AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Gopal Varma: ‘ಆಪನ್​ಹೈಮರ್​’ ಚಿತ್ರದಲ್ಲಿನ ಭಗವದ್ಗೀತೆ ಕುರಿತ ವಿವಾದಾತ್ಮಕ ದೃಶ್ಯದ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಪ್ರತಿಕ್ರಿಯೆ

Oppenheimer Movie: ರಾಮ್​ ಗೋಪಾಲ್​ ವರ್ಮಾ ಅವರ ಟ್ವೀಟ್​ ಬಗ್ಗೆ ನೆಟ್ಟಿಗರು ಪರ-ವಿರೋಧ ಚರ್ಚೆ ಮಾಡಿದ್ದಾರೆ. ಆರ್​ಜಿವಿ ಅಭಿಪ್ರಾಯವನ್ನು ಕೆಲವರು ಬೆಂಬಲಿಸಿದ್ದಾರೆ. ಇನ್ನೊಂದು ವರ್ಗದವರು ಟೀಕಿಸಿದ್ದಾರೆ.

Ram Gopal Varma: ‘ಆಪನ್​ಹೈಮರ್​’ ಚಿತ್ರದಲ್ಲಿನ ಭಗವದ್ಗೀತೆ ಕುರಿತ ವಿವಾದಾತ್ಮಕ ದೃಶ್ಯದ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಪ್ರತಿಕ್ರಿಯೆ
ರಾಮ್​ ಗೋಪಾಲ್​ ವರ್ಮಾ, ಕಿಲಿಯನ್​ ಮರ್ಫಿ
ಮದನ್​ ಕುಮಾರ್​
|

Updated on: Jul 24, 2023 | 9:12 PM

Share

ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಅವರು ಹಲವು ವಿಚಾರಗಳ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಾರೆ. ಅವರ ಮಾತುಗಳಿಂದ ಅನೇಕ ಬಾರಿ ವಿವಾದಗಳು ಆಗಿದ್ದುಂಟು. ಇತ್ತೀಚೆಗೆ ಬಹುತೇಕರು ಅವರ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಹಾಗಿದ್ದರೂ ಕೂಡ ಸೋಶಿಯಲ್​ ಮೀಡಿಯಾದಲ್ಲಿ ರಾಮ್​ ಗೋಪಾಲ್​ ವರ್ಮಾ ಮಾಡುವ ಪೋಸ್ಟ್​ಗಳು ವೈರಲ್​ ಆಗುತ್ತವೆ. ಈಗ ಅವರು ‘ಆಪನ್​ಹೈಮರ್​’ (Oppenheimer) ಸಿನಿಮಾದಲ್ಲಿನ ಒಂದು ವಿವಾದಾತ್ಮಕ ದೃಶ್ಯದ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಕ್ರಿಸ್ಟೋಫರ್​ ನೋಲನ್​ ನಿರ್ದೇಶನದ ಈ ಸಿನಿಮಾ ಭಾರತದಲ್ಲಿ ಉತ್ತಮ ಕಲೆಕ್ಷನ್​ ಮಾಡುತ್ತಿದೆ. ಆದರೆ ಈ ಚಿತ್ರದಲ್ಲಿ ಭಗವದ್ಗೀತೆಗೆ (Bhagavad Gita) ಅವಮಾನ ಆಗುವಂತಹ ದೃಶ್ಯ ಇದೆ ಎಂದು ಕೆಲವರು ತಕರಾರು ತೆಗೆದಿದ್ದಾರೆ. ಆ ಬಗ್ಗೆ ರಾಮ್​ ಗೋಪಾಲ್​ ವರ್ಮಾ ತಮ್ಮ ಅನಿಸಿಕೆ ತಿಳಿಸಿದ್ದಾರೆ.

ವಿವಾದ ಏನು?

ಅಣುಬಾಂಬ್​ ಕಂಡುಹಿಡಿದ ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್​ ಆಪನ್​ಹೈಮರ್​ ಅವರ ಜೀವನದ ಕುರಿತು ‘ಆಪನ್​ಹೈಮರ್​’ ಸಿನಿಮಾ ಮೂಡಿಬಂದಿದೆ. ಈ ಚಿತ್ರದಲ್ಲಿ ಒಂದು ದೃಶ್ಯ ಇದೆ. ಲೈಂಗಿಕ ಕ್ರಿಯೆ ನಡೆಸುವ ಸಂದರ್ಭದಲ್ಲಿ ಆಪನ್​ಹೈಮರ್​ ಅವರ ಪ್ರೇಯಸಿಗೆ ಹಲವು ಪುಸ್ತಕಗಳು ಕಾಣಿಸುತ್ತವೆ. ಅವುಗಳಲ್ಲಿ ಒಂದು ಪುಸ್ತಕವನ್ನು ಹಿಡಿದುಕೊಂಡು ‘ಇದು ಏನು’ ಎಂದು ಆಕೆ ಪ್ರಶ್ನಿಸುತ್ತಾಳೆ. ‘ಇದು ಭಗವದ್ಗೀತೆ’ ಅಂತ ಆಪನ್​ಹೈಮರ್​ ಉತ್ತರಿಸುತ್ತಾರೆ ಹಾಗೂ ಅದರಲ್ಲಿ ಇರುವ ಕೆಲವು ಸಾಲುಗಳನ್ನು ವಿವರಿಸಿ ಹೇಳುತ್ತಾರೆ. ಈ ದೃಶ್ಯಕ್ಕೆ ಭಾರತದ ಸೆನ್ಸಾರ್​ ಮಂಡಳಿ ಸದಸ್ಯರು ಹೇಗೆ ಅನುಮತಿ ಕೊಟ್ಟರು ಎಂದು ಅನೇಕರು  ಕ್ಯಾತೆ ತೆಗೆದಿದ್ದಾರೆ.

ಇದನ್ನೂ ಓದಿ: ಮೂರೇ ದಿನಕ್ಕೆ ಭಾರತದಲ್ಲಿ 50 ಕೋಟಿ ರೂಪಾಯಿ ಕಮಾಯಿ ಮಾಡಿದ ‘ಆಪನ್​ಹೈಮರ್’; ‘ಬಾರ್ಬಿ’ ಕಥೆ ಏನು?

ರಾಮ್​ ಗೋಪಾಲ್​ ವರ್ಮಾ ಹೇಳಿದ್ದೇನು?

‘ಆಪನ್​ಹೈಮರ್​’ ಸಿನಿಮಾದಲ್ಲಿ ಭಗವದ್ಗೀತೆಗೆ ಅವಮಾನ ಆಗಿದೆ ಎಂದು ಕೆಲವರು ಹೇಳಿರುವುದಕ್ಕೆ ರಾಮ್​ ಗೋಪಾಲ್​ ವರ್ಮಾ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಅಮರಿಕದ ನ್ಯೂಕ್ಲಿಯರ್​ ವಿಜ್ಞಾನಿ ಆಪನ್​ಹೈಮರ್​ ಅವರು ಭಗವದ್ಗೀತೆ ಓದಿದ್ದರು. ವಿಪರ್ಯಾಸ ಏನೆಂದರೆ, ಭಾರತದ ಶೇಕಡ 0.0000001ರಷ್ಟು ಮಂದಿ ಕೂಡ ಭಗವದ್ಗೀತೆ ಓದಿದ್ದಾರೆ ಎಂಬ ಬಗ್ಗೆ ನನಗೆ ಅನುಮಾನ ಇದೆ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ.

ನೆಟ್ಟಿಗರ ಪರ-ವಿರೋಧ:

ರಾಮ್​ ಗೋಪಾಲ್​ ವರ್ಮಾ ಅವರ ಈ ಟ್ವೀಟ್​ ಬಗ್ಗೆ ನೆಟ್ಟಿಗರು ಪರ-ವಿರೋಧ ಚರ್ಚೆ ಮಾಡಿದ್ದಾರೆ. ಕೆಲವರು ರಾಮ್ ಗೋಪಾಲ್​ ವರ್ಮಾ ಅವರ ಅಭಿಪ್ರಾಯವನ್ನು ಬೆಂಬಲಿಸಿದ್ದಾರೆ. ‘ನಾವು ನೇರವಾಗಿ ಓದಿ ತಿಳಿದುಕೊಳ್ಳುವ ಬದಲು ಬೇರೆಯವರು ತಮಗೆ ಬೇಕಾದಂತೆ ಅರ್ಥೈಸಿ ಬರೆದ ಭಗವದ್ಗೀತೆಯನ್ನು ಓದಿದ್ದೇನೆ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ಇನ್ನೊಂದು ವರ್ಗದ ಜನರು ರಾಮ್​ ಗೋಪಾಲ್​ ವರ್ಮಾರ ಹೇಳಿಕೆಯನ್ನು ವಿರೋಧಿಸಿದ್ದಾರೆ. ‘ಭಾರತದ ಹಲವರು ಬೈಬಲ್​ ಓದಿದ್ದಾರೆ. ಆದರೆ ಅಮೆರಿಕದ ಶೇಕಡ 0.0000001ರಷ್ಟು ಜನರು ಬೈಬಲ್​ ಓದುವ ಧೈರ್ಯ ತೋರಿಸಿಲ್ಲ’ ಎಂಬ ಕಮೆಂಟ್​ ಕೂಡ ಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು