AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 11ಕ್ಕೆ ಆಸ್ಕರ್ ಅವಾರ್ಡ್ ಕಾರ್ಯಕ್ರಮ; ದಾಖಲೆ ಬರೆಯಲಿದೆಯೇ ‘ಆಪನ್​ಹೈಮರ್’ ಸಿನಿಮಾ?

ಹಾಲಿವುಡ್ ಸಿನಿಮಾಗಳಿಗೆ ವಿಶ್ವಾದ್ಯಂತ ವೀಕ್ಷಕರು ಇದ್ದಾರೆ. ಸಿನಿಮಾದ ಕಂಟೆಂಟ್​ ಚೆನ್ನಾಗಿದ್ದರೆ ಅಂಥವುಗಳು ಭಾರತದಲ್ಲಿ ಭರ್ಜರಿ ಕಲೆಕ್ಷನ್​ ಮಾಡುತ್ತವೆ. ‘ಆಪನ್​ಹೈಮರ್​’ ಸಿನಿಮಾ ಕಳೆದ ವರ್ಷ ಜುಲೈ 21ರಂದು ಸಾವಿರಾರು ಪರದೆಗಳಲ್ಲಿ ರಿಲೀಸ್​ ಆಗಿ ಒಳ್ಳೆಯ ಕಮಾಯಿ ಮಾಡಿತ್ತು. ಈಗ ಆಸ್ಕರ್​ ರೇಸ್​ನಲ್ಲಿ  ಸಿನಿಮಾ ಮುಂದಿದೆ.

ಮಾರ್ಚ್ 11ಕ್ಕೆ ಆಸ್ಕರ್ ಅವಾರ್ಡ್ ಕಾರ್ಯಕ್ರಮ; ದಾಖಲೆ ಬರೆಯಲಿದೆಯೇ ‘ಆಪನ್​ಹೈಮರ್’ ಸಿನಿಮಾ?
ಆಪನ್​ಹೈಮರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 05, 2024 | 12:31 PM

ಮಾರ್ಚ್​ 10ರಂದು (ಭಾರತೀಯ ಕಾಲಮಾನ ಮಾರ್ಚ್ 11 ಮುಂಜಾನೆ 4:30 ) 96ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಹಾಲಿವುಡ್​ನ ಆಪನ್​ಹೈಮರ್’ ಸಿನಿಮಾ (Oppenheimer) ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡು ದಾಖಲೆ ಬರೆಯೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕ್ರಿಸ್ಟೋಫರ್ ನೋಲನ್ ನಿರ್ದೇಶನದ ಈ ಚಿತ್ರ ಬರೋಬ್ಬರಿ 13 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ‘ಪೂರ್ ಥಿಂಗ್ಸ್’ ಸಿನಿಮಾ 11 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ.  ಈ ಪೈಕಿ ಯಾವ ಸಿನಿಮಾ ಎಷ್ಟು ಪ್ರಶಸ್ತಿ ಬಾಚಿಕೊಳ್ಳಲಿದೆ ಎಂಬ ಕುತೂಹಲ ಮೂಡಿದೆ.

ಹಾಲಿವುಡ್ ಸಿನಿಮಾಗಳಿಗೆ ವಿಶ್ವಾದ್ಯಂತ ವೀಕ್ಷಕರು ಇದ್ದಾರೆ. ಸಿನಿಮಾದ ಕಂಟೆಂಟ್​ ಚೆನ್ನಾಗಿದ್ದರೆ ಅಂಥವುಗಳು ಭಾರತದಲ್ಲಿ ಭರ್ಜರಿ ಕಲೆಕ್ಷನ್​ ಮಾಡುತ್ತವೆ. ‘ಆಪನ್​ಹೈಮರ್​’ ಸಿನಿಮಾ ಕಳೆದ ವರ್ಷ ಜುಲೈ 21ರಂದು ಸಾವಿರಾರು ಪರದೆಗಳಲ್ಲಿ ರಿಲೀಸ್​ ಆಗಿ ಒಳ್ಳೆಯ ಕಮಾಯಿ ಮಾಡಿತ್ತು. ಈಗ ಆಸ್ಕರ್​ ರೇಸ್​ನಲ್ಲಿ  ಸಿನಿಮಾ ಮುಂದಿದೆ. ಈ ಚಿತ್ರ ಎಷ್ಟು ಪ್ರಶಸ್ತಿ ಬಾಚಿಕೊಳ್ಳಲಿದೆ ಎನ್ನುವ ಕುತೂಹಲ ಮೂಡಿದೆ.

ಹಾಲಿವುಡ್​ನ ಜನಪ್ರಿಯ ಕಲಾವಿದರಾದ ಕಿಲಿಯನ್​ ಮರ್ಫಿ, ರಾಬರ್ಟ್​ ಡೌನಿ ಜೂನಿಯರ್​, ಮ್ಯಾಟ್​ ಡೇಮನ್​, ಎಮಿಲಿ ಬ್ಲಂಟ್​ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ‘ಆಪನ್​ಹೈಮರ್’ ಚಿತ್ರದ ಅಭಿನಯಕ್ಕೆ ಕಿಲಿಯನ್ ಮರ್ಫಿ ಹೆಸರು ಅತ್ಯುತ್ತಮ ನಟ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ. ಮೊದಲ ಬಾರಿಗೆ ಐರಿಷ್ ನಟನ ಹೆಸರು ಆಸ್ಕರ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಂತೆ ಆಗಿದೆ. ಅವರು ಐರ್ಲೆಂಡ್​ನ ನಟ.

ಇದನ್ನೂ ಓದಿ: ‘ಆಪನ್​ಹೈಮರ್​’ ಯಶಸ್ಸಿನ ಬಳಿಕ ಹಾರರ್​ ಸಿನಿಮಾ ಮಾಡ್ತಾರೆ ಕ್ರಿಸ್ಟೋಫರ್​ ನೋಲನ್​​

ಕಳೆದ ವರ್ಷ ಭಾರತದ ಪಾಲಿಗೆ ಆಸ್ಕರ್ ಸಾಕಷ್ಟು ವಿಶೇಷವಾಗಿತ್ತು. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿತ್ತು. ಇದಲ್ಲದೆ, ‘ದಿ ಎಲಿಫಂಟ್ ವಿಸ್ಪರರ್ಸ್​’ ಸರಣಿ ಕೂಡ ಆಸ್ಕರ್ ಗೆದ್ದಿತ್ತು. ಈ ಬಾರಿ ಭಾರತದ ಯಾವ ಸಿನಿಮಾಗಳು ಆಸ್ಕರ್ ರೇಸ್​ನಲ್ಲಿ ಸ್ಥಾನ ಪಡೆಯೋಕೆ ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ