AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oppenheimer: ಮೊಟ್ಟ ಮೊದಲ ಅಣು ಬಾಂಬ್​ ಪರೀಕ್ಷೆಯ ರಿಯಲ್​ ವಿಡಿಯೋ ವೈರಲ್​; ‘ಆಪನ್​ಹೈಮರ್​’ ಚಿತ್ರದಲ್ಲಿ ವ್ಯತ್ಯಾಸ ಉಂಟಾ?

Christopher Nolan: ಅಮೆರಿಕದ ವಿಜ್ಞಾನಿಗಳು ಅಣು ಬಾಂಬ್​ ಕಂಡು ಹಿಡಿದಾಗ ಅದನ್ನು 1945ರಲ್ಲಿ ಮೊದಲ ಬಾರಿಗೆ ಪರೀಕ್ಷೆ ಮಾಡಲಾಗಿತ್ತು. ಜೆ. ರಾಬರ್ಟ್​ ಆಪನ್​ಹೈಮರ್​ ಅವರು ಅದರ ಉಸ್ತುವಾರಿ ವಹಿಸಿದ್ದರು.

Oppenheimer: ಮೊಟ್ಟ ಮೊದಲ ಅಣು ಬಾಂಬ್​ ಪರೀಕ್ಷೆಯ ರಿಯಲ್​ ವಿಡಿಯೋ ವೈರಲ್​; ‘ಆಪನ್​ಹೈಮರ್​’ ಚಿತ್ರದಲ್ಲಿ ವ್ಯತ್ಯಾಸ ಉಂಟಾ?
ಆಪನ್​ಹೈಮರ್​
ಮದನ್​ ಕುಮಾರ್​
|

Updated on: Jul 30, 2023 | 11:39 AM

Share

ನಿರ್ದೇಶಕ ಕ್ರಿಸ್ಟೋಫರ್​ ನೋಲನ್​ (Christopher Nolan) ಅವರು ಪ್ರತಿ ಸಿನಿಮಾದಲ್ಲೂ ಅಭಿಮಾನಿಗಳಿಗೆ ಅಚ್ಚರಿ ನೀಡುತ್ತಾರೆ. ಇತ್ತೀಚೆಗೆ ಅವರ ನಿರ್ದೇಶನದಲ್ಲಿ ಮೂಡಿಬಂದ ‘ಆಪನ್​ಹೈಮರ್​’ ಸಿನಿಮಾ (Oppenheimer) ಕೂಡ ಸೂಪರ್​ ಹಿಟ್​ ಆಗಿದೆ. ಅಣು ಬಾಂಬ್​ ಕಂಡುಹಿಡಿದ ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್​ ಆಪನ್​ಹೈಮರ್​ ಅವರ ಜೀವನದ ಕುರಿತು ಈ ಸಿನಿಮಾ ಸಿದ್ಧವಾಗಿದೆ. ಕ್ರಿಸ್ಟೋಫರ್​ ನೋಲನ್​ ಅವರು ಈ ಸಿನಿಮಾವನ್ನು ಕಟ್ಟಿಕೊಟ್ಟ ರೀತಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಅದರಲ್ಲೂ ಅಣು ಬಾಂಬ್​ (Atom Bomb) ಪರೀಕ್ಷೆಯ ದೃಶ್ಯಗಳಿಗೆ ಹೆಚ್ಚು ಮೆಚ್ಚುಗೆ ಸಿಕ್ಕಿದೆ. ಅದು ತುಂಬ ವೈಭವದಿಂದ ಕೂಡಿದೆ ಎಂಬ ಕಾರಣಕ್ಕಾಗಿ ಅಲ್ಲ. ಬದಲಿಗೆ, ಹೆಚ್ಚು ನಿಖರವಾಗಿ ಆ ದೃಶ್ಯವನ್ನು ಚಿತ್ರಿಸಲಾಗಿದೆ ಎಂಬುದೇ ಪ್ರಶಂಸೆಗೆ ಕಾರಣ ಆಗಿದೆ. ಈ ನಡುವೆ, ಮೊಟ್ಟ ಮೊದಲ ಅಣು ಬಾಂಬ್​ ಪರೀಕ್ಷೆಯ ರಿಯಲ್​ ವಿಡಿಯೋ ವೈರಲ್​ ಆಗಿದೆ.

ಅಮೆರಿಕದ ವಿಜ್ಞಾನಿಗಳು ಅಣು ಬಾಂಬ್​ ಕಂಡು ಹಿಡಿದಾಗ ಅದನ್ನು 1945ರಲ್ಲಿ ಮೊದಲ ಬಾರಿಗೆ ಪರೀಕ್ಷೆ ಮಾಡಲಾಗಿತ್ತು. ಜೆ. ರಾಬರ್ಟ್​ ಆಪನ್​ಹೈಮರ್​ ಅವರು ಅದರ ಉಸ್ತುವಾರಿ ವಹಿಸಿದ್ದರು. ಅಂದು ಏನೆಲ್ಲ ನಡೆಯಿತು ಎಂಬುದನ್ನು ವಿವರಿಸುವ ರಿಯಲ್​ ವಿಡಿಯೋ ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅದರಲ್ಲಿ ಹೇಗಿದೆಯೋ ಅದೇ ರೀತಿ ಸಿನಿಮಾದಲ್ಲೂ ತೋರಿಸಲಾಗಿದೆ. ಹೆಚ್ಚೇನೂ ವ್ಯತ್ಯಾಸ ಇಲ್ಲದೆ, ಎಷ್ಟು ಸಾಧ್ಯವೋ ಅಷ್ಟು ನಿಖರವಾಗಿ ಆ ದೃಶ್ಯವನ್ನು ಕ್ರಿಸ್ಟೋಫರ್​ ನೋಲನ್​ ಅವರು ಚಿತ್ರಿಸಿದ್ದಾರೆ. ಇದಕ್ಕಾಗಿ ಪ್ರೇಕ್ಷಕರು ಭೇಷ್​ ಎನ್ನುತ್ತಿದ್ದಾರೆ.

View this post on Instagram

A post shared by News in Memes (@peeper)

ಜೆ. ರಾಬರ್ಟ್​ ಆಪನ್​ಹೈಮರ್​ ಅವರ ಪಾತ್ರವನ್ನು ಕಿಲಿಯನ್​ ಮರ್ಫಿ ನಿಭಾಯಿಸಿದ್ದಾರೆ. ಇನ್ನುಳಿದ ಪಾತ್ರಗಳಲ್ಲಿ ಮ್ಯಾಟ್​ ಡೇಮನ್​, ಎಲಿಮಿ ಬ್ಲಂಟ್​, ರಾಬರ್ಡ್​ ಡೌನಿ ಜೂನಿಯರ್​ ಮುಂತಾದವರು ನಟಿಸಿದ್ದಾರೆ. ವಿಶ್ವಾದ್ಯಂತ ರಿಲೀಸ್​ ಆಗಿರುವ ಈ ಸಿನಿಮಾಗೆ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಕಮಾಯಿ ಆಗಿದೆ. ಭಾರತದಲ್ಲಿ ಈ ಚಿತ್ರ 84 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಆ ಮೂಲಕ ಚಿತ್ರತಂಡ ಗೆಲುವಿನ ನಗು ಬೀರಿದೆ. ಹೊಸ ಸಿನಿಮಾಗಳ ರಿಲೀಸ್​ ನಡುವೆಯೂ ‘ಆಪನ್​ಹೈಮರ್​’ ಸಿನಿಮಾ ಪೈಪೋಟಿ ನೀಡುತ್ತಿದೆ.

ಇದನ್ನೂ ಓದಿ: Hostel Hudugaru Bekagiddare: ‘ಆಪನ್​ಹೈಮರ್​’, ‘ಬಾರ್ಬಿ’ ಚಿತ್ರವನ್ನೂ ಮೀರಿಸಿ ‘ಬುಕ್​ ಮೈ ಶೋ’ ರೇಟಿಂಗ್​ ಪಡೆದ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’

ಜುಲೈ 21ರಂದು ‘ಆಪನ್​ಹೈಮರ್​’ ಸಿನಿಮಾ ಬಿಡುಗಡೆ ಆಯಿತು. ಅದೇ ದಿನ ಹಾಲಿವುಡ್​ನ ಮತ್ತೊಂದು ಸಿನಿಮಾ ‘ಬಾರ್ಬಿ’ ಕೂಡ ತೆರೆಕಂಡಿತು. ಈ ಎರಡು ಸಿನಿಮಾಗಳ ನಡುವೆ ಸಖತ್​ ಸ್ಪರ್ಧೆ ಏರ್ಪಟ್ಟಿತ್ತು. ಭಾರತದಲ್ಲಿ ‘ಬಾರ್ಬಿ’ ಚಿತ್ರಕ್ಕಿಂತಲೂ ‘ಆಪನ್​ಹೈಮರ್​’ ಸಿನಿಮಾ ಹೆಚ್ಚು ಕಲೆಕ್ಷನ್​ ಮಾಡಿದೆ. ಈ ಸಿನಿಮಾದಲ್ಲಿ ಭಗವದ್ಗೀತೆ ಕುರಿತು ಆಕ್ಷೇಪಾರ್ಹ ದೃಶ್ಯ ಇದೆ ಎಂದು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ವಿರೋಧ ಎದುರಾದ ಬಳಿಕ ಕಲೆಕ್ಷನ್​ ಕೊಂಚ ತಗ್ಗಿದೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ