AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಕ್ಷನ್ ದೃಶ್ಯದ ವೇಳೆ ಪ್ರಿಯಾಂಕಾ ಚೋಪ್ರಾ ಕತ್ತಿಗೆ ಆಯ್ತು ಗಾಯ

ಆ್ಯಕ್ಷನ್ ಸಿನಿಮಾಗಳನ್ನು ಮಾಡೋ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆ ಎದುರಾಗೋದು ಸಹಜ. ಹೀಗಾಗಿಯೇ ಪ್ರಿಯಾಂಕಾ ತೊಂದರೆ ಅನುಭವಿಸಿದ್ದಾರೆ.  ಈ ಮೊದಲು ಕೂಡ ಪ್ರಿಯಾಂಕಾ ಚೋಪ್ರಾ ಹಲವು ಬಾರಿ ಗಾಯಗೊಂಡಿದ್ದರು. ಆದರೆ, ಅವರು ಆ್ಯಕ್ಷನ್ ಸಿನಿಮಾಗಳಿಂದ ದೂರ ಹೋಗಿಲ್ಲ.

ಆ್ಯಕ್ಷನ್ ದೃಶ್ಯದ ವೇಳೆ ಪ್ರಿಯಾಂಕಾ ಚೋಪ್ರಾ ಕತ್ತಿಗೆ ಆಯ್ತು ಗಾಯ
ಪ್ರಿಯಾಂಕಾ
ರಾಜೇಶ್ ದುಗ್ಗುಮನೆ
|

Updated on: Jun 20, 2024 | 7:44 AM

Share

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಗಾಯಕ ನಿಕ್ ಜೋನಸ್​ನ ಮದುವೆ ಆಗೋ ಮೂಲಕ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಅವರು ಹಾಯಾಗಿ ಸಂಸಾರ ನಡೆಸುತ್ತಾ ಬರುತ್ತಿದ್ದಾರೆ. ಅವರಿಗೆ ಈಗ ಹಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿ ಆಗಿದೆ. ಪ್ರಿಯಾಂಕಾ ಚೋಪ್ರಾ ಅವರು ಈಗ ಶೂಟಿಂಗ್ ವೇಳೆ ಗಾಯ ಮಾಡಿಕೊಂಡಿದ್ದಾರೆ. ಈ ಫೋಟೋನ ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸಿನಿಮಾ ಶೂಟಿಂಗ್ ವೇಳೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತದೆ. ಆದಾಗ್ಯೂ ಕೆಲವೊಮ್ಮೆ ಅವಘಡಗಳು ಸಂಭವಿಸಿ ಬಿಡುತ್ತವೆ. ಈಗ ಪ್ರಿಯಾಂಕಾ ಚೋಪ್ರಾಗೂ ಹಾಗೆಯೇ ಆಗಿದೆ. ‘ದಿ ಬ್ಲಫ್’ ಸಿನಿಮಾ ಶೂಟಿಂಗ್ ವೇಳೆ ಅವರ ಕತ್ತಿನ ಭಾಗಕ್ಕೆ ಸರಿಯಾಗಿ ಮಾರ್ಕ್ ಬಿದ್ದಿದೆ. ಇದನ್ನು ಪ್ರಿಯಾಂಕಾ ಶೇರ್ ಮಾಡಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಬಾಲಿವುಡ್​ನಲ್ಲಿ ಹಲವು ಆ್ಯಕ್ಷನ್ ಸಿನಿಮಾ ಮಾಡಿದ್ದಾರೆ. ಹಾಲಿವುಡ್​ಗೆ ತೆರಳಿದ ಬಳಿಕ ಅವರು ಅದೇ ರೀತಿಯ ಸಿನಿಮಾ ಬಗ್ಗೆ ಗಮನ ಹರಿಸಿದರು. ಆ್ಯಕ್ಷನ್ ಸಿನಿಮಾಗಳನ್ನು ಮಾಡೋ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆ ಎದುರಾಗೋದು ಸಹಜ. ಹೀಗಾಗಿಯೇ ಪ್ರಿಯಾಂಕಾ ತೊಂದರೆ ಅನುಭವಿಸಿದ್ದಾರೆ.  ಈ ಮೊದಲು ಕೂಡ ಪ್ರಿಯಾಂಕಾ ಚೋಪ್ರಾ ಹಲವು ಬಾರಿ ಗಾಯಗೊಂಡಿದ್ದರು. ಆದರೆ, ಅವರು ಆ್ಯಕ್ಷನ್ ಸಿನಿಮಾಗಳಿಂದ ದೂರ ಹೋಗಿಲ್ಲ.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ ಮೈದುನನಿಗೆ ಕ್ಯಾನ್ಸರ್​: ಚರ್ಮದ ಕ್ಯಾನ್ಸರ್ ಬಗ್ಗೆ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ಕೆವಿನ್​

ಮಾರ್ಚ್ ತಿಂಗಳಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಸ್ ಜೊತೆ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದಿದ್ದರು. ತಿಳಿ ಬಣ್ಣದ ಸೀರೆಯುಟ್ಟಿದ್ದ ಪ್ರಿಯಾಂಕಾ ಮಗಳನ್ನು ಕಂಕುಳಲ್ಲಿ ಹೊತ್ತು ದೇವಾಲಯಕ್ಕೆ ಬಂದಿದ್ದರು. ಪ್ರಿಯಾಂಕಾ ಪತಿ ನಿಕ್ ಜೋನಸ್ ಸಹ ಭಾರತೀಯ ಉಡುಗೆ ತೊಟ್ಟು ಬಂದಿದ್ದರು. ಬಾಲರಾಮನ ದರ್ಶನ ಪಡೆದ ಪ್ರಿಯಾಂಕಾ-ನಿಕ್ ಜೋನಸ್ ದಂಪತಿಗೆ ದೇವಾಲಯದ ಪೂಜಾರಿಗಳು ತೀರ್ಥ, ಪ್ರಸಾದ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು