ಮಾರ್ಚ್ 11ಕ್ಕೆ ಆಸ್ಕರ್ ಅವಾರ್ಡ್ ಕಾರ್ಯಕ್ರಮ; ದಾಖಲೆ ಬರೆಯಲಿದೆಯೇ ‘ಆಪನ್​ಹೈಮರ್’ ಸಿನಿಮಾ?

ಹಾಲಿವುಡ್ ಸಿನಿಮಾಗಳಿಗೆ ವಿಶ್ವಾದ್ಯಂತ ವೀಕ್ಷಕರು ಇದ್ದಾರೆ. ಸಿನಿಮಾದ ಕಂಟೆಂಟ್​ ಚೆನ್ನಾಗಿದ್ದರೆ ಅಂಥವುಗಳು ಭಾರತದಲ್ಲಿ ಭರ್ಜರಿ ಕಲೆಕ್ಷನ್​ ಮಾಡುತ್ತವೆ. ‘ಆಪನ್​ಹೈಮರ್​’ ಸಿನಿಮಾ ಕಳೆದ ವರ್ಷ ಜುಲೈ 21ರಂದು ಸಾವಿರಾರು ಪರದೆಗಳಲ್ಲಿ ರಿಲೀಸ್​ ಆಗಿ ಒಳ್ಳೆಯ ಕಮಾಯಿ ಮಾಡಿತ್ತು. ಈಗ ಆಸ್ಕರ್​ ರೇಸ್​ನಲ್ಲಿ  ಸಿನಿಮಾ ಮುಂದಿದೆ.

ಮಾರ್ಚ್ 11ಕ್ಕೆ ಆಸ್ಕರ್ ಅವಾರ್ಡ್ ಕಾರ್ಯಕ್ರಮ; ದಾಖಲೆ ಬರೆಯಲಿದೆಯೇ ‘ಆಪನ್​ಹೈಮರ್’ ಸಿನಿಮಾ?
ಆಪನ್​ಹೈಮರ್
Follow us
| Updated By: ರಾಜೇಶ್ ದುಗ್ಗುಮನೆ

Updated on: Mar 05, 2024 | 12:31 PM

ಮಾರ್ಚ್​ 10ರಂದು (ಭಾರತೀಯ ಕಾಲಮಾನ ಮಾರ್ಚ್ 11 ಮುಂಜಾನೆ 4:30 ) 96ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಹಾಲಿವುಡ್​ನ ಆಪನ್​ಹೈಮರ್’ ಸಿನಿಮಾ (Oppenheimer) ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡು ದಾಖಲೆ ಬರೆಯೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕ್ರಿಸ್ಟೋಫರ್ ನೋಲನ್ ನಿರ್ದೇಶನದ ಈ ಚಿತ್ರ ಬರೋಬ್ಬರಿ 13 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ‘ಪೂರ್ ಥಿಂಗ್ಸ್’ ಸಿನಿಮಾ 11 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ.  ಈ ಪೈಕಿ ಯಾವ ಸಿನಿಮಾ ಎಷ್ಟು ಪ್ರಶಸ್ತಿ ಬಾಚಿಕೊಳ್ಳಲಿದೆ ಎಂಬ ಕುತೂಹಲ ಮೂಡಿದೆ.

ಹಾಲಿವುಡ್ ಸಿನಿಮಾಗಳಿಗೆ ವಿಶ್ವಾದ್ಯಂತ ವೀಕ್ಷಕರು ಇದ್ದಾರೆ. ಸಿನಿಮಾದ ಕಂಟೆಂಟ್​ ಚೆನ್ನಾಗಿದ್ದರೆ ಅಂಥವುಗಳು ಭಾರತದಲ್ಲಿ ಭರ್ಜರಿ ಕಲೆಕ್ಷನ್​ ಮಾಡುತ್ತವೆ. ‘ಆಪನ್​ಹೈಮರ್​’ ಸಿನಿಮಾ ಕಳೆದ ವರ್ಷ ಜುಲೈ 21ರಂದು ಸಾವಿರಾರು ಪರದೆಗಳಲ್ಲಿ ರಿಲೀಸ್​ ಆಗಿ ಒಳ್ಳೆಯ ಕಮಾಯಿ ಮಾಡಿತ್ತು. ಈಗ ಆಸ್ಕರ್​ ರೇಸ್​ನಲ್ಲಿ  ಸಿನಿಮಾ ಮುಂದಿದೆ. ಈ ಚಿತ್ರ ಎಷ್ಟು ಪ್ರಶಸ್ತಿ ಬಾಚಿಕೊಳ್ಳಲಿದೆ ಎನ್ನುವ ಕುತೂಹಲ ಮೂಡಿದೆ.

ಹಾಲಿವುಡ್​ನ ಜನಪ್ರಿಯ ಕಲಾವಿದರಾದ ಕಿಲಿಯನ್​ ಮರ್ಫಿ, ರಾಬರ್ಟ್​ ಡೌನಿ ಜೂನಿಯರ್​, ಮ್ಯಾಟ್​ ಡೇಮನ್​, ಎಮಿಲಿ ಬ್ಲಂಟ್​ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ‘ಆಪನ್​ಹೈಮರ್’ ಚಿತ್ರದ ಅಭಿನಯಕ್ಕೆ ಕಿಲಿಯನ್ ಮರ್ಫಿ ಹೆಸರು ಅತ್ಯುತ್ತಮ ನಟ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ. ಮೊದಲ ಬಾರಿಗೆ ಐರಿಷ್ ನಟನ ಹೆಸರು ಆಸ್ಕರ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಂತೆ ಆಗಿದೆ. ಅವರು ಐರ್ಲೆಂಡ್​ನ ನಟ.

ಇದನ್ನೂ ಓದಿ: ‘ಆಪನ್​ಹೈಮರ್​’ ಯಶಸ್ಸಿನ ಬಳಿಕ ಹಾರರ್​ ಸಿನಿಮಾ ಮಾಡ್ತಾರೆ ಕ್ರಿಸ್ಟೋಫರ್​ ನೋಲನ್​​

ಕಳೆದ ವರ್ಷ ಭಾರತದ ಪಾಲಿಗೆ ಆಸ್ಕರ್ ಸಾಕಷ್ಟು ವಿಶೇಷವಾಗಿತ್ತು. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿತ್ತು. ಇದಲ್ಲದೆ, ‘ದಿ ಎಲಿಫಂಟ್ ವಿಸ್ಪರರ್ಸ್​’ ಸರಣಿ ಕೂಡ ಆಸ್ಕರ್ ಗೆದ್ದಿತ್ತು. ಈ ಬಾರಿ ಭಾರತದ ಯಾವ ಸಿನಿಮಾಗಳು ಆಸ್ಕರ್ ರೇಸ್​ನಲ್ಲಿ ಸ್ಥಾನ ಪಡೆಯೋಕೆ ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್