AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oscar Members: ಜೂ. ಎನ್​ಟಿಆರ್​, ರಾಮ್​ ಚರಣ್​ ಮತ್ತೊಂದು ಸಾಧನೆ; ಸಿಕ್ತು ಆಸ್ಕರ್​ ಸದಸ್ಯತ್ವ

ಆಸ್ಕರ್​ ಸಮಿತಿಯಲ್ಲಿ 10 ಸಾವಿರ ಸದಸ್ಯರು ಇದ್ದಾರೆ. ಪ್ರಪಂಚದ ಬೇರೆ ಬೇರೆ ದೇಶಗಳ ವಿವಿಧ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಈ ಸಮಿತಿಯಲ್ಲಿದ್ದಾರೆ.

Oscar Members: ಜೂ. ಎನ್​ಟಿಆರ್​, ರಾಮ್​ ಚರಣ್​ ಮತ್ತೊಂದು ಸಾಧನೆ; ಸಿಕ್ತು ಆಸ್ಕರ್​ ಸದಸ್ಯತ್ವ
ಜೂ. ಎನ್​ಟಿಆರ್​, ಮಣಿರತ್ನಂ, ರಾಮ್​ ಚರಣ್​, ಕರಣ್​ ಜೋಹರ್​
ಮದನ್​ ಕುಮಾರ್​
|

Updated on: Jun 29, 2023 | 11:24 AM

Share

ಭಾರತೀಯ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿವೆ. ಆಸ್ಕರ್​ ಪಡೆಯವ ಹಂತಕ್ಕೆ ಇಲ್ಲಿನ ಸಿನಿಮಾಗಳು ಶೈನ್​ ಆಗತ್ತಿವೆ. ಅಲ್ಲದೇ ಭಾರತೀಯ ಚಿತ್ರರಂಗದ ಸೆಲೆಬ್ರಿಟಿಗಳು ವಿಶ್ವ ಮಟ್ಟದ ವೇದಿಕೆಗಳಲ್ಲಿ ಸ್ಥಾನ ಪಡೆದುಕೊಳ್ಳುತ್ತಿದ್ದಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಇಲ್ಲಿದೆ. ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿ (Academy Awards) ಕಮಿಟಿಯ ಸದಸ್ಯತ್ವವನ್ನು ಭಾರತದ ಕೆಲವರಿಗೆ ನೀಡಲಾಗುತ್ತಿದೆ. ‘ಆರ್​ಆರ್​ಆರ್​’ ಸಿನಿಮಾದಿಂದ ಆಸ್ಕರ್​ ವೇದಿಕೆಯಲ್ಲಿ ಮಿಂಚಿದ ಜೂನಿಯರ್​ ಎನ್​ಟಿಆರ್​ (Jr NTR), ರಾಮ್​ ಚರಣ್​ ಸೇರಿದಂತೆ ಹಲವರಿಗೆ ಈ ಸದಸ್ಯತ್ವ ಸಿಗುತ್ತಿದೆ. ನಿರ್ದೇಶಕರಾದ ಕರಣ್​ ಜೋಹರ್ (Karan Johar)​, ಮಣಿರತ್ನಂ ಅವರಿಗೂ ಈ ಆಫರ್​ ನೀಡಲಾಗಿದೆ. ಇದು ಅವರ ಅಭಿಮಾನಿಗಳಿಗೆ ಸಂತಸ ಮೂಡಿಸಿದೆ.

ಈಗಾಗಲೇ ಆಸ್ಕರ್​ ಸಮಿತಿಯಲ್ಲಿ 10 ಸಾವಿರ ಸದಸ್ಯರು ಇದ್ದಾರೆ. ಪ್ರಪಂಚದ ಬೇರೆ ಬೇರೆ ದೇಶಗಳ ವಿವಿಧ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಈ ಸಮಿತಿಯಲ್ಲಿದ್ದಾರೆ. ಪ್ರತಿ ವರ್ಷ ಆಸ್ಕರ್​ ಪ್ರಶಸ್ತಿಗೆ ನಾಮಿನೇಟ್​ ಆಗುವ ಸಿನಿಮಾ ಮತ್ತು ಸೆಲೆಬ್ರಿಟಿಗಳಿಗೆ ಈ ಸದಸ್ಯರು ವೋಟ್​ ಮಾಡುತ್ತಾರೆ. ಆ ಮೂಲಕ ಯಾರಿಗೆ ಪ್ರಶಸ್ತಿ ನೀಡಬೇಕು ಎಂಬುದು ನಿರ್ಧಾರ ಆಗುತ್ತದೆ. ಆಸ್ಕರ್​ ಸದಸ್ಯತ್ವ ಇರುವ ಕೆಲವೇ ಭಾರತೀಯರ ಪಟ್ಟಿಗೆ ಈಗ ರಾಮ್​ ಚರಣ್​, ಕರಣ್ ಜೋಹರ್​, ಜೂನಿಯರ್ ಎನ್​ಟಿಆರ್​ ಮುಂತಾದವರ ಹೆಸರು ಸೇರ್ಪಡೆ ಆಗುತ್ತಿರುವುದು ವಿಶೇಷ.

ಇದನ್ನೂ ಓದಿ: Ram Charan: ನಿಜಕ್ಕೂ ಆಸ್ಕರ್​ ಸಮಾರಂಭದಲ್ಲಿ ನಡೆದಿದ್ದು ಏನು? ಬಹುದಿನಗಳ ಬಳಿಕ ಬಾಯ್ಬಿಟ್ಟ ರಾಮ್ ಚರಣ್​

‘ಆರ್​ಆರ್​ಆರ್​’ ಸಿನಿಮಾದ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಮತ್ತು ಸಾಹಿತ್ಯ ಬರೆದ ಚಂದ್ರ ಬೋಸ್​ ಅವರು ಆಸ್ಕರ್​ ವೇದಿಕೆಯಲ್ಲಿ ಪ್ರಶಸ್ತಿ ಸ್ವೀಕರಿಸಿದ್ದರು. ಅವರಿಗೂ ಕೂಡ ಆಸ್ಕರ್​ ಸದಸ್ಯತ್ವ ಸ್ವೀಕರಿಸಲು ಆಹ್ವಾನ ನೀಡಲಾಗಿದೆ. ಕಾಸ್ಟಿಂಗ್​ ನಿರ್ದೇಶಕ ಕೆಕೆ ಸೇಂಥಿಲ್​ ಕುಮಾರ್​, ಸಾಕ್ಷ್ಯಚಿತ್ರಗಳ ನಿರ್ಮಾಪಕ ಶೌನಕ್​ ಸೇನ್​ ಅವರಿಗೂ ಸದಸ್ಯತ್ವ ಸಿಗುತ್ತಿದೆ.

ಇದನ್ನೂ ಓದಿ: RRR ತಂಡ 60 ಲಕ್ಷ ರೂ. ಕೊಟ್ಟು ಆಸ್ಕರ್​ ಸಮಾರಂಭದ ಟಿಕೆಟ್​ ಪಡೆಯಿತಾ? ಬಯಲಾಯ್ತು ಬೇರೆ ಸತ್ಯ

‘ವಿವಿಧ ದೇಶಗಳ ತಂತ್ರಜ್ಞರು ಮತ್ತು ಕಲಾವಿದರಿಗೆ ಅಕಾಡೆಮಿ ಸದಸ್ಯತ್ವ ನೀಡುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ’ ಆಸ್ಕರ್​ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಾರತೀಯ ಸಿನಿಮಾಗಳಿಗೆ ಆಸ್ಕರ್​ ಸಿಗುವುದು ಕಷ್ಟ ಎಂಬ ಮಾತು ಇತ್ತು. ಆದರೆ ಆ ಕಷ್ಟದ ಕೆಲಸವನ್ನು ಮಾಡಿ ತೋರಿಸಿದ್ದು ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು. ಅಲ್ಲದೇ ಭಾರತದ ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಡಾಕ್ಯುಮೆಂಟರಿಗೂ ಈ ವರ್ಷ ಆಸ್ಕರ್​ ಪ್ರಶಸ್ತಿ ಸಿಕ್ಕಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ