AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಕ್ಷನ್ ದೃಶ್ಯದ ವೇಳೆ ಪ್ರಿಯಾಂಕಾ ಚೋಪ್ರಾ ಕತ್ತಿಗೆ ಆಯ್ತು ಗಾಯ

ಆ್ಯಕ್ಷನ್ ಸಿನಿಮಾಗಳನ್ನು ಮಾಡೋ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆ ಎದುರಾಗೋದು ಸಹಜ. ಹೀಗಾಗಿಯೇ ಪ್ರಿಯಾಂಕಾ ತೊಂದರೆ ಅನುಭವಿಸಿದ್ದಾರೆ.  ಈ ಮೊದಲು ಕೂಡ ಪ್ರಿಯಾಂಕಾ ಚೋಪ್ರಾ ಹಲವು ಬಾರಿ ಗಾಯಗೊಂಡಿದ್ದರು. ಆದರೆ, ಅವರು ಆ್ಯಕ್ಷನ್ ಸಿನಿಮಾಗಳಿಂದ ದೂರ ಹೋಗಿಲ್ಲ.

ಆ್ಯಕ್ಷನ್ ದೃಶ್ಯದ ವೇಳೆ ಪ್ರಿಯಾಂಕಾ ಚೋಪ್ರಾ ಕತ್ತಿಗೆ ಆಯ್ತು ಗಾಯ
ಪ್ರಿಯಾಂಕಾ
Follow us
ರಾಜೇಶ್ ದುಗ್ಗುಮನೆ
|

Updated on: Jun 20, 2024 | 7:44 AM

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಗಾಯಕ ನಿಕ್ ಜೋನಸ್​ನ ಮದುವೆ ಆಗೋ ಮೂಲಕ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಅವರು ಹಾಯಾಗಿ ಸಂಸಾರ ನಡೆಸುತ್ತಾ ಬರುತ್ತಿದ್ದಾರೆ. ಅವರಿಗೆ ಈಗ ಹಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿ ಆಗಿದೆ. ಪ್ರಿಯಾಂಕಾ ಚೋಪ್ರಾ ಅವರು ಈಗ ಶೂಟಿಂಗ್ ವೇಳೆ ಗಾಯ ಮಾಡಿಕೊಂಡಿದ್ದಾರೆ. ಈ ಫೋಟೋನ ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸಿನಿಮಾ ಶೂಟಿಂಗ್ ವೇಳೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತದೆ. ಆದಾಗ್ಯೂ ಕೆಲವೊಮ್ಮೆ ಅವಘಡಗಳು ಸಂಭವಿಸಿ ಬಿಡುತ್ತವೆ. ಈಗ ಪ್ರಿಯಾಂಕಾ ಚೋಪ್ರಾಗೂ ಹಾಗೆಯೇ ಆಗಿದೆ. ‘ದಿ ಬ್ಲಫ್’ ಸಿನಿಮಾ ಶೂಟಿಂಗ್ ವೇಳೆ ಅವರ ಕತ್ತಿನ ಭಾಗಕ್ಕೆ ಸರಿಯಾಗಿ ಮಾರ್ಕ್ ಬಿದ್ದಿದೆ. ಇದನ್ನು ಪ್ರಿಯಾಂಕಾ ಶೇರ್ ಮಾಡಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಬಾಲಿವುಡ್​ನಲ್ಲಿ ಹಲವು ಆ್ಯಕ್ಷನ್ ಸಿನಿಮಾ ಮಾಡಿದ್ದಾರೆ. ಹಾಲಿವುಡ್​ಗೆ ತೆರಳಿದ ಬಳಿಕ ಅವರು ಅದೇ ರೀತಿಯ ಸಿನಿಮಾ ಬಗ್ಗೆ ಗಮನ ಹರಿಸಿದರು. ಆ್ಯಕ್ಷನ್ ಸಿನಿಮಾಗಳನ್ನು ಮಾಡೋ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆ ಎದುರಾಗೋದು ಸಹಜ. ಹೀಗಾಗಿಯೇ ಪ್ರಿಯಾಂಕಾ ತೊಂದರೆ ಅನುಭವಿಸಿದ್ದಾರೆ.  ಈ ಮೊದಲು ಕೂಡ ಪ್ರಿಯಾಂಕಾ ಚೋಪ್ರಾ ಹಲವು ಬಾರಿ ಗಾಯಗೊಂಡಿದ್ದರು. ಆದರೆ, ಅವರು ಆ್ಯಕ್ಷನ್ ಸಿನಿಮಾಗಳಿಂದ ದೂರ ಹೋಗಿಲ್ಲ.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ ಮೈದುನನಿಗೆ ಕ್ಯಾನ್ಸರ್​: ಚರ್ಮದ ಕ್ಯಾನ್ಸರ್ ಬಗ್ಗೆ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ಕೆವಿನ್​

ಮಾರ್ಚ್ ತಿಂಗಳಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಸ್ ಜೊತೆ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದಿದ್ದರು. ತಿಳಿ ಬಣ್ಣದ ಸೀರೆಯುಟ್ಟಿದ್ದ ಪ್ರಿಯಾಂಕಾ ಮಗಳನ್ನು ಕಂಕುಳಲ್ಲಿ ಹೊತ್ತು ದೇವಾಲಯಕ್ಕೆ ಬಂದಿದ್ದರು. ಪ್ರಿಯಾಂಕಾ ಪತಿ ನಿಕ್ ಜೋನಸ್ ಸಹ ಭಾರತೀಯ ಉಡುಗೆ ತೊಟ್ಟು ಬಂದಿದ್ದರು. ಬಾಲರಾಮನ ದರ್ಶನ ಪಡೆದ ಪ್ರಿಯಾಂಕಾ-ನಿಕ್ ಜೋನಸ್ ದಂಪತಿಗೆ ದೇವಾಲಯದ ಪೂಜಾರಿಗಳು ತೀರ್ಥ, ಪ್ರಸಾದ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ