AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 11ಕ್ಕೆ ಆಸ್ಕರ್ ಅವಾರ್ಡ್ ಕಾರ್ಯಕ್ರಮ; ದಾಖಲೆ ಬರೆಯಲಿದೆಯೇ ‘ಆಪನ್​ಹೈಮರ್’ ಸಿನಿಮಾ?

ಹಾಲಿವುಡ್ ಸಿನಿಮಾಗಳಿಗೆ ವಿಶ್ವಾದ್ಯಂತ ವೀಕ್ಷಕರು ಇದ್ದಾರೆ. ಸಿನಿಮಾದ ಕಂಟೆಂಟ್​ ಚೆನ್ನಾಗಿದ್ದರೆ ಅಂಥವುಗಳು ಭಾರತದಲ್ಲಿ ಭರ್ಜರಿ ಕಲೆಕ್ಷನ್​ ಮಾಡುತ್ತವೆ. ‘ಆಪನ್​ಹೈಮರ್​’ ಸಿನಿಮಾ ಕಳೆದ ವರ್ಷ ಜುಲೈ 21ರಂದು ಸಾವಿರಾರು ಪರದೆಗಳಲ್ಲಿ ರಿಲೀಸ್​ ಆಗಿ ಒಳ್ಳೆಯ ಕಮಾಯಿ ಮಾಡಿತ್ತು. ಈಗ ಆಸ್ಕರ್​ ರೇಸ್​ನಲ್ಲಿ  ಸಿನಿಮಾ ಮುಂದಿದೆ.

ಮಾರ್ಚ್ 11ಕ್ಕೆ ಆಸ್ಕರ್ ಅವಾರ್ಡ್ ಕಾರ್ಯಕ್ರಮ; ದಾಖಲೆ ಬರೆಯಲಿದೆಯೇ ‘ಆಪನ್​ಹೈಮರ್’ ಸಿನಿಮಾ?
ಆಪನ್​ಹೈಮರ್
TV9 Web
| Edited By: |

Updated on: Mar 05, 2024 | 12:31 PM

Share

ಮಾರ್ಚ್​ 10ರಂದು (ಭಾರತೀಯ ಕಾಲಮಾನ ಮಾರ್ಚ್ 11 ಮುಂಜಾನೆ 4:30 ) 96ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಹಾಲಿವುಡ್​ನ ಆಪನ್​ಹೈಮರ್’ ಸಿನಿಮಾ (Oppenheimer) ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡು ದಾಖಲೆ ಬರೆಯೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕ್ರಿಸ್ಟೋಫರ್ ನೋಲನ್ ನಿರ್ದೇಶನದ ಈ ಚಿತ್ರ ಬರೋಬ್ಬರಿ 13 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ‘ಪೂರ್ ಥಿಂಗ್ಸ್’ ಸಿನಿಮಾ 11 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ.  ಈ ಪೈಕಿ ಯಾವ ಸಿನಿಮಾ ಎಷ್ಟು ಪ್ರಶಸ್ತಿ ಬಾಚಿಕೊಳ್ಳಲಿದೆ ಎಂಬ ಕುತೂಹಲ ಮೂಡಿದೆ.

ಹಾಲಿವುಡ್ ಸಿನಿಮಾಗಳಿಗೆ ವಿಶ್ವಾದ್ಯಂತ ವೀಕ್ಷಕರು ಇದ್ದಾರೆ. ಸಿನಿಮಾದ ಕಂಟೆಂಟ್​ ಚೆನ್ನಾಗಿದ್ದರೆ ಅಂಥವುಗಳು ಭಾರತದಲ್ಲಿ ಭರ್ಜರಿ ಕಲೆಕ್ಷನ್​ ಮಾಡುತ್ತವೆ. ‘ಆಪನ್​ಹೈಮರ್​’ ಸಿನಿಮಾ ಕಳೆದ ವರ್ಷ ಜುಲೈ 21ರಂದು ಸಾವಿರಾರು ಪರದೆಗಳಲ್ಲಿ ರಿಲೀಸ್​ ಆಗಿ ಒಳ್ಳೆಯ ಕಮಾಯಿ ಮಾಡಿತ್ತು. ಈಗ ಆಸ್ಕರ್​ ರೇಸ್​ನಲ್ಲಿ  ಸಿನಿಮಾ ಮುಂದಿದೆ. ಈ ಚಿತ್ರ ಎಷ್ಟು ಪ್ರಶಸ್ತಿ ಬಾಚಿಕೊಳ್ಳಲಿದೆ ಎನ್ನುವ ಕುತೂಹಲ ಮೂಡಿದೆ.

ಹಾಲಿವುಡ್​ನ ಜನಪ್ರಿಯ ಕಲಾವಿದರಾದ ಕಿಲಿಯನ್​ ಮರ್ಫಿ, ರಾಬರ್ಟ್​ ಡೌನಿ ಜೂನಿಯರ್​, ಮ್ಯಾಟ್​ ಡೇಮನ್​, ಎಮಿಲಿ ಬ್ಲಂಟ್​ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ‘ಆಪನ್​ಹೈಮರ್’ ಚಿತ್ರದ ಅಭಿನಯಕ್ಕೆ ಕಿಲಿಯನ್ ಮರ್ಫಿ ಹೆಸರು ಅತ್ಯುತ್ತಮ ನಟ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ. ಮೊದಲ ಬಾರಿಗೆ ಐರಿಷ್ ನಟನ ಹೆಸರು ಆಸ್ಕರ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಂತೆ ಆಗಿದೆ. ಅವರು ಐರ್ಲೆಂಡ್​ನ ನಟ.

ಇದನ್ನೂ ಓದಿ: ‘ಆಪನ್​ಹೈಮರ್​’ ಯಶಸ್ಸಿನ ಬಳಿಕ ಹಾರರ್​ ಸಿನಿಮಾ ಮಾಡ್ತಾರೆ ಕ್ರಿಸ್ಟೋಫರ್​ ನೋಲನ್​​

ಕಳೆದ ವರ್ಷ ಭಾರತದ ಪಾಲಿಗೆ ಆಸ್ಕರ್ ಸಾಕಷ್ಟು ವಿಶೇಷವಾಗಿತ್ತು. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿತ್ತು. ಇದಲ್ಲದೆ, ‘ದಿ ಎಲಿಫಂಟ್ ವಿಸ್ಪರರ್ಸ್​’ ಸರಣಿ ಕೂಡ ಆಸ್ಕರ್ ಗೆದ್ದಿತ್ತು. ಈ ಬಾರಿ ಭಾರತದ ಯಾವ ಸಿನಿಮಾಗಳು ಆಸ್ಕರ್ ರೇಸ್​ನಲ್ಲಿ ಸ್ಥಾನ ಪಡೆಯೋಕೆ ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ