AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನ್ನೆಗೆ ಹೊಡೆದು ವಿಲ್​ ಸ್ಮಿತ್​ ರಂಪಾಟ ಮಾಡಿದ ಪ್ರಕರಣ; ಆಸ್ಕರ್ ಪ್ರಶಸ್ತಿ ಹಿಂಪಡೆಯಲಿದೆ ಅಕಾಡೆಮಿ?

ವೇದಿಕೆ ಏರಿದ ವಿಲ್​ ಸ್ಮಿತ್​ ಅವರು ಕ್ರಿಸ್​ ರಾಕ್​ ಮುಖಕ್ಕೆ ಬಾರಿಸಿದರು. ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ. ಇದಕ್ಕೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದರು.

ಕೆನ್ನೆಗೆ ಹೊಡೆದು ವಿಲ್​ ಸ್ಮಿತ್​ ರಂಪಾಟ ಮಾಡಿದ ಪ್ರಕರಣ; ಆಸ್ಕರ್ ಪ್ರಶಸ್ತಿ ಹಿಂಪಡೆಯಲಿದೆ ಅಕಾಡೆಮಿ?
ವಿಲ್ ಸ್ಮಿತ್
TV9 Web
| Edited By: |

Updated on: Mar 28, 2022 | 9:34 PM

Share

ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿ (Oscar Awards) ಸಮಾರಂಭದಲ್ಲಿ ಎಲ್ಲರೂ ಶಿಸ್ತಿನಿಂದ ನಡೆದುಕೊಳ್ಳೋಕೆ ಬಯಸುತ್ತಾರೆ. ಆದರೆ, ಈ ಬಾರಿಯ ಆಸ್ಕರ್​ ಪ್ರಶಸ್ತಿ ಸಮಾರಂಭ ವಿಚಿತ್ರ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ನಟ ವಿಲ್​ ಸ್ಮಿತ್​ (Will Smith) ಅವರು ವೇದಿಕೆ ಮೇಲೆ ಹಾಸ್ಯ ನಟ ಕ್ರಿಸ್​ ರಾಕ್ (Chris Rock) ಕೆನ್ನೆಗೆ ಬಾರಿಸುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ. ವಿಶೇಷ ಎಂದರೆ, ಇದೇ ವೇದಿಕೆ ಮೇಲೆ ವಿಲ್​ ಸ್ಮಿತ್​ಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿಯನ್ನು ಹಿಂಪಡೆಯಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದೆ. ಇದಕ್ಕೆ ಅಕಾಡೆಮಿ ಪ್ರತಿಕ್ರಿಯಿಸಿದೆ.

ಎಂದಿನಂತೆ ಆಸ್ಕರ್​ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಖುಷಿಖುಷಿಯಾಗಿ ನಡೆಯುತ್ತಿತ್ತು. ಅತ್ಯುತ್ತಮ ಡಾಕ್ಯುಮೆಂಟರಿ ಪ್ರಶಸ್ತಿಯನ್ನು ವಿತರಿಸಲು ಕ್ರಿಸ್​ ರಾಕ್​ ಅವರನ್ನು ವೇದಿಕೆಗೆ ಕರೆಯಲಾಗಿತ್ತು. ಈ ವೇಳೆ ಅವರು ಸುಮ್ಮನಿರಲಾರದೇ ವಿಲ್​ ಸ್ಮಿತ್​ ಪತ್ನಿ ಜೇಡಾ ಪಿಂಕೆಟ್​ ಸ್ಮಿತ್​ ಬಗ್ಗೆ ಮಾತನಾಡಿದರು. ಜೇಡಾ ಪಿಂಕೆಟ್​​ ಸ್ಮಿತ್​ ಬಗ್ಗೆ ಅವರು ಜೋಕ್ ಕೂಡ​ ಮಾಡಿದರು. ಅದನ್ನು ಕೇಳಿ ಇಡೀ ಸಭಾಂಗಣ ಜೋರಾಗಿ ನಕ್ಕಿತು. ಒಂದು ಕ್ಷಣ ವಿಲ್​ ಸ್ಮಿತ್​ ಕೂಡ ನಕ್ಕರು. ಆದರೆ ಅಲ್ಲಿ ಮರುಕ್ಷಣ ನಡೆದಿದ್ದು ನಿಜಕ್ಕೂ ಶಾಕಿಂಗ್​. ಕೂಡಲೇ ವೇದಿಕೆ ಏರಿದ ವಿಲ್​ ಸ್ಮಿತ್​ ಅವರು ಕ್ರಿಸ್​ ರಾಕ್​ ಮುಖಕ್ಕೆ ಬಾರಿಸಿದರು. ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ. ಇದಕ್ಕೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದರು.

‘ಅಕಾಡೆಮಿ ಯಾವುದೇ ರೀತಿಯ ಹಿಂಸೆಯನ್ನು ಸಹಿಸುವುದಿಲ್ಲ. ಪ್ರಪಂಚದಾದ್ಯಂತದ ಗೆಳೆಯರು ಮತ್ತು ಚಲನಚಿತ್ರ ಪ್ರೇಮಿಗಳಿಂದ ಮನ್ನಣೆಯ ಈ ಕ್ಷಣಕ್ಕೆ ಅರ್ಹರಾಗಿರುವ 94 ನೇ ಅಕಾಡೆಮಿ ಪ್ರಶಸ್ತಿ ವಿಜೇತರನ್ನು ಕೊಂಡಾಡಲು ನಾವು ಸಂತಸ ವ್ಯಕ್ತಪಡಿಸುತ್ತೇವೆ’ ಎಂದು ಅಕಾಡೆಮಿ ಟ್ವೀಟ್​ ಮಾಡಿದೆ. ಆದರೆ, ಪ್ರಶಸ್ತಿ ಹಿಂಪಡೆಯುವ ಬಗ್ಗೆ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ.

ಈ ರೀತಿ ಆಗಿದ್ದರ ಬಗ್ಗೆ ಸ್ವತಃ ವಿಲ್​ ಸ್ಮಿತ್​ ಅವರಿಗೂ ಬೇಸರ ಇದೆ. ಈಗ ಅವರು ಕ್ಷಮೆ ಕೇಳಿದ್ದಾರೆ. ‘ನಾನು ಅಕಾಡೆಮಿಯ ಕ್ಷಮೆ ಕೇಳುತ್ತೇನೆ. ನಾಮನಿರ್ದೇಶಕಗೊಂಡ ಎಲ್ಲರಲ್ಲೂ ಕ್ಷಮೆ ಕೇಳುತ್ತೇನೆ’ ಎಂದು ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಆ ವಿಡಿಯೋ ಕೂಡ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ಯಶ್ ಹೊಸ ಸಿನಿಮಾ ಸೆಟ್ಟೇರೋದು ಯಾವಾಗ, ಅದು ಯಾವ ಹಂತದಲ್ಲಿದೆ?; ರಾಕಿಂಗ್​ ಸ್ಟಾರ್ ಕೊಟ್ರು ಉತ್ತರ

Oscars 2022 Winners: ವಿಲ್​ ಸ್ಮಿತ್​ಗೆ ಅತ್ಯುತ್ತಮ ನಟ ಆಸ್ಕರ್​ ಪ್ರಶಸ್ತಿ; ‘ಕೋಡಾ’ ಅತ್ಯುತ್ತಮ ಸಿನಿಮಾ

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?