AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ವಿಜೇತ ‘ಪ್ಯಾರಸೈಟ್’ ಸಿನಿಮಾದ ನಟ ಅನುಮಾನಾಸ್ಪದ ಸಾವು

Lee Sun-kyu: ಆಸ್ಕರ್ ವಿಜೇತ ‘ಪ್ಯಾರಸೈಟ್’ ಸಿನಿಮಾದ ನಟ ಲೀ ಸನ್ ಕ್ಯೂನ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಆಸ್ಕರ್ ವಿಜೇತ ‘ಪ್ಯಾರಸೈಟ್’ ಸಿನಿಮಾದ ನಟ ಅನುಮಾನಾಸ್ಪದ ಸಾವು
ಮಂಜುನಾಥ ಸಿ.
|

Updated on: Dec 27, 2023 | 8:16 PM

Share

ಅತ್ಯುತ್ತಮ ಸಿನಿಮಾ, ಅತ್ಯುತ್ತಮ ವಿದೇಶಿ ಸಿನಿಮಾ, ಅತ್ಯುತ್ತಮ ಚಿತ್ರಕತೆ, ಅತ್ಯುತ್ತಮ ನಿರ್ದೇಶಕ ವಿಭಾಗಗಳಲ್ಲಿ ಆಸ್ಕರ್ (2020)(Oscar) ಗೆದ್ದಿದ್ದ ಕೊರಿಯನ್ ಸಿನಿಮಾ ‘ಪ್ಯಾರಸೈಟ್​’ನಲ್ಲಿ ನಟಿಸಿದ್ದ ದಕ್ಷಿಣ ಕೊರಿಯಾದ ನಟ ಲೀ ಸನ್ ಕ್ಯೂನ್ (Lee Sun-kyun) ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹ ಕಾರಿನಲ್ಲಿ ಪತ್ತೆಯಾಗಿದೆ. ಅವರು ಮಾದಕ ವಸ್ತು ಸೇವನೆ ಆರೋಪಕ್ಕೆ ಒಳಗಾಗಿದ್ದು, ಹಲವು ತಿಂಗಳಿನಿಂದ ವಿಚಾರಣೆ ಎದುರಿಸುತ್ತಿದ್ದರು. ಇದರ ನಡುವೆಯೇ ಅವರು ಸಾವನ್ನಪ್ಪಿರುವುದು ಅನುಮಾನಗಳಿಗೆ ಕಾರಣವಾಗಿದೆ.

ವರದಿಗಳ ಪ್ರಕಾರ ಲೀ ಸನ್ ಕ್ಯೂನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಅನುಮಾನಿಸಲಾಗುತ್ತಿದೆ. ಲೀ ಸನ್ ಕ್ಯೂನ್ ತಮ್ಮ ನಿವಾಸದಲ್ಲಿ ನೋಟ್ ಒಂದನ್ನು ಬರೆದಿಟ್ಟು ಕಾರಿನಲ್ಲಿ ತೆರಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಕಳೆದ ಅಕ್ಟೋಬರ್​ನಲ್ಲಿ ಲೀ ಸನ್ ಕ್ಯೂನ್ ವಿರುದ್ಧ ಮಾದಕ ವಸ್ತು ಸೇವನೆ ಪ್ರಕರಣ ದಾಖಲಿಸಲಾಗಿತ್ತು. ಸಿಯೋಲ್​ನ ಬಾರ್ ಒಂದರಲ್ಲಿ ವೇಯಟರ್​ ಜೊತೆ ಮಾದಕ ವಸ್ತು ಸೇವಿಸಿದ್ದಾರೆ ಎನ್ನಲಾಗಿತ್ತು. ಆದರೆ ತಾವು ಮಾದಕ ವಸ್ತು ಸೇವಿಸಿಲ್ಲವೆಂದು ಲೀ ಸನ್ ಕ್ಯೂನ್ ಹೇಳಿದ್ದರು. ಬಾರ್​ನ ವೇಟ್ರೆಸ್ ನೀಡಿದ ಡ್ರಿಂಕ್ಸ್ ಸೇವಿಸಿದೆ, ಅದು ಮಾದಕ ವಸ್ತು ಎಂಬುದು ನನಗೆ ಗೊತ್ತಿರಲಿಲ್ಲ ಎಂದಿದ್ದರು. ಆದರೆ ಆ ಮಹಿಳೆಯರು, ಲೀ ನನ್ನ ನಿವಾಸಕ್ಕೆ ಬಂದು ಹಲವು ಬಾರಿ ಗಾಂಜಾ ಸೇವನೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ:Toxic: ಆಸ್ಕರ್​ ಪ್ರಶಸ್ತಿ ಮೇಲೆ ಯಶ್​ ಕಣ್ಣು? ‘ಟಾಕ್ಸಿಕ್​’ ಸಿನಿಮಾ ಹಿಂದಿನ ಲೆಕ್ಕಾಚಾರ ಹೀಗಿದೆ..

ಆದರೆ ಮಹಿಳೆಯರ ಆರೋಪಗಳನ್ನು ತಳ್ಳಿ ಹಾಕಿದ್ದ ಲೀ, ನಾನು ಮಂಪರು ಪರೀಕ್ಷೆಗೆ ಸಿದ್ಧ ಎಂದು ಹೇಳಿದ್ದರು. ಲೀಯ ಮಾದಕ ವಸ್ತು ಸೇವನಾ ಪರೀಕ್ಷೆಯನ್ನು ನಡೆಸಲಾಗಿ ಅದರಲ್ಲಿ ನಿರ್ದಿಷ್ಟ ಫಲಿತಾಂಶ ಬಂದಿರಲಿಲ್ಲ. ಹಾಗಾಗಿ ಲೀ ಅನ್ನು ವಿಚಾರಣೆ ಮಾಡಲಾಗುತ್ತಿತ್ತು. ಮೂರು ಬಾರಿ ಲೀ ಅನ್ನು ವಿಚಾರಣೆ ಮಾಡಲಾಗಿತ್ತು. ಸಾಯುವ 19 ಗಂಟೆ ಮುಂಚೆ ಸಹ ಲೀ ವಿಚಾರಣೆ ಎದುರಿಸಿದ್ದರು.

ಲೀ ಸಾವಿನ ಬಳಿಕ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಇಲಾಖೆ, ‘‘ತನಿಖೆಯ ನಡುವೆ ಲೀ ಸಾವನ್ನಪ್ಪಿರುವುದು ಖೇದಕರ, ಆದರೆ ಅವರ ಒಪ್ಪಿಗೆ ಪಡೆದುಕೊಂಡೇ ನಾವು ಅವರನ್ನು ವಿಚಾರಣೆಗೆ ಒಳಪಡಿಸಿದ್ದೆವು’’ ಎಂದಿದ್ದಾರೆ. ಆದರೆ ಲೀ ಸಾವಿನ ಬಳಿಕ ಪೊಲೀಸರ ಬಗ್ಗೆ ಟೀಕೆಗಳು ಎದ್ದಿವೆ. ‘ಸೆಲೆಬ್ರಿಟಿಗಳು ಸಹ ಮನುಷ್ಯರೆ’ ಎಂಬ ಹ್ಯಾಷ್​ಟ್ಯಾಗ್ ಟ್ರೆಂಡ್ ಆಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ