AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oscar Members: ಜೂ. ಎನ್​ಟಿಆರ್​, ರಾಮ್​ ಚರಣ್​ ಮತ್ತೊಂದು ಸಾಧನೆ; ಸಿಕ್ತು ಆಸ್ಕರ್​ ಸದಸ್ಯತ್ವ

ಆಸ್ಕರ್​ ಸಮಿತಿಯಲ್ಲಿ 10 ಸಾವಿರ ಸದಸ್ಯರು ಇದ್ದಾರೆ. ಪ್ರಪಂಚದ ಬೇರೆ ಬೇರೆ ದೇಶಗಳ ವಿವಿಧ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಈ ಸಮಿತಿಯಲ್ಲಿದ್ದಾರೆ.

Oscar Members: ಜೂ. ಎನ್​ಟಿಆರ್​, ರಾಮ್​ ಚರಣ್​ ಮತ್ತೊಂದು ಸಾಧನೆ; ಸಿಕ್ತು ಆಸ್ಕರ್​ ಸದಸ್ಯತ್ವ
ಜೂ. ಎನ್​ಟಿಆರ್​, ಮಣಿರತ್ನಂ, ರಾಮ್​ ಚರಣ್​, ಕರಣ್​ ಜೋಹರ್​
ಮದನ್​ ಕುಮಾರ್​
|

Updated on: Jun 29, 2023 | 11:24 AM

Share

ಭಾರತೀಯ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿವೆ. ಆಸ್ಕರ್​ ಪಡೆಯವ ಹಂತಕ್ಕೆ ಇಲ್ಲಿನ ಸಿನಿಮಾಗಳು ಶೈನ್​ ಆಗತ್ತಿವೆ. ಅಲ್ಲದೇ ಭಾರತೀಯ ಚಿತ್ರರಂಗದ ಸೆಲೆಬ್ರಿಟಿಗಳು ವಿಶ್ವ ಮಟ್ಟದ ವೇದಿಕೆಗಳಲ್ಲಿ ಸ್ಥಾನ ಪಡೆದುಕೊಳ್ಳುತ್ತಿದ್ದಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಇಲ್ಲಿದೆ. ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿ (Academy Awards) ಕಮಿಟಿಯ ಸದಸ್ಯತ್ವವನ್ನು ಭಾರತದ ಕೆಲವರಿಗೆ ನೀಡಲಾಗುತ್ತಿದೆ. ‘ಆರ್​ಆರ್​ಆರ್​’ ಸಿನಿಮಾದಿಂದ ಆಸ್ಕರ್​ ವೇದಿಕೆಯಲ್ಲಿ ಮಿಂಚಿದ ಜೂನಿಯರ್​ ಎನ್​ಟಿಆರ್​ (Jr NTR), ರಾಮ್​ ಚರಣ್​ ಸೇರಿದಂತೆ ಹಲವರಿಗೆ ಈ ಸದಸ್ಯತ್ವ ಸಿಗುತ್ತಿದೆ. ನಿರ್ದೇಶಕರಾದ ಕರಣ್​ ಜೋಹರ್ (Karan Johar)​, ಮಣಿರತ್ನಂ ಅವರಿಗೂ ಈ ಆಫರ್​ ನೀಡಲಾಗಿದೆ. ಇದು ಅವರ ಅಭಿಮಾನಿಗಳಿಗೆ ಸಂತಸ ಮೂಡಿಸಿದೆ.

ಈಗಾಗಲೇ ಆಸ್ಕರ್​ ಸಮಿತಿಯಲ್ಲಿ 10 ಸಾವಿರ ಸದಸ್ಯರು ಇದ್ದಾರೆ. ಪ್ರಪಂಚದ ಬೇರೆ ಬೇರೆ ದೇಶಗಳ ವಿವಿಧ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಈ ಸಮಿತಿಯಲ್ಲಿದ್ದಾರೆ. ಪ್ರತಿ ವರ್ಷ ಆಸ್ಕರ್​ ಪ್ರಶಸ್ತಿಗೆ ನಾಮಿನೇಟ್​ ಆಗುವ ಸಿನಿಮಾ ಮತ್ತು ಸೆಲೆಬ್ರಿಟಿಗಳಿಗೆ ಈ ಸದಸ್ಯರು ವೋಟ್​ ಮಾಡುತ್ತಾರೆ. ಆ ಮೂಲಕ ಯಾರಿಗೆ ಪ್ರಶಸ್ತಿ ನೀಡಬೇಕು ಎಂಬುದು ನಿರ್ಧಾರ ಆಗುತ್ತದೆ. ಆಸ್ಕರ್​ ಸದಸ್ಯತ್ವ ಇರುವ ಕೆಲವೇ ಭಾರತೀಯರ ಪಟ್ಟಿಗೆ ಈಗ ರಾಮ್​ ಚರಣ್​, ಕರಣ್ ಜೋಹರ್​, ಜೂನಿಯರ್ ಎನ್​ಟಿಆರ್​ ಮುಂತಾದವರ ಹೆಸರು ಸೇರ್ಪಡೆ ಆಗುತ್ತಿರುವುದು ವಿಶೇಷ.

ಇದನ್ನೂ ಓದಿ: Ram Charan: ನಿಜಕ್ಕೂ ಆಸ್ಕರ್​ ಸಮಾರಂಭದಲ್ಲಿ ನಡೆದಿದ್ದು ಏನು? ಬಹುದಿನಗಳ ಬಳಿಕ ಬಾಯ್ಬಿಟ್ಟ ರಾಮ್ ಚರಣ್​

‘ಆರ್​ಆರ್​ಆರ್​’ ಸಿನಿಮಾದ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಮತ್ತು ಸಾಹಿತ್ಯ ಬರೆದ ಚಂದ್ರ ಬೋಸ್​ ಅವರು ಆಸ್ಕರ್​ ವೇದಿಕೆಯಲ್ಲಿ ಪ್ರಶಸ್ತಿ ಸ್ವೀಕರಿಸಿದ್ದರು. ಅವರಿಗೂ ಕೂಡ ಆಸ್ಕರ್​ ಸದಸ್ಯತ್ವ ಸ್ವೀಕರಿಸಲು ಆಹ್ವಾನ ನೀಡಲಾಗಿದೆ. ಕಾಸ್ಟಿಂಗ್​ ನಿರ್ದೇಶಕ ಕೆಕೆ ಸೇಂಥಿಲ್​ ಕುಮಾರ್​, ಸಾಕ್ಷ್ಯಚಿತ್ರಗಳ ನಿರ್ಮಾಪಕ ಶೌನಕ್​ ಸೇನ್​ ಅವರಿಗೂ ಸದಸ್ಯತ್ವ ಸಿಗುತ್ತಿದೆ.

ಇದನ್ನೂ ಓದಿ: RRR ತಂಡ 60 ಲಕ್ಷ ರೂ. ಕೊಟ್ಟು ಆಸ್ಕರ್​ ಸಮಾರಂಭದ ಟಿಕೆಟ್​ ಪಡೆಯಿತಾ? ಬಯಲಾಯ್ತು ಬೇರೆ ಸತ್ಯ

‘ವಿವಿಧ ದೇಶಗಳ ತಂತ್ರಜ್ಞರು ಮತ್ತು ಕಲಾವಿದರಿಗೆ ಅಕಾಡೆಮಿ ಸದಸ್ಯತ್ವ ನೀಡುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ’ ಆಸ್ಕರ್​ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಾರತೀಯ ಸಿನಿಮಾಗಳಿಗೆ ಆಸ್ಕರ್​ ಸಿಗುವುದು ಕಷ್ಟ ಎಂಬ ಮಾತು ಇತ್ತು. ಆದರೆ ಆ ಕಷ್ಟದ ಕೆಲಸವನ್ನು ಮಾಡಿ ತೋರಿಸಿದ್ದು ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು. ಅಲ್ಲದೇ ಭಾರತದ ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಡಾಕ್ಯುಮೆಂಟರಿಗೂ ಈ ವರ್ಷ ಆಸ್ಕರ್​ ಪ್ರಶಸ್ತಿ ಸಿಕ್ಕಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ