AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajamouli: ರಾಜಮೌಳಿಯ ಹಾಲಿವುಡ್​ ಪ್ಲ್ಯಾನ್​ ಏನು? ಕೇಳಿಬಂತು ಎರಡು ಅಚ್ಚರಿಯ ಸುದ್ದಿ 

RRR, Rajamouli | Hollywood: ‘ಆರ್​ಆರ್​ಆರ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ರಾಜಮೌಳಿ ಅವರ ಖ್ಯಾತಿ ಹೆಚ್ಚಿದೆ. ಹಾಲಿವುಡ್​ ಕಂಪನಿಗಳು ಕೂಡ ಅವರನ್ನು ಹುಡುಕಿಕೊಂಡು ಬರುತ್ತಿವೆ.

Rajamouli: ರಾಜಮೌಳಿಯ ಹಾಲಿವುಡ್​ ಪ್ಲ್ಯಾನ್​ ಏನು? ಕೇಳಿಬಂತು ಎರಡು ಅಚ್ಚರಿಯ ಸುದ್ದಿ 
ರಾಜಮೌಳಿ
TV9 Web
| Edited By: |

Updated on:Sep 25, 2022 | 5:02 PM

Share

ನಿರ್ದೇಶಕ ರಾಜಮೌಳಿ (Rajamouli) ಅವರ ಪ್ರತಿಭೆ ಬಗ್ಗೆ ಹೊಸದಾಗಿ ಹೇಳುವಂಥದ್ದು ಏನೂ ಇಲ್ಲ. ಮಾತಿಗಿಂತಲೂ ಕೆಲಸದ ಮೂಲಕವೇ ಅವರು ತಮ್ಮ ಸಾಮಾರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಚಿತ್ರರಂಗದಲ್ಲಿ ಅವರು ಮಾಡಿದ ದಾಖಲೆಗಳನ್ನು ಅವರೇ ಮುರಿಯಬೇಕು. ‘ಬಾಹುಬಲಿ’, ‘ಆರ್​ಆರ್​ಆರ್​’ (RRR) ಮುಂತಾದ ಸಿನಿಮಾಗಳಿಂದ ರಾಜಮೌಳಿ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ಪ್ರಶಸ್ತಿ ಕಣಕ್ಕೆ ಭಾರತದಿಂದ ಆಯ್ಕೆ ಆಗಲಿದೆ ಎಂದು ಊಹಿಸಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಬೇಸರ ಆಗಿದ್ದು ನಿಜ. ಆದರೆ ಆ ಬೇಸರವನ್ನು ಮರೆಸುವಂತಹ ಎರಡು ಸುದ್ದಿ ಈಗ ಕೇಳಿಬಂದಿದೆ. ಹಾಲಿವುಡ್​ (Hollywood) ಕಂಪನಿಗಳ ಜೊತೆ ರಾಜಮೌಳಿ ಕೈ ಜೋಡಿಸಿರುವುದು ತಿಳಿದುಬಂದಿದೆ. ಹಾಗಾಗಿ ಅವರ ಮುಂದಿನ ಪ್ರಾಜೆಕ್ಟ್​ ಬಗ್ಗೆ ಕೌತುಕ ಹೆಚ್ಚಾಗಿದೆ.

ರಾಜಮೌಳಿ ಅವರ ಟಾಲಿವುಡ್​ ಸ್ಟಾರ್​ ನಟ ಮಹೇಶ್​ ಬಾಬು ಜೊತೆಗೆ ಸಿನಿಮಾ ಮಾಡಲು ಸಜ್ಜಾಗುತ್ತಿದ್ದಾರೆ. ಆ ಚಿತ್ರಕ್ಕಾಗಿ ಸ್ಕ್ರಿಪ್ಟ್​ ಕೆಲಸಗಳು ಭರದಿಂದ ಸಾಗುತ್ತಿವೆ. ಅಷ್ಟರಲ್ಲಾಗಲೇ ರಾಜಮೌಳಿ ಅವರು ಹಾಲಿವುಡ್​ನ ಕ್ರಿಯೇಟಿವ್​ ಆರ್ಟಿಸ್ಟ್ಸ್​ ಏಜೆನ್ಸಿ (ಸಿಎಎ) ಜೊತೆ ಕೈ ಜೋಡಿಸಿದ್ದಾರೆ. ಈ ಪ್ರತಿಷ್ಠಿತ ಸಂಸ್ಥೆ ಜೊತೆ ಅವರು ಹೊಸ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ.

ಸಿಎಎ ಜೊತೆ ಕೈ ಜೋಡಿಸಿರುವುದರಿಂದ ರಾಜಮೌಳಿ ಅವರ ಹವಾ ಹಾಲಿವುಡ್​ನಲ್ಲೂ ಹೆಚ್ಚಲಿದೆ. ಮಹೇಶ್​ ಬಾಬು ಜೊತೆ ಅವರು ಮಾಡಲಿರುವ ಚಿತ್ರವನ್ನು ವಿಶ್ವಮಟ್ಟಕ್ಕೆ ತಲುಪಿಸಲು ಪ್ಲ್ಯಾನ್​ ನಡೆದಿದೆ. ಅದರ ಅಂಗವಾಗಿಯೇ ರಾಜಮೌಳಿ ಅವರು ಸಿಎಎ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
Image
ಬಾಕ್ಸ್​ ಆಫೀಸ್​ನಲ್ಲಿ ನೂರಾರು ಕೋಟಿ ಬಾಚಿದ ‘ಬ್ರಹ್ಮಾಸ್ತ್ರ’ ಚಿತ್ರದಿಂದ ರಾಜಮೌಳಿಗೆ ಸಿಕ್ಕ ಹಣ ಎಷ್ಟು?
Image
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
Image
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ
Image
‘ನನ್ನ ಸಿನಿಮಾದಲ್ಲಿ ಅಂಥ ನಟರು ಇರೋದೇ ಬೇಡ’: ರಾಜಮೌಳಿಗೆ ಕಂಡೀಷನ್​ ಹಾಕಿದ ಮಹೇಶ್​ ಬಾಬು?

ಎರಡನೇ ಅಚ್ಚರಿಯ ಸುದ್ದಿ ಏನೆಂದರೆ, ಮಹೇಶ್​ ಬಾಬು-ರಾಜಮೌಳಿ ಕಾಂಬಿನೇಷನ್​ನ ಹೊಸ ಚಿತ್ರದಲ್ಲಿ ಹಾಲಿವುಡ್​ನ ಸ್ಟಾ​ರ್​ ನಟರು ಕೂಡ ಅತಿಥಿ ಪಾತ್ರ ಮಾಡುತ್ತಾರೆ ಎನ್ನಲಾಗಿದೆ. ಸದ್ಯಕ್ಕೆ ಇದು ಅಂತೆ-ಕಂತೆಯ ಹಂತದಲ್ಲಿ ಇದೆ. ಈ ಸುದ್ದಿ ಬಗ್ಗೆ ಯಾರೊಬ್ಬರು ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ‘ಅವೆಂಜರ್ಸ್​: ಎಂಡ್​ಗೇಮ್​’ ಮತ್ತು ಇತರ ಸಿನಿಮಾಗಳಲ್ಲಿ ‘ಥೋರ್’​ ಪಾತ್ರ ಮಾಡಿ ಸೈ ಎನಿಸಿಕೊಂಡಿರುವ ನಟ ಕ್ರಿಸ್​ ಹ್ಯಾಮ್ಸ್​ವರ್ಥ್​ ಅವರು ರಾಜಮೌಳಿಯ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಾರೆ ಎಂಬ ಸುದ್ದಿ ಕೆಲವೆಡೆ ಪ್ರಕಟ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್​ ಕಾದಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ರಾಜಮೌಳಿ ಅವರ ಖ್ಯಾತಿ ಹೆಚ್ಚಿದೆ. ಹಾಲಿವುಡ್​ ಮಂದಿ ಕೂಡ ಈ ಚಿತ್ರವನ್ನು ನೋಡಿ ಇಷ್ಟಪಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:02 pm, Sun, 25 September 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ