AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 11ಕ್ಕೆ ಆಸ್ಕರ್ ಅವಾರ್ಡ್ ಕಾರ್ಯಕ್ರಮ; ದಾಖಲೆ ಬರೆಯಲಿದೆಯೇ ‘ಆಪನ್​ಹೈಮರ್’ ಸಿನಿಮಾ?

ಹಾಲಿವುಡ್ ಸಿನಿಮಾಗಳಿಗೆ ವಿಶ್ವಾದ್ಯಂತ ವೀಕ್ಷಕರು ಇದ್ದಾರೆ. ಸಿನಿಮಾದ ಕಂಟೆಂಟ್​ ಚೆನ್ನಾಗಿದ್ದರೆ ಅಂಥವುಗಳು ಭಾರತದಲ್ಲಿ ಭರ್ಜರಿ ಕಲೆಕ್ಷನ್​ ಮಾಡುತ್ತವೆ. ‘ಆಪನ್​ಹೈಮರ್​’ ಸಿನಿಮಾ ಕಳೆದ ವರ್ಷ ಜುಲೈ 21ರಂದು ಸಾವಿರಾರು ಪರದೆಗಳಲ್ಲಿ ರಿಲೀಸ್​ ಆಗಿ ಒಳ್ಳೆಯ ಕಮಾಯಿ ಮಾಡಿತ್ತು. ಈಗ ಆಸ್ಕರ್​ ರೇಸ್​ನಲ್ಲಿ  ಸಿನಿಮಾ ಮುಂದಿದೆ.

ಮಾರ್ಚ್ 11ಕ್ಕೆ ಆಸ್ಕರ್ ಅವಾರ್ಡ್ ಕಾರ್ಯಕ್ರಮ; ದಾಖಲೆ ಬರೆಯಲಿದೆಯೇ ‘ಆಪನ್​ಹೈಮರ್’ ಸಿನಿಮಾ?
ಆಪನ್​ಹೈಮರ್
TV9 Web
| Edited By: |

Updated on: Mar 05, 2024 | 12:31 PM

Share

ಮಾರ್ಚ್​ 10ರಂದು (ಭಾರತೀಯ ಕಾಲಮಾನ ಮಾರ್ಚ್ 11 ಮುಂಜಾನೆ 4:30 ) 96ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಹಾಲಿವುಡ್​ನ ಆಪನ್​ಹೈಮರ್’ ಸಿನಿಮಾ (Oppenheimer) ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡು ದಾಖಲೆ ಬರೆಯೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕ್ರಿಸ್ಟೋಫರ್ ನೋಲನ್ ನಿರ್ದೇಶನದ ಈ ಚಿತ್ರ ಬರೋಬ್ಬರಿ 13 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ‘ಪೂರ್ ಥಿಂಗ್ಸ್’ ಸಿನಿಮಾ 11 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ.  ಈ ಪೈಕಿ ಯಾವ ಸಿನಿಮಾ ಎಷ್ಟು ಪ್ರಶಸ್ತಿ ಬಾಚಿಕೊಳ್ಳಲಿದೆ ಎಂಬ ಕುತೂಹಲ ಮೂಡಿದೆ.

ಹಾಲಿವುಡ್ ಸಿನಿಮಾಗಳಿಗೆ ವಿಶ್ವಾದ್ಯಂತ ವೀಕ್ಷಕರು ಇದ್ದಾರೆ. ಸಿನಿಮಾದ ಕಂಟೆಂಟ್​ ಚೆನ್ನಾಗಿದ್ದರೆ ಅಂಥವುಗಳು ಭಾರತದಲ್ಲಿ ಭರ್ಜರಿ ಕಲೆಕ್ಷನ್​ ಮಾಡುತ್ತವೆ. ‘ಆಪನ್​ಹೈಮರ್​’ ಸಿನಿಮಾ ಕಳೆದ ವರ್ಷ ಜುಲೈ 21ರಂದು ಸಾವಿರಾರು ಪರದೆಗಳಲ್ಲಿ ರಿಲೀಸ್​ ಆಗಿ ಒಳ್ಳೆಯ ಕಮಾಯಿ ಮಾಡಿತ್ತು. ಈಗ ಆಸ್ಕರ್​ ರೇಸ್​ನಲ್ಲಿ  ಸಿನಿಮಾ ಮುಂದಿದೆ. ಈ ಚಿತ್ರ ಎಷ್ಟು ಪ್ರಶಸ್ತಿ ಬಾಚಿಕೊಳ್ಳಲಿದೆ ಎನ್ನುವ ಕುತೂಹಲ ಮೂಡಿದೆ.

ಹಾಲಿವುಡ್​ನ ಜನಪ್ರಿಯ ಕಲಾವಿದರಾದ ಕಿಲಿಯನ್​ ಮರ್ಫಿ, ರಾಬರ್ಟ್​ ಡೌನಿ ಜೂನಿಯರ್​, ಮ್ಯಾಟ್​ ಡೇಮನ್​, ಎಮಿಲಿ ಬ್ಲಂಟ್​ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ‘ಆಪನ್​ಹೈಮರ್’ ಚಿತ್ರದ ಅಭಿನಯಕ್ಕೆ ಕಿಲಿಯನ್ ಮರ್ಫಿ ಹೆಸರು ಅತ್ಯುತ್ತಮ ನಟ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ. ಮೊದಲ ಬಾರಿಗೆ ಐರಿಷ್ ನಟನ ಹೆಸರು ಆಸ್ಕರ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಂತೆ ಆಗಿದೆ. ಅವರು ಐರ್ಲೆಂಡ್​ನ ನಟ.

ಇದನ್ನೂ ಓದಿ: ‘ಆಪನ್​ಹೈಮರ್​’ ಯಶಸ್ಸಿನ ಬಳಿಕ ಹಾರರ್​ ಸಿನಿಮಾ ಮಾಡ್ತಾರೆ ಕ್ರಿಸ್ಟೋಫರ್​ ನೋಲನ್​​

ಕಳೆದ ವರ್ಷ ಭಾರತದ ಪಾಲಿಗೆ ಆಸ್ಕರ್ ಸಾಕಷ್ಟು ವಿಶೇಷವಾಗಿತ್ತು. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿತ್ತು. ಇದಲ್ಲದೆ, ‘ದಿ ಎಲಿಫಂಟ್ ವಿಸ್ಪರರ್ಸ್​’ ಸರಣಿ ಕೂಡ ಆಸ್ಕರ್ ಗೆದ್ದಿತ್ತು. ಈ ಬಾರಿ ಭಾರತದ ಯಾವ ಸಿನಿಮಾಗಳು ಆಸ್ಕರ್ ರೇಸ್​ನಲ್ಲಿ ಸ್ಥಾನ ಪಡೆಯೋಕೆ ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು