AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಕ್ಷನ್ ದೃಶ್ಯದ ವೇಳೆ ಪ್ರಿಯಾಂಕಾ ಚೋಪ್ರಾ ಕತ್ತಿಗೆ ಆಯ್ತು ಗಾಯ

ಆ್ಯಕ್ಷನ್ ಸಿನಿಮಾಗಳನ್ನು ಮಾಡೋ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆ ಎದುರಾಗೋದು ಸಹಜ. ಹೀಗಾಗಿಯೇ ಪ್ರಿಯಾಂಕಾ ತೊಂದರೆ ಅನುಭವಿಸಿದ್ದಾರೆ.  ಈ ಮೊದಲು ಕೂಡ ಪ್ರಿಯಾಂಕಾ ಚೋಪ್ರಾ ಹಲವು ಬಾರಿ ಗಾಯಗೊಂಡಿದ್ದರು. ಆದರೆ, ಅವರು ಆ್ಯಕ್ಷನ್ ಸಿನಿಮಾಗಳಿಂದ ದೂರ ಹೋಗಿಲ್ಲ.

ಆ್ಯಕ್ಷನ್ ದೃಶ್ಯದ ವೇಳೆ ಪ್ರಿಯಾಂಕಾ ಚೋಪ್ರಾ ಕತ್ತಿಗೆ ಆಯ್ತು ಗಾಯ
ಪ್ರಿಯಾಂಕಾ
ರಾಜೇಶ್ ದುಗ್ಗುಮನೆ
|

Updated on: Jun 20, 2024 | 7:44 AM

Share

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಗಾಯಕ ನಿಕ್ ಜೋನಸ್​ನ ಮದುವೆ ಆಗೋ ಮೂಲಕ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಅವರು ಹಾಯಾಗಿ ಸಂಸಾರ ನಡೆಸುತ್ತಾ ಬರುತ್ತಿದ್ದಾರೆ. ಅವರಿಗೆ ಈಗ ಹಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿ ಆಗಿದೆ. ಪ್ರಿಯಾಂಕಾ ಚೋಪ್ರಾ ಅವರು ಈಗ ಶೂಟಿಂಗ್ ವೇಳೆ ಗಾಯ ಮಾಡಿಕೊಂಡಿದ್ದಾರೆ. ಈ ಫೋಟೋನ ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸಿನಿಮಾ ಶೂಟಿಂಗ್ ವೇಳೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತದೆ. ಆದಾಗ್ಯೂ ಕೆಲವೊಮ್ಮೆ ಅವಘಡಗಳು ಸಂಭವಿಸಿ ಬಿಡುತ್ತವೆ. ಈಗ ಪ್ರಿಯಾಂಕಾ ಚೋಪ್ರಾಗೂ ಹಾಗೆಯೇ ಆಗಿದೆ. ‘ದಿ ಬ್ಲಫ್’ ಸಿನಿಮಾ ಶೂಟಿಂಗ್ ವೇಳೆ ಅವರ ಕತ್ತಿನ ಭಾಗಕ್ಕೆ ಸರಿಯಾಗಿ ಮಾರ್ಕ್ ಬಿದ್ದಿದೆ. ಇದನ್ನು ಪ್ರಿಯಾಂಕಾ ಶೇರ್ ಮಾಡಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಬಾಲಿವುಡ್​ನಲ್ಲಿ ಹಲವು ಆ್ಯಕ್ಷನ್ ಸಿನಿಮಾ ಮಾಡಿದ್ದಾರೆ. ಹಾಲಿವುಡ್​ಗೆ ತೆರಳಿದ ಬಳಿಕ ಅವರು ಅದೇ ರೀತಿಯ ಸಿನಿಮಾ ಬಗ್ಗೆ ಗಮನ ಹರಿಸಿದರು. ಆ್ಯಕ್ಷನ್ ಸಿನಿಮಾಗಳನ್ನು ಮಾಡೋ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆ ಎದುರಾಗೋದು ಸಹಜ. ಹೀಗಾಗಿಯೇ ಪ್ರಿಯಾಂಕಾ ತೊಂದರೆ ಅನುಭವಿಸಿದ್ದಾರೆ.  ಈ ಮೊದಲು ಕೂಡ ಪ್ರಿಯಾಂಕಾ ಚೋಪ್ರಾ ಹಲವು ಬಾರಿ ಗಾಯಗೊಂಡಿದ್ದರು. ಆದರೆ, ಅವರು ಆ್ಯಕ್ಷನ್ ಸಿನಿಮಾಗಳಿಂದ ದೂರ ಹೋಗಿಲ್ಲ.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ ಮೈದುನನಿಗೆ ಕ್ಯಾನ್ಸರ್​: ಚರ್ಮದ ಕ್ಯಾನ್ಸರ್ ಬಗ್ಗೆ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ಕೆವಿನ್​

ಮಾರ್ಚ್ ತಿಂಗಳಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಸ್ ಜೊತೆ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದಿದ್ದರು. ತಿಳಿ ಬಣ್ಣದ ಸೀರೆಯುಟ್ಟಿದ್ದ ಪ್ರಿಯಾಂಕಾ ಮಗಳನ್ನು ಕಂಕುಳಲ್ಲಿ ಹೊತ್ತು ದೇವಾಲಯಕ್ಕೆ ಬಂದಿದ್ದರು. ಪ್ರಿಯಾಂಕಾ ಪತಿ ನಿಕ್ ಜೋನಸ್ ಸಹ ಭಾರತೀಯ ಉಡುಗೆ ತೊಟ್ಟು ಬಂದಿದ್ದರು. ಬಾಲರಾಮನ ದರ್ಶನ ಪಡೆದ ಪ್ರಿಯಾಂಕಾ-ನಿಕ್ ಜೋನಸ್ ದಂಪತಿಗೆ ದೇವಾಲಯದ ಪೂಜಾರಿಗಳು ತೀರ್ಥ, ಪ್ರಸಾದ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ