ ಮೇಯರ್ ತಕಾಶ ಹಿರೌಕಾ ಮಾತನಾಡಿದ್ದಾರೆ. ‘ಹಿರೋಷಿಮಾದ ದೃಷ್ಟಿಕೋನದಿಂದ ನೋಡುವುದಾದರೆ ಪರಮಾಣು ಶಸ್ತ್ರಾಸ್ತ್ರಗಳ ಭಯಾನಕತೆಯನ್ನು ಸಿನಿಮಾಗಳಲ್ಲಿ ಸರಿಯಾಗಿ ಚಿತ್ರಿಸಿಲ್ಲ. ಅಮೆರಿಕನ್ನರ ಜೀವ ಉಳಿಸಲು ಪರಮಾಣು ಬಾಂಬ್ ಅನ್ನು ಬಳಸಲಾಗಿದೆ ಎಂಬ ರೀತಿಯಲ್ಲಿ ಸಿನಿಮಾ ಮೂಡಿ ಬಂದಿದೆ’ ಎಂದು ಅವರು ಹೇಳಿದ್ದಾರೆ.

ಕೆಲವರು ಸಿನಿಮಾನ ಮೆಚ್ಚಿಕೊಂಡಿದ್ದಾರೆ. ‘ಟೊಕಿಯೋದಲ್ಲಿ ಸಿನಿಮಾ ನೋಡಿದೆ. ಸಿನಿಮಾ ನಿಜಕ್ಕೂ ಉತ್ತಮವಾಗಿದೆ’ ಎಂದು ಕೆಲವರು ಹೇಳಿದ್ದಾರೆ. ಕಳೆದ ವರ್ಷ ‘ಬಾರ್ಬಿ’ ಹಾಗೂ ‘ಆಪನ್​ಹೈಮರ್’ ಸಿನಿಮಾಗಳು ಒಟ್ಟಿಗೆ ರಿಲೀಸ್ ಆಗಿದ್ದವು. ಈ ವೇಳೆ ಅನೇಕರು ‘Barbenheimer’ ಹ್ಯಾಶ್​ಟ್ಯಾಗ್ ಟ್ರೆಂಡ್ ಮಾಡಿದ್ದರು. ಈ ಬಗ್ಗೆ ಜಪಾನ್​ನಲ್ಲಿ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: ಕಾಶ್ಮೀರದಲ್ಲೂ ಧೂಳೆಬ್ಬಿಸಿದ ಕ್ರಿಸ್ಟೋಫರ್ ನೋಲನ್; ‘ಆಪನ್​ಹೈಮರ್’ ಟಿಕೆಟ್ ಸೋಲ್ಡ್ಔಟ್

ಕ್ರಿಸ್ಟೋಫರ್ ನೋಲನ್ ನಿರ್ದೇಶನದ ‘ಆಪನ್​ಹೈಮರ್’ ಸಿನಿಮಾ ಮಾಡಿದ್ದಾರೆ. ಕಿಲಿಯನ್​ ಮರ್ಫಿ ಅವರು ಆಪನ್​ಹೈಮರ್ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಅತ್ಯುತ್ತಮ ನಟ, ಅತ್ಯುತ್ತಮ ನಿರ್ದೇಶನ ಸೇರಿ ಏಳು ಅವಾರ್ಡ್​ಗಳನ್ನು ಇದು ಪಡೆದುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ