AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ-ನಿಕ್​ ದಾಂಪತ್ಯದಲ್ಲಿ ಬಿರುಕು? ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹೆಸರು ಬದಲಿಸಿದ ಪಿಗ್ಗಿ

ಪ್ರಿಯಾಂಕಾ ಹಾಗೂ ನಿಕ್​ ಡಿಸೆಂಬರ್​ 1, 2018ರಂದು ವಿವಾಹವಾಗಿದ್ದರು. ಪ್ರಿಯಾಂಕಾ ನಿಕ್​ಗಿಂತಲೂ ದೊಡ್ಡವರು. ವಯಸ್ಸಿನ ಅಂತರ ಇವರಿಗೆ ಅಡ್ಡಿ ಆಗಲೇ ಇಲ್ಲ. ಪ್ರಿಯಾಂಕಾ ಅವರು ಮದುವೆ ನಂತರ ನ್ಯೂಯಾರ್ಕ್​ನಲ್ಲಿಯೇ ಸೆಟಲ್​ ಆಗಿದ್ದಾರೆ.

ಪ್ರಿಯಾಂಕಾ-ನಿಕ್​ ದಾಂಪತ್ಯದಲ್ಲಿ ಬಿರುಕು? ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹೆಸರು ಬದಲಿಸಿದ ಪಿಗ್ಗಿ
ಪ್ರಿಯಾಂಕಾ ಚೋಪ್ರಾ, ನಿಕ್​ ಜೋನಸ್​
TV9 Web
| Edited By: |

Updated on:Nov 23, 2021 | 7:49 AM

Share

ಸಮಂತಾ ಅವರು ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ‘ಅಕ್ಕಿನೇನಿ’ ಸರ್​ನೇಮ್​ಅನ್ನು ತೆಗೆದುಹಾಕಿದ್ದು ವಿಚ್ಛೇದನ ವದಂತಿಗೆ ಕಾರಣವಾಗಿತ್ತು. ನಂತರ ಅದು ನಿಜವೂ ಆಗಿತ್ತು. ಹೆಸರು ಬದಲಿಸಿದ ಕೆಲವೇ ತಿಂಗಳಲ್ಲಿ ಅವರು ಪತಿ ನಾಗ ಚೈತನ್ಯ ಅವರಿಂದ ದೂರವಾದರು. ಈಗ ಪ್ರಿಯಾಂಕಾ ಚೋಪ್ರಾ ಕೂಡ ಇದೇ ರೀತಿ ನಡೆದುಕೊಂಡಿದ್ದಾರೆ. ಇದರಿಂದ ನಿಕ್​ ಜೋನಸ್​ ಹಾಗೂ ಪ್ರಿಯಾಂಕಾ ದಾಂಪತ್ಯ ಅಂತ್ಯವಾಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಜೋರಾಗಿ ಚರ್ಚೆ ನಡೆಯುತ್ತಿದೆ. ಈ ವದಂತಿ ಸುಳ್ಳಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಪ್ರಿಯಾಂಕಾ ಹಾಗೂ ನಿಕ್​ ಡಿಸೆಂಬರ್​ 1, 2018ರಂದು ವಿವಾಹವಾಗಿದ್ದರು. ವಯಸ್ಸಿನಲ್ಲಿ ನಿಕ್​ಗಿಂತಲೂ ಪ್ರಿಯಾಂಕಾ ದೊಡ್ಡವರು. ವಯಸ್ಸಿನ ಅಂತರ ಇವರಿಗೆ ಅಡ್ಡಿ ಆಗಲೇ ಇಲ್ಲ. ಪ್ರಿಯಾಂಕಾ ಅವರು ಮದುವೆ ಆದ ನಂತರ ನ್ಯೂಯಾರ್ಕ್​ನಲ್ಲಿಯೇ ಸೆಟಲ್​ ಆಗಿದ್ದಾರೆ. ಅಲ್ಲಿಯೇ ಐಷಾರಾಮಿ ಹೋಟೆಲ್ ಉದ್ಯಮ ​ಕೂಡ ಓಪನ್​ ಮಾಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲೂ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಅವರ ವಿಚ್ಛೇದನ ವದಂತಿ ಹುಟ್ಟಿಕೊಂಡಿದೆ.

ನಿಕ್​ ಜೋನಸ್​ ಜತೆ ಮದುವೆ ಆದ ನಂತರ ಪ್ರಿಯಾಂಕಾ ಚೋಪ್ರಾ ಇನ್​​ಸ್ಟಾಗ್ರಾಮ್​ ಖಾತೆಯಲ್ಲಿ ತಮ್ಮ ಹೆಸರಿನ ಜತೆ ಜೋನಸ್​ ಎಂದು ಸೇರಿಸಿಕೊಂಡಿದ್ದರು. ಈಗ ಜೋನಸ್​ ಹೆಸರನ್ನು ತೆಗೆದು ಹಾಕಿದ್ದಾರೆ. ಈ ಮೂಲಕ ಪ್ರಿಯಾಂಕಾ ಚೋಪ್ರಾ ಎಂದಷ್ಟೇ ಇಟ್ಟಿದ್ದಾರೆ. ಇದು ವಿಚ್ಛೇದನ ವದಂತಿ ಹುಟ್ಟಿಕೊಳ್ಳೋಕೆ ಕಾರಣವಾಗಿದೆ.

ಪ್ರಿಯಾಂಕಾ  ವಿದೇಶದಲ್ಲಿ ಇದ್ದುಕೊಂಡು ಭಾರತೀಯ ಸಂಸ್ಕೃತಿಯನ್ನು ಆಚರಿಸುತ್ತಿದ್ದಾರೆ. ನಿಕ್​ಗೂ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸಿದ್ದಾರೆ. ಇತ್ತೀಚೆಗೆ ದೀಪಾವಳಿ ಹಬ್ಬವನ್ನು ಪ್ರಿಯಾಂಕಾ ಚೋಪ್ರಾ ಸಂಭ್ರಮದಿಂದ ಆಚರಿಸಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ‘ನನ್ನ ಒಳ ಉಡುಪು ತೋರಿಸುವಂತೆ ನಿರ್ದೇಶಕರು ಹೇಳಿದ್ದರು’; ಇದು ಪ್ರಿಯಾಂಕಾ ಚೋಪ್ರಾ ಬದುಕಿನ ಕರಾಳ ಅನುಭವ

Priyanka Chopra: ಬರೋಬ್ಬರಿ ₹ 2.1 ಕೋಟಿ ಮೊತ್ತದ ಎಂಗೇಜ್​ಮೆಂಟ್ ರಿಂಗ್ ಕುರಿತು ಕುತೂಹಲಕರ ವಿಚಾರ ಹಂಚಿಕೊಂಡ ಪ್ರಿಯಾಂಕಾ

Published On - 9:52 pm, Mon, 22 November 21

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!