AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಂಡ ಆಸ್ಕರ್​ ಪುರಸ್ಕೃತ ನಟಿಯ ಮಗ; ರೆಜೀನಾ ಕಿಂಗ್​ ಬಾಳಿನಲ್ಲಿ ಆವರಿಸಿತು ಕತ್ತಲು

Ian Alexander Jr Death: ನಟಿ ರೆಜೀನಾ ಕಿಂಗ್ ಪುತ್ರ ಇಯಾನ್​ ಅಲೆಕ್ಸಾಂಡರ್​ ಜ್ಯೂನಿಯರ್ ಆತ್ಮಹತ್ಯೆ ಮಾಡಿಕೊಂಡಿರುವುದು ಖಚಿತವಾಗಿದೆ. ಅವರಿಗೆ 26 ವರ್ಷ ವಯಸ್ಸಾಗಿತ್ತು.

ಆತ್ಮಹತ್ಯೆ ಮಾಡಿಕೊಂಡ ಆಸ್ಕರ್​ ಪುರಸ್ಕೃತ ನಟಿಯ ಮಗ; ರೆಜೀನಾ ಕಿಂಗ್​ ಬಾಳಿನಲ್ಲಿ ಆವರಿಸಿತು ಕತ್ತಲು
ಇಯಾನ್ ಅಲೆಕ್ಸಾಂಡರ್ ಜ್ಯೂನಿಯರ್, ರೆಜಿನಾ ಕಿಂಗ್
TV9 Web
| Edited By: |

Updated on: Jan 23, 2022 | 3:26 PM

Share

ಹಾಲಿವುಡ್​ ನಟಿ ರೆಜೀನಾ ಕಿಂಗ್​ (Regina King) ಬಾಳಿನಲ್ಲಿ ಕತ್ತಲು ಆವರಿಸಿದೆ. ಬಹಳ ಪ್ರೀತಿಯಿಂದ ಬೆಳೆಸಿದ್ದ ಅವರ ಮಗ ಇಯಾನ್​ ಅಲೆಕ್ಸಾಂಡರ್​ ಜ್ಯೂನಿಯರ್​ (Ian Alexander Jr) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸುದ್ದಿ ಕೇಳಿ ರೆಜೀನಾ ಕಿಂಗ್​ ಅಭಿಮಾನಿಗಳಿಗೆ ಶಾಕ್​ ಆಗಿದೆ. ‘ಇಯಾನ್​ ಅಲೆಕ್ಸಾಂಡರ್​ ಜ್ಯೂನಿಯರ್​ ನಿಧನದಿಂದಾಗಿ ನಮ್ಮ ಕುಟುಂಬಕ್ಕೆ ತೀವ್ರ ನೋವಾಗಿದೆ. ಇತರರ ಖುಷಿಗಾಗಿ ಅವರು ಕಾಳಜಿ ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸಿ’ ಎಂದು ರೆಜೀನಾ ಕಿಂಗ್​ ಅವರು ಹೇಳಿಕೆ ಬಿಡುಗಡೆ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ದುರಂತ ಏನೆಂದರೆ, ಕೆಲವೇ ದಿನಗಳ ಹಿಂದೆ ಇಯಾನ್​ ಅಲೆಕ್ಸಾಂಡರ್​ ಜ್ಯೂನಿಯರ್​ ಅವರ ಜನ್ಮದಿನ (ಜ.19) ಆಚರಣೆ ಮಾಡಲಾಗಿತ್ತು. ಆ ಖುಷಿಯ ಕ್ಷಣಗಳು ಇನ್ನೂ ಹಸಿರಾಗಿರುವಾಗಲೇ ಅವರು ಆತ್ಮಹತ್ಯೆಯ ಹಾದಿ ಹಿಡಿದಿರುವುದು ಯಾಕೆ ಎಂಬುದು ತಿಳಿದುಬಂದಿಲ್ಲ. ಮಗನನ್ನು ಕಳೆದುಕೊಂಡಿರುವ ರೆಜೀನಾ ಕಿಂಗ್​ ಅವರಿಗೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಆಸ್ಕರ್​ ಪ್ರಶಸ್ತಿ (Oscar Awards), ಗೋಲ್ಡನ್​ ಗ್ಲೋಬ್​ ಪ್ರಶಸ್ತಿ ಮುಂತಾದ ಪುರಸ್ಕಾರಗಳಿಗೆ ಪಾತ್ರರಾಗಿದ್ದ ರೆಜೀನಾ ಕಿಂಗ್ ಅವರು ಈಗ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.

1980ರ ದಶಕದಿಂದಲೂ ರೆಜೀನಾ ಕಿಂಗ್​ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ನಟಿಯಾಗಿ, ನಿರ್ದೇಶಕಿಯಾಗಿ ಗುರುತಿಸಿಕೊಂಡಿರುವ ಅವರಿಗೆ ಈಗ 51 ವರ್ಷ ವಯಸ್ಸು. ಪತಿ ಇಯಾನ್​ ಅಲೆಕ್ಸಾಂಡರ್​ಗೆ 2007ರಲ್ಲಿಯೇ ವಿಚ್ಛೇದನ ನೀಡಿದರು. ಈ ದಂಪತಿಯ ಮಗನೇ ಇಯಾನ್​ ಅಲೆಕ್ಸಾಂಡರ್​ ಜ್ಯೂನಿಯರ್​. ಅವರು ಡಿಜೆ ಆಗಿ ಫೇಮಸ್​ ಆಗಿದ್ದರು. ಅವರಿಗೆ 26 ವರ್ಷ ವಯಸ್ಸಾಗಿತ್ತು.

ಇಯಾನ್​ ಅಲೆಕ್ಸಾಂಡರ್​ ಜ್ಯೂನಿಯರ್ ಆತ್ಮಹತ್ಯೆ ಮಾಡಿಕೊಂಡಿರುವುದು ಖಚಿತವಾಗಿದೆ. ಆದರೆ ಅವರು ಈ ದುಡುಕಿನ ನಿರ್ಧಾರ ತೆಗೆದುಕೊಳ್ಳಲು ಕಾರಣ ಏನು ಎಂಬುದು ಇನ್ನೂ ನಿಗೂಢವಾಗಿಯೇ ಉಳಿದುಕೊಂಡಿದೆ. ರೆಜೀನಾ ಕಿಂಗ್​ ಅವರು ಸ್ಟಾರ್​ ನಟಿ, ನಿರ್ದೇಶಕಿ ಆಗಿದ್ದರಿಂದ ಅನೇಕ ಸಮಾರಂಭಗಳ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕಿದ್ದುಂಟು. ಆಗೆಲ್ಲ ಅವರ ಜೊತೆ ಪುತ್ರ ಇಯಾನ್​ ಅಲೆಕ್ಸಾಂಡರ್​ ಜ್ಯೂನಿಯರ್ ಕೂಡ ಕಾಣಿಸಿಕೊಳ್ಳುತ್ತಿದ್ದರು. ಮಗನ ಬಗ್ಗೆ ಅವರು ಸಾರ್ವಜನಿಕವಾಗಿ ಹಲವು ಬಾರಿ ಮಾತನಾಡಿದ್ದರು. ಪುತ್ರನ ಭವಿಷ್ಯದ ಬಗ್ಗೆ ಅವರು ಹಲವು ಕನಸುಗಳನ್ನು ಇಟ್ಟುಕೊಂಡಿದ್ದರು. ಕೆಲವೇ ವಾರಗಳ ಹಿಂದೆ ಇಯಾನ್​ ಅಲೆಕ್ಸಾಂಡರ್​ ಜ್ಯೂನಿಯರ್ ಹೊಸ ಹಾಡು ಬಿಡುಗಡೆ ಮಾಡಿದ್ದಾಗ ಅದನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುವ ಮೂಲಕ ರೆಜೀನಾ ಕಿಂಗ್ ಅವರು ಜನರ ಬೆಂಬಲ ಕೋರಿದ್ದರು.

ತಾಯಿಯ ಬಗ್ಗೆ ಇಯಾನ್​ ಅಲೆಕ್ಸಾಂಡರ್​ ಜ್ಯೂನಿಯರ್ ಅಪಾರ ಪ್ರೀತಿ ಹೊಂದಿದ್ದರು. ಆ ಕುರಿತು ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಳ್ಳುತ್ತಿದ್ದರು. ರೆಜೀನಾ ಅವರ 50ನೇ ವರ್ಷದ ಹುಟ್ಟುಹಬ್ಬದ ಸಮಯದಲ್ಲಿ ವಿಶ್​ ಮಾಡಿದ್ದ ಅವರು, ‘ನಿಮ್ಮಂಥ ತಾಯಿಯನ್ನು ಪಡೆದಿರುವುದು ನನ್ನ ಪಾಲಿಗೆ ಶ್ರೇಷ್ಠ ಉಡುಗೊರೆ. ನೀವೇ ನನ್ನ ಸೂಪರ್​ ಹೀರೋ. ಎಂದೆಂದಿಗೂ ನಿಮ್ಮನ್ನು ಪ್ರೀತಿಸುತ್ತೇನೆ’ ಎಂದು ಪೋಸ್ಟ್​ ಮಾಡಿದ್ದರು.

ತಾಯಿಯ ಬಗ್ಗೆ ಇಷ್ಟೆಲ್ಲ ಪ್ರೀತಿ ಇಟ್ಟುಕೊಂಡಿದ್ದ ಇಯಾನ್​ ಅಲೆಕ್ಸಾಂಡರ್​ ಜ್ಯೂನಿಯರ್ ಅವರು ಈಗ ಅಮ್ಮನನ್ನು ಒಂಟಿಯಾಗಿಸಿ, ಬಾರದ ಲೋಕಕ್ಕೆ ತೆರಳಿದ್ದಾರೆ. ಅವರ ಸಾವಿನ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬರಬೇಕಿದೆ. ಆತ್ಮಹತ್ಯೆಗೆ ಕಾರಣ ಏನಿರಬಹುದು ಎಂಬ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ:

‘ಮಹಾಭಾರತ​’ ಸೀರಿಯಲ್​ ಅರ್ಜುನ ಪಾತ್ರಧಾರಿ ಶಾಹೀರ್ ಶೇಖ್​ ತಂದೆ ಕೊವಿಡ್​ನಿಂದ ನಿಧನ

ಸಲ್ಮಾನ್​ ಖಾನ್​ ಪರ ಲಾಯರ್​ ಶ್ರೀಕಾಂತ್​ ಶಿವಡೆ ಕ್ಯಾನ್ಸರ್​ನಿಂದ ನಿಧನ; ‘ತಕ್ಕ ಶಿಕ್ಷೆ ಸಿಕ್ತು’ ಎಂದ ನೆಟ್ಟಿಗರು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ