Oppenheimer Movie: ಜಪಾನ್​ನಲ್ಲಿ ರಿಲೀಸ್ ‘ಆಪನ್​ಹೈಮರ್’ ಸಿನಿಮಾ; ಎದ್ದಿತು ಅಪಸ್ವರ

ಅಮೆರಿಕದಲ್ಲಿ ‘ಆಪನ್​ಹೈಮರ್’ ರಿಲೀಸ್ ಆಗಿ ಏಳು ತಿಂಗಳು ಕಳೆದಿದೆ. ಈ ಚಿತ್ರ ಆಸ್ಕರ್​​ನಲ್ಲಿ ಹಲವು ಪ್ರಶಸ್ತಿ ಗಳಿಸಿದೆ. ಈಗ ಸಿನಿಮಾ ಜಪಾನ್​ನಲ್ಲೂ ಬಿಡುಗಡೆ ಆಗಿದೆ. ಈ ಚಿತ್ರದ ಬಗ್ಗೆ ಹಿರೋಷಿಮಾದ ಮಾಜಿ ಮೇಯರ್ ತಕಾಶ ಹಿರೌಕಾ ಮಾತನಾಡಿದ್ದಾರೆ.

Oppenheimer Movie: ಜಪಾನ್​ನಲ್ಲಿ ರಿಲೀಸ್ ‘ಆಪನ್​ಹೈಮರ್’ ಸಿನಿಮಾ; ಎದ್ದಿತು ಅಪಸ್ವರ
ಆಪನ್​ಹೈಮರ್
Follow us
|

Updated on: Mar 30, 2024 | 8:30 AM

ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಜಪಾನ್​ನ ಹಿರೋಷಿಮಾ ಹಾಗೂ ನಾಗಸಕಿ ಮೇಲೆ ಅಮೆರಿಕದವರು ಅಣುಬಾಂಬ್ ದಾಳಿ ಮಾಡಿದರು. ಈ ವೇಳೆ ಲಕ್ಷಾಂತರ ಮಂದಿ ಮೃತಪಟ್ಟರು. ಕ್ಷಣಮಾತ್ರದಲ್ಲಿ ನಗರಕ್ಕೆ ನಗರವೇ ನಾಶವಾಯಿತು. ಈ ಅಣುಬಾಂಬ್ ಕಂಡು ಹಿಡಿದಿದ್ದು ಜೆ. ರಾಬರ್ಟ್​ ಆಪನ್​ಹೈಮರ್. ಅವರಿಗೂ ಈ ಬಾಂಬ್​ ದಾಳಿಗೂ ನೇರ ಸಂಬಂಧವಿಲ್ಲ. ಆದರೆ, ಅಣುಬಾಂಬ್ ಕಂಡು ಹಿಡಿದಿದ್ದು ಅವರೇ. ಹೀಗಾಗಿ ‘ಆಪನ್​ಹೈಮರ್​’ ಸಿನಿಮಾ (Oppenheimer Movie) ಮಾಡಲಾಯಿತು. ಈ ಸಿನಿಮಾದಲ್ಲಿ ರಾಬರ್ಟ್ ಆಪನ್​ಹೈಮರ್ ಮನಸ್ಸಿನ ತುಮುಲಗಳನ್ನು ತೋರಿಸಲಾಗಿದೆ. ಈ ಸಿನಿಮಾ ಈಗ ಜಪಾನ್​ನಲ್ಲಿ ರಿಲೀಸ್ ಆಗಿದೆ.

ಅಮೆರಿಕದಲ್ಲಿ ‘ಆಪನ್​ಹೈಮರ್’ ರಿಲೀಸ್ ಆಗಿ ಏಳು ತಿಂಗಳು ಕಳೆದಿದೆ. ಈ ಚಿತ್ರ ಆಸ್ಕರ್​​ನಲ್ಲಿ ಹಲವು ಪ್ರಶಸ್ತಿ ಗಳಿಸಿದೆ. ಈಗ ಸಿನಿಮಾ ಜಪಾನ್​ನಲ್ಲೂ ಬಿಡುಗಡೆ ಆಗಿದೆ. ಈ ಚಿತ್ರದ ಬಗ್ಗೆ ಹಿರೋಷಿಮಾದ ಮಾಜಿ ಮೇಯರ್ ತಕಾಶ ಹಿರೌಕಾ ಮಾತನಾಡಿದ್ದಾರೆ. ‘ಹಿರೋಷಿಮಾದ ದೃಷ್ಟಿಕೋನದಿಂದ ನೋಡುವುದಾದರೆ ಪರಮಾಣು ಶಸ್ತ್ರಾಸ್ತ್ರಗಳ ಭಯಾನಕತೆಯನ್ನು ಸಿನಿಮಾಗಳಲ್ಲಿ ಸರಿಯಾಗಿ ಚಿತ್ರಿಸಿಲ್ಲ. ಅಮೆರಿಕನ್ನರ ಜೀವ ಉಳಿಸಲು ಪರಮಾಣು ಬಾಂಬ್ ಅನ್ನು ಬಳಸಲಾಗಿದೆ ಎಂಬ ರೀತಿಯಲ್ಲಿ ಸಿನಿಮಾ ಮೂಡಿ ಬಂದಿದೆ’ ಎಂದು ಅವರು ಹೇಳಿದ್ದಾರೆ.

ಕೆಲವರು ಸಿನಿಮಾನ ಮೆಚ್ಚಿಕೊಂಡಿದ್ದಾರೆ. ‘ಟೊಕಿಯೋದಲ್ಲಿ ಸಿನಿಮಾ ನೋಡಿದೆ. ಸಿನಿಮಾ ನಿಜಕ್ಕೂ ಉತ್ತಮವಾಗಿದೆ’ ಎಂದು ಕೆಲವರು ಹೇಳಿದ್ದಾರೆ. ಕಳೆದ ವರ್ಷ ‘ಬಾರ್ಬಿ’ ಹಾಗೂ ‘ಆಪನ್​ಹೈಮರ್’ ಸಿನಿಮಾಗಳು ಒಟ್ಟಿಗೆ ರಿಲೀಸ್ ಆಗಿದ್ದವು. ಈ ವೇಳೆ ಅನೇಕರು ‘Barbenheimer’ ಹ್ಯಾಶ್​ಟ್ಯಾಗ್ ಟ್ರೆಂಡ್ ಮಾಡಿದ್ದರು. ಈ ಬಗ್ಗೆ ಜಪಾನ್​ನಲ್ಲಿ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: ಕಾಶ್ಮೀರದಲ್ಲೂ ಧೂಳೆಬ್ಬಿಸಿದ ಕ್ರಿಸ್ಟೋಫರ್ ನೋಲನ್; ‘ಆಪನ್​ಹೈಮರ್’ ಟಿಕೆಟ್ ಸೋಲ್ಡ್ಔಟ್

ಕ್ರಿಸ್ಟೋಫರ್ ನೋಲನ್ ನಿರ್ದೇಶನದ ‘ಆಪನ್​ಹೈಮರ್’ ಸಿನಿಮಾ ಮಾಡಿದ್ದಾರೆ. ಕಿಲಿಯನ್​ ಮರ್ಫಿ ಅವರು ಆಪನ್​ಹೈಮರ್ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಅತ್ಯುತ್ತಮ ನಟ, ಅತ್ಯುತ್ತಮ ನಿರ್ದೇಶನ ಸೇರಿ ಏಳು ಅವಾರ್ಡ್​ಗಳನ್ನು ಇದು ಪಡೆದುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ