AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oscar Award 20223: ಆಸ್ಕರ್ ಅವಾರ್ಡ್ ನಡೆಯೋದು ಎಲ್ಲಿ, ಯಾವಾಗ, ಎಷ್ಟು ಗಂಟೆಗೆ? ಇಲ್ಲಿದೆ ವಿವರ  

ಕಳೆದ ವರ್ಷ ಆಸ್ಕರ್ ಸಮಾರಂಭದಲ್ಲಿ ಪತ್ನಿಯ ಬಗ್ಗೆ ಜೋಕ್ ಮಾಡಿದ ಕಾಮಿಡಿ ನಟ ಕ್ರಿಸ್ ರಾಕ್ ಕೆನ್ನೆಗೆ ವಿಲ್ ಸ್ಮಿತ್ ಹೊಡೆದಿದ್ದರು. ಇದು ಸಾಕಷ್ಟು ವಿವಾದ ಹುಟ್ಟುಹಾಕಿತ್ತು. ಈ ಬಾರಿ ಆ ರೀತಿ ಆಗದಂತೆ ನೋಡಿಕೊಳ್ಳಲು ಎಚ್ಚರಿಕೆ ವಹಿಸಲಾಗುತ್ತಿದೆ.  

Oscar Award 20223: ಆಸ್ಕರ್ ಅವಾರ್ಡ್ ನಡೆಯೋದು ಎಲ್ಲಿ, ಯಾವಾಗ, ಎಷ್ಟು ಗಂಟೆಗೆ? ಇಲ್ಲಿದೆ ವಿವರ  
ಆಸ್ಕರ್ 2023
ರಾಜೇಶ್ ದುಗ್ಗುಮನೆ
|

Updated on: Mar 11, 2023 | 1:39 PM

Share

95ನೇ ಆಸ್ಕರ್ ಅವಾರ್ಡ್ (Oscar Award) ಕಾರ್ಯಕ್ರಮಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಮಾರ್ಚ್​ 12ರಂದು ಅಮೆರಿಕದ ಲಾಸ್ ಏಂಜಲೀಸ್​ನಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತಿವರ್ಷದಂತೆ ಈ ವರ್ಷವೂ ಅಕಾಡೆಮಿ ಪ್ರಶಸ್ತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಹಾಲಿವುಡ್ ಅನೇಕ ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಕಳೆದ ವರ್ಷ ಆಸ್ಕರ್ ಸಮಾರಂಭದಲ್ಲಿ ಪತ್ನಿಯ ಬಗ್ಗೆ ಜೋಕ್ ಮಾಡಿದ ಕಾಮಿಡಿ ನಟ ಕ್ರಿಸ್ ರಾಕ್ ಕೆನ್ನೆಗೆ ವಿಲ್ ಸ್ಮಿತ್ ಹೊಡೆದಿದ್ದರು. ಇದು ಸಾಕಷ್ಟು ವಿವಾದ ಹುಟ್ಟುಹಾಕಿತ್ತು. ಈ ಬಾರಿ ಆ ರೀತಿ ಆಗದಂತೆ ನೋಡಿಕೊಳ್ಳಲು ಎಚ್ಚರಿಕೆ ವಹಿಸಲಾಗುತ್ತಿದೆ.

ಎಲ್ಲಿ, ಯಾವಾಗ?

2023ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಮಾರ್ಚ್​ 12ರಂದು ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​ನಲ್ಲಿ ನಡೆಯಲಿದೆ. ಅಮೆರಿಕದ ಕಾಲಮಾನ ರಾತ್ರಿ 8 ಗಂಟೆಗೆ ಕಾರ್ಯಕ್ರಮ ಆರಂಭ ಆಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಮಾರ್ಚ್​ 13ರ ಮುಂಜಾನೆ 5.30ಕ್ಕೆ ಕಾರ್ಯಕ್ರಮ ಪ್ರಾರಂಭ ಆಗಲಿದೆ. ಕೆಲವು ಗಂಟೆಗಳ ಕಾಲ ಈ ಕಾರ್ಯಮ ನಡೆಯಲಿದೆ.

ಇದನ್ನೂ ಓದಿ
Image
ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ?
Image
Samantha: ಮತ್ತೆ ಮದುವೆ ಆಗಲಿದ್ದಾರೆ ಸಮಂತಾ; ಆದರೆ ನೀವಂದುಕೊಂಡ ರೀತಿಯಲ್ಲಲ್ಲ
Image
Jr NTR: ಆಸ್ಕರ್​ ಸಮಾರಂಭದ ಆರಂಭಕ್ಕೂ ಮುನ್ನವೇ ಬೇಸರದ ಸುದ್ದಿ ನೀಡಿದ ಜೂನಿಯರ್​ ಎನ್​ಟಿಆರ್​

ಆಸ್ಕರ್ ಕಾರ್ಯಕ್ರಮ ಎಲ್ಲಿ ಪ್ರಸಾರ ಕಾಣುತ್ತೆ?

ಆಸ್ಕರ್​ ಕಾರ್ಯಕ್ರಮವನ್ನು ವಿವಿಧ ಕಡೆಗಳಲ್ಲಿ ನೋಡಲು ಅವಕಾಶ ಇದೆ. ಹುಲು ಲೈವ್ ಟಿವಿನಲ್ಲಿ ಇದನ್ನು ವೀಕ್ಷಿಸಬಹುದು. ಯೂಟ್ಯೂಬ್ ಟಿವಿಯಲ್ಲೂ ನೀವು ಇದನ್ನು ಉಚಿತವಾಗಿ ವೀಕ್ಷಿಸಬಹುದು. ಎಟಿ ಆ್ಯಂಡ್ ಟಿ ಟಿವಿ ಹಾಗೂ ಫುಬೋ ಟಿವಿಯಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಇದೆ. ಎಬಿಸಿ ವೆಬ್​ಸೈಟ್​ನಲ್ಲಿ ಆಸ್ಕರ್ ಕಾರ್ಯಕ್ರಮ ಉಚಿತವಾಗಿ ವೀಕ್ಷಿಸಬಹುದು.

ಹೋಸ್ಟ್ ಮಾಡೋದು ಯಾರು?

ಪ್ರತಿ ವರ್ಷ ಆಸ್ಕರ್​ ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿರುತ್ತದೆ. ಈ ಪ್ರತಿಷ್ಠಿತ ಕಾರ್ಯಕ್ರಮವನ್ನು ನಡೆಸಿಕೊಡೋಕೆ ಅನುಭವಿಗಳನ್ನೇ ಆಯ್ಕೆ ಮಾಡಲಾಗುತ್ತದೆ. ಈ ವರ್ಷ ಜಿಮ್ಮಿ ಕಿಮ್ಮೆಲ್ ಅವರು ಕಾರ್ಯಕ್ರಮವನ್ನು ಹೋಸ್ಟ್ ಮಾಡಲಿದ್ದಾರೆ. 2018ರಿಂದ ಈಚೆಗೆ ಅವರು ಎರಡು ಬಾರಿ ಆಸ್ಕರ್ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ದೀಪಿಕಾ ಪಡುಕೋಣೆ ಅವರು ಪ್ರಶಸ್ತಿ ನೀಡಲಿದ್ದಾರೆ.

ಇದನ್ನೂ ಓದಿ: Jr NTR: ಆಸ್ಕರ್​ ಸಮಾರಂಭದ ಆರಂಭಕ್ಕೂ ಮುನ್ನವೇ ಬೇಸರದ ಸುದ್ದಿ ನೀಡಿದ ಜೂನಿಯರ್​ ಎನ್​ಟಿಆರ್​

ಈ ಬಾರಿ ಭಾರತಕ್ಕೆ ವಿಶೇಷ ಏಕೆ?

‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಬೆಸ್ಟ್​ ಒರಿಜಿನಲ್​ ಸಾಂಗ್​ ವಿಭಾಗದಲ್ಲಿ ನಾಮಿನೇಟ್​ ಆಗಿದೆ. ಭಾರತದ ‘ಆಲ್​ ದಟ್​ ಬ್ರೀಥ್ಸ್​’, ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಕಿರುಚಿತ್ರಗಳು ಕೂಡ ನಾಮಿನೇಟ್​ ಆಗಿದ್ದು, ಭಾರತಕ್ಕೆ ಈ ಬಾರಿ ಆಸ್ಕರ್​ ಗೆಲ್ಲುವ ಚಾನ್ಸ್​ ದಟ್ಟವಾಗಿದೆ. ಅಲಿಸನ್​ ವಿಲಿಯಮ್ಸ್​ ಮತ್ತು ರಿಝ್​ ಅಹ್ಮದ್​ ಅವರು ಈ ಬಾರಿಯ ಆಸ್ಕರ್​ ನಾಮಿನೇಷನ್​ ಲಿಸ್ಟ್​ ಪ್ರಕಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ