Ram Gopal Varma: ‘ಆಪನ್​ಹೈಮರ್​’ ಚಿತ್ರದಲ್ಲಿನ ಭಗವದ್ಗೀತೆ ಕುರಿತ ವಿವಾದಾತ್ಮಕ ದೃಶ್ಯದ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಪ್ರತಿಕ್ರಿಯೆ

Oppenheimer Movie: ರಾಮ್​ ಗೋಪಾಲ್​ ವರ್ಮಾ ಅವರ ಟ್ವೀಟ್​ ಬಗ್ಗೆ ನೆಟ್ಟಿಗರು ಪರ-ವಿರೋಧ ಚರ್ಚೆ ಮಾಡಿದ್ದಾರೆ. ಆರ್​ಜಿವಿ ಅಭಿಪ್ರಾಯವನ್ನು ಕೆಲವರು ಬೆಂಬಲಿಸಿದ್ದಾರೆ. ಇನ್ನೊಂದು ವರ್ಗದವರು ಟೀಕಿಸಿದ್ದಾರೆ.

Ram Gopal Varma: ‘ಆಪನ್​ಹೈಮರ್​’ ಚಿತ್ರದಲ್ಲಿನ ಭಗವದ್ಗೀತೆ ಕುರಿತ ವಿವಾದಾತ್ಮಕ ದೃಶ್ಯದ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಪ್ರತಿಕ್ರಿಯೆ
ರಾಮ್​ ಗೋಪಾಲ್​ ವರ್ಮಾ, ಕಿಲಿಯನ್​ ಮರ್ಫಿ
Follow us
|

Updated on: Jul 24, 2023 | 9:12 PM

ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಅವರು ಹಲವು ವಿಚಾರಗಳ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಾರೆ. ಅವರ ಮಾತುಗಳಿಂದ ಅನೇಕ ಬಾರಿ ವಿವಾದಗಳು ಆಗಿದ್ದುಂಟು. ಇತ್ತೀಚೆಗೆ ಬಹುತೇಕರು ಅವರ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಹಾಗಿದ್ದರೂ ಕೂಡ ಸೋಶಿಯಲ್​ ಮೀಡಿಯಾದಲ್ಲಿ ರಾಮ್​ ಗೋಪಾಲ್​ ವರ್ಮಾ ಮಾಡುವ ಪೋಸ್ಟ್​ಗಳು ವೈರಲ್​ ಆಗುತ್ತವೆ. ಈಗ ಅವರು ‘ಆಪನ್​ಹೈಮರ್​’ (Oppenheimer) ಸಿನಿಮಾದಲ್ಲಿನ ಒಂದು ವಿವಾದಾತ್ಮಕ ದೃಶ್ಯದ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಕ್ರಿಸ್ಟೋಫರ್​ ನೋಲನ್​ ನಿರ್ದೇಶನದ ಈ ಸಿನಿಮಾ ಭಾರತದಲ್ಲಿ ಉತ್ತಮ ಕಲೆಕ್ಷನ್​ ಮಾಡುತ್ತಿದೆ. ಆದರೆ ಈ ಚಿತ್ರದಲ್ಲಿ ಭಗವದ್ಗೀತೆಗೆ (Bhagavad Gita) ಅವಮಾನ ಆಗುವಂತಹ ದೃಶ್ಯ ಇದೆ ಎಂದು ಕೆಲವರು ತಕರಾರು ತೆಗೆದಿದ್ದಾರೆ. ಆ ಬಗ್ಗೆ ರಾಮ್​ ಗೋಪಾಲ್​ ವರ್ಮಾ ತಮ್ಮ ಅನಿಸಿಕೆ ತಿಳಿಸಿದ್ದಾರೆ.

ವಿವಾದ ಏನು?

ಅಣುಬಾಂಬ್​ ಕಂಡುಹಿಡಿದ ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್​ ಆಪನ್​ಹೈಮರ್​ ಅವರ ಜೀವನದ ಕುರಿತು ‘ಆಪನ್​ಹೈಮರ್​’ ಸಿನಿಮಾ ಮೂಡಿಬಂದಿದೆ. ಈ ಚಿತ್ರದಲ್ಲಿ ಒಂದು ದೃಶ್ಯ ಇದೆ. ಲೈಂಗಿಕ ಕ್ರಿಯೆ ನಡೆಸುವ ಸಂದರ್ಭದಲ್ಲಿ ಆಪನ್​ಹೈಮರ್​ ಅವರ ಪ್ರೇಯಸಿಗೆ ಹಲವು ಪುಸ್ತಕಗಳು ಕಾಣಿಸುತ್ತವೆ. ಅವುಗಳಲ್ಲಿ ಒಂದು ಪುಸ್ತಕವನ್ನು ಹಿಡಿದುಕೊಂಡು ‘ಇದು ಏನು’ ಎಂದು ಆಕೆ ಪ್ರಶ್ನಿಸುತ್ತಾಳೆ. ‘ಇದು ಭಗವದ್ಗೀತೆ’ ಅಂತ ಆಪನ್​ಹೈಮರ್​ ಉತ್ತರಿಸುತ್ತಾರೆ ಹಾಗೂ ಅದರಲ್ಲಿ ಇರುವ ಕೆಲವು ಸಾಲುಗಳನ್ನು ವಿವರಿಸಿ ಹೇಳುತ್ತಾರೆ. ಈ ದೃಶ್ಯಕ್ಕೆ ಭಾರತದ ಸೆನ್ಸಾರ್​ ಮಂಡಳಿ ಸದಸ್ಯರು ಹೇಗೆ ಅನುಮತಿ ಕೊಟ್ಟರು ಎಂದು ಅನೇಕರು  ಕ್ಯಾತೆ ತೆಗೆದಿದ್ದಾರೆ.

ಇದನ್ನೂ ಓದಿ: ಮೂರೇ ದಿನಕ್ಕೆ ಭಾರತದಲ್ಲಿ 50 ಕೋಟಿ ರೂಪಾಯಿ ಕಮಾಯಿ ಮಾಡಿದ ‘ಆಪನ್​ಹೈಮರ್’; ‘ಬಾರ್ಬಿ’ ಕಥೆ ಏನು?

ರಾಮ್​ ಗೋಪಾಲ್​ ವರ್ಮಾ ಹೇಳಿದ್ದೇನು?

‘ಆಪನ್​ಹೈಮರ್​’ ಸಿನಿಮಾದಲ್ಲಿ ಭಗವದ್ಗೀತೆಗೆ ಅವಮಾನ ಆಗಿದೆ ಎಂದು ಕೆಲವರು ಹೇಳಿರುವುದಕ್ಕೆ ರಾಮ್​ ಗೋಪಾಲ್​ ವರ್ಮಾ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಅಮರಿಕದ ನ್ಯೂಕ್ಲಿಯರ್​ ವಿಜ್ಞಾನಿ ಆಪನ್​ಹೈಮರ್​ ಅವರು ಭಗವದ್ಗೀತೆ ಓದಿದ್ದರು. ವಿಪರ್ಯಾಸ ಏನೆಂದರೆ, ಭಾರತದ ಶೇಕಡ 0.0000001ರಷ್ಟು ಮಂದಿ ಕೂಡ ಭಗವದ್ಗೀತೆ ಓದಿದ್ದಾರೆ ಎಂಬ ಬಗ್ಗೆ ನನಗೆ ಅನುಮಾನ ಇದೆ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ.

ನೆಟ್ಟಿಗರ ಪರ-ವಿರೋಧ:

ರಾಮ್​ ಗೋಪಾಲ್​ ವರ್ಮಾ ಅವರ ಈ ಟ್ವೀಟ್​ ಬಗ್ಗೆ ನೆಟ್ಟಿಗರು ಪರ-ವಿರೋಧ ಚರ್ಚೆ ಮಾಡಿದ್ದಾರೆ. ಕೆಲವರು ರಾಮ್ ಗೋಪಾಲ್​ ವರ್ಮಾ ಅವರ ಅಭಿಪ್ರಾಯವನ್ನು ಬೆಂಬಲಿಸಿದ್ದಾರೆ. ‘ನಾವು ನೇರವಾಗಿ ಓದಿ ತಿಳಿದುಕೊಳ್ಳುವ ಬದಲು ಬೇರೆಯವರು ತಮಗೆ ಬೇಕಾದಂತೆ ಅರ್ಥೈಸಿ ಬರೆದ ಭಗವದ್ಗೀತೆಯನ್ನು ಓದಿದ್ದೇನೆ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ಇನ್ನೊಂದು ವರ್ಗದ ಜನರು ರಾಮ್​ ಗೋಪಾಲ್​ ವರ್ಮಾರ ಹೇಳಿಕೆಯನ್ನು ವಿರೋಧಿಸಿದ್ದಾರೆ. ‘ಭಾರತದ ಹಲವರು ಬೈಬಲ್​ ಓದಿದ್ದಾರೆ. ಆದರೆ ಅಮೆರಿಕದ ಶೇಕಡ 0.0000001ರಷ್ಟು ಜನರು ಬೈಬಲ್​ ಓದುವ ಧೈರ್ಯ ತೋರಿಸಿಲ್ಲ’ ಎಂಬ ಕಮೆಂಟ್​ ಕೂಡ ಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!