AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ಆಸ್ಕರ್​ ಪ್ರಶಸ್ತಿ ನೀಡಲು ವೇದಿಕೆ ಏರಲಿರುವ ದೀಪಿಕಾ ಪಡುಕೋಣೆ; ಹಾಲಿವುಡ್​ ಮಂದಿ ಜೊತೆ ಅವಕಾಶ

95th Academy Awards | Oscars 2023: ಮಾರ್ಚ್​​ 12ರಂದು ಲಾಸ್​ ಏಂಜಲಿಸ್​ನಲ್ಲಿ ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಪ್ರಶಸ್ತಿ ವಿಜೇತರಿಗೆ ಈ ವೇದಿಕೆಯಲ್ಲಿ ನಟಿ ದೀಪಿಕಾ ಪಡುಕೋಣೆ ಅವರು ಟ್ರೋಫಿ ನೀಡಲಿದ್ದಾರೆ.

Deepika Padukone: ಆಸ್ಕರ್​ ಪ್ರಶಸ್ತಿ ನೀಡಲು ವೇದಿಕೆ ಏರಲಿರುವ ದೀಪಿಕಾ ಪಡುಕೋಣೆ; ಹಾಲಿವುಡ್​ ಮಂದಿ ಜೊತೆ ಅವಕಾಶ
ದೀಪಿಕಾ ಪಡುಕೋಣೆ
ಮದನ್​ ಕುಮಾರ್​
|

Updated on: Mar 03, 2023 | 1:14 PM

Share

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ದಿನದಿಂದ ದಿನಕ್ಕೆ ಖ್ಯಾತಿ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಅವರಿಗೆ ಅಭಿಮಾನಿಗಳು ಇದ್ದಾರೆ. ಹಾಲಿವುಡ್​ ಮಂದಿಗೂ ಅವರ ಪರಿಚಯ ಇದೆ. ಜಾಗತಿಕ ಮಟ್ಟದ ಪ್ರತಿಷ್ಠಿತ ವೇದಿಕೆಗಳಲ್ಲೂ ದೀಪಿಕಾ ಪಡುಕೋಣೆ ಅವರಿಗೆ ಅವಕಾಶಗಳು ಸಿಗುತ್ತಿದೆ. ವಿದೇಶದಲ್ಲಿನ ಅನೇಕ ಸಿನಿಮೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಅವರು ಮಿಂಚಿದ್ದಾರೆ. ಈಗ ಅವರಿಗೆ ಆಸ್ಕರ್​ (Oscar Awards) ವೇದಿಕೆ ಏರುವ ಅವಕಾಶ ಸಿಕ್ಕಿದೆ. ಹಲವು ಹಾಲಿವುಡ್​ ಸೆಲೆಬ್ರಿಟಿಗಳ ಜೊತೆ ಇಂಥ ಅವಕಾಶ ಪಡೆದ ಭಾರತದ ಸೆಲೆಬ್ರಿಟಿ ಎಂಬ ಖ್ಯಾತಿಗೆ ಅವರು ಪಾತ್ರರಾಗುತ್ತಿದ್ದಾರೆ. ಈ ಸುದ್ದಿ ಕೇಳಿ ದೀಪಿಕಾ ಪಡುಕೋಣೆ ಫ್ಯಾನ್ಸ್​ ಖುಷಿ ಆಗಿದ್ದಾರೆ. 95ನೇ ಅಕಾಡೆಮಿ ಅವಾರ್ಡ್ಸ್​ (95th Academy Awards) ಕಾರ್ಯಕ್ರಮದಲ್ಲಿ ಆಸ್ಕರ್​ ಪ್ರಶಸ್ತಿ ಗೆದ್ದವರಿಗೆ ದೀಪಿಕಾ ಪಡುಕೋಣೆ ಅವರು ಟ್ರೋಫಿ ನೀಡಲಿದ್ದಾರೆ.

ಈ ಹಿಂದೆ ನಟಿ ಪ್ರಿಯಾಂಕಾ ಚೋಪ್ರಾ ಅವರು ಆಸ್ಕರ್ ಪ್ರಶಸ್ತಿ ಪ್ರದಾನ ಮಾಡಿದ್ದರು. ಈಗ ದೀಪಿಕಾ ಪಡುಕೋಣೆ ಅವರಿಗೆ ಆ ಅವಕಾಶ ಸಿಗುತ್ತಿದೆ. ಮಾರ್ಚ್​​ 12ರಂದು ಲಾಸ್​ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹಲವು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ಆ ಪೈಕಿ ಒಂದು ವಿಭಾಗದಲ್ಲಿ ಪ್ರಶಸ್ತಿ ಗೆದ್ದವರಿಗೆ ದೀಪಿಕಾ ಪಡುಕೋಣೆ ಅವರು ಟ್ರೋಫಿ ಹಸ್ತಾಂತರಿಸಲಿದ್ದಾರೆ.

ಇದನ್ನೂ ಓದಿ
Image
119 ಕೋಟಿ ರೂಪಾಯಿ ಕೊಟ್ಟು ಮನೆ ಖರೀದಿಸಿದ ರಣವೀರ್​-ದೀಪಿಕಾ; ಇದರ ವಿಶೇಷತೆಗಳೇನು?
Image
Brahmastra: ಮಾಜಿ ಪ್ರೇಮಿಯ ಸಿನಿಮಾದಲ್ಲಿ ದೀಪಿಕಾ ಕದ್ದುಮುಚ್ಚಿ ನಟನೆ? ಝೂಮ್​ ಮಾಡಿ ಸಾಕ್ಷಿ ತೋರಿಸಿದ ನೆಟ್ಟಿಗರು
Image
Deepika Padukone: ಹೈದರಾಬಾದ್​ನಲ್ಲಿ ಶೂಟಿಂಗ್ ಬಿಟ್ಟು ಆಸ್ಪತ್ರೆಗೆ ಓಡಿದ ದೀಪಿಕಾ ಪಡುಕೋಣೆ; ಅಂಥದ್ದೇನಾಯ್ತು?
Image
Cannes 2022: ಕಾನ್ ಫಿಲ್ಮ್​ ಫೆಸ್ಟಿವಲ್​ನಲ್ಲಿ ಮಿಂಚಿದ ದೀಪಿಕಾ; ಇಲ್ಲಿವೆ ಫೋಟೋಗಳು

ಇದನ್ನೂ ಓದಿ: ‘ಪಠಾಣ್​’ ಗೆದ್ದಿದ್ದಕ್ಕೆ ಶಾರುಖ್​ ಖಾನ್​ಗೆ ದೀಪಿಕಾ ಸಿಹಿ ಮುತ್ತು

ತಮಗೆ ಈ ಚಾನ್ಸ್​ ಸಿಕ್ಕಿದೆ ಎಂಬುದನ್ನು ದೀಪಿಕಾ ಪಡುಕೋಣೆ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದಾರೆ. ಅದಕ್ಕೆ ಸೆಲೆಬ್ರಿಟಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ದೀಪಿಕಾ ಪತಿ ರಣವೀರ್​ ಸಿಂಗ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ನಟಿ ನೇಹಾ ಧೂಪಿಯಾ ಅವರು, ‘ನಿಮ್ಮನ್ನು ನೋಡಲು ಕಾಯುತ್ತಿದ್ದೇನೆ ದೀಪು’ ಎಂದು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ವಿಮಾನದಲ್ಲಿ ಜನಸಾಮಾನ್ಯರ ಜೊತೆ ಪ್ರಯಾಣಿಸಿದ ದೀಪಿಕಾ ಪಡುಕೋಣೆ; ಗುರುತು ತಿಳಿಯದಂತೆ ಮಾಡಲು ನಟಿ ಮಾಡಿದ್ದೇನು?

ದೀಪಿಕಾ ಪಡುಕೋಣೆ ಅವರು ಈ ವರ್ಷ ಆರಂಭದಲ್ಲಿಯೇ ಗೆಲುವಿನ ನಗು ಬೀರಿದ್ದಾರೆ. ಶಾರುಖ್​ ಖಾನ್​ ಜೊತೆ ಅವರು ನಟಿಸಿದ ‘ಪಠಾಣ್​’ ಚಿತ್ರ ಸೂಪರ್​ ಹಿಟ್​ ಆಗಿದೆ. ಅದರ ಬೆನ್ನಲ್ಲೇ ಆಸ್ಕರ್​ ವೇದಿಕೆ ಏರುವ ಅವಕಾಶ ಸಿಗುತ್ತಿರುವುದರಿಂದ ಅವರ ಚಾರ್ಮ್​ ಹೆಚ್ಚಿದೆ.

ಈ ಬಾರಿ ಭಾರತದ ಪಾಲಿಗೆ ಆಸ್ಕರ್​ ಪ್ರಶಸ್ತಿ ಸಮಾರಂಭ ವಿಶೇಷ ಎನಿಸಿಕೊಂಡಿದೆ. ಯಾಕೆಂದರೆ, ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಬೆಸ್ಟ್​ ಒರಿಜಿನಲ್​ ಸಾಂಗ್​ ವಿಭಾಗದಲ್ಲಿ ನಾಮಿನೇಟ್​ ಆಗಿದೆ. ಭಾರತದ ‘ಆಲ್​ ದಟ್​ ಬ್ರೀಥ್ಸ್​’, ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಕಿರುಚಿತ್ರಗಳು ಕೂಡ ನಾಮಿನೇಟ್​ ಆಗಿದ್ದು, ಭಾರತಕ್ಕೆ ಈ ಬಾರಿ ಆಸ್ಕರ್​ ಗೆಲ್ಲುವ ಚಾನ್ಸ್​ ದಟ್ಟವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್