AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿವುಡ್​ ಆಫರ್​ ಬಗ್ಗೆ ಅಚ್ಚರಿಯ ಪ್ರತಿಕ್ರಿಯೆ ನೀಡಿದ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ

ರಾಜಮೌಳಿ ನಿರ್ದೇಶನದ ಸಿನಿಮಾಗಳು ಹಾಲಿವುಡ್​ ಚಿತ್ರಗಳ ರೀತಿಯೇ ಸಾವಿರಾರು ಕೋಟಿ ರೂಪಾಯಿ ವ್ಯವಹಾರ ಮಾಡುತ್ತವೆ. ಹಾಲಿವುಡ್​ ಮಂದಿ ಕೂಡ ರಾಜಮೌಳಿ ಅವರನ್ನು ಬೆರಗಿನಿಂದ ನೋಡುತ್ತಾರೆ.

ಹಾಲಿವುಡ್​ ಆಫರ್​ ಬಗ್ಗೆ ಅಚ್ಚರಿಯ ಪ್ರತಿಕ್ರಿಯೆ ನೀಡಿದ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ
ರಾಜಮೌಳಿ
TV9 Web
| Updated By: ಮದನ್​ ಕುಮಾರ್​|

Updated on: Dec 11, 2021 | 8:30 AM

Share

‘ಆರ್​ಆರ್​ಆರ್​’ (RRR Movie) ಸಿನಿಮಾದ  ನಿರ್ದೇಶಕ ರಾಜಮೌಳಿ (SS Rajamouli) ಅವರ ಹವಾ ಏನು ಎಂಬುದು ಎಲ್ಲರಿಗೂ ಗೊತ್ತು. ಈಗಾಗಲೇ ಅವರು ‘ಮಗಧೀರ’, ‘ಬಾಹುಬಲಿ’, ‘ಈಗ’ ಮುಂತಾದ ಸಿನಿಮಾಗಳ ಮೂಲಕ ತಮ್ಮ ಸಾಮರ್ಥ್ಯ ಏನು ಎಂಬುದು ಸಾಬೀತು ಮಾಡಿದ್ದಾರೆ. ಅವರ ಪ್ರತಿ ಹೊಸ ಸಿನಿಮಾದಲ್ಲಿಯೂ ತಾಂತ್ರಿಕ ಶ್ರೀಮಂತಿಕೆ ಹೆಚ್ಚುತ್ತಲೇ ಇದೆ. ಇಡೀ ವಿಶ್ವವೇ ತಿರುಗಿ ನೋಡುವಂತಹ ಸಿನಿಮಾಗಳನ್ನು (SS Rajamouli Movies) ಅವರು ನಿರ್ದೇಶಿಸುತ್ತಾರೆ. ಹಾಲಿವುಡ್​ (Hollywood) ಮಂದಿ ಕೂಡ ರಾಜಮೌಳಿ ಅವರನ್ನು ಬೆರಗಿನಿಂದ ನೋಡುತ್ತಾರೆ. ಇಷ್ಟೆಲ್ಲ ಪ್ರತಿಭಾವಂತನಾಗಿರುವ ರಾಜಮೌಳಿ, ಹಾಲಿವುಡ್​ ಸಿನಿಮಾ ಮಾಡುವುದು ಯಾವಾಗ? ಹಾಲಿವುಡ್​ ನಿರ್ಮಾಪಕರಿಂದ ಅವರಿಗೆ ಆಫರ್​ ಬಂದಿದೆಯೇ? ಈ ಕೌತುಕದ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾದ ಪ್ರಚಾರಕ್ಕಾಗಿ ಇತ್ತೀಚೆಗೆ ರಾಜಮೌಳಿ ಮತ್ತು ಅವರ ತಂಡದವರು ಮುಂಬೈಗೆ ತೆರಳಿದ್ದರು. ಈ ವೇಳೆ ಅವರಿಗೆ ಮಾಧ್ಯಮದವರಿಂದ ಹಾಲಿವುಡ್​ ಕುರಿತ ಪ್ರಶ್ನೆ ಎದುರಾಯಿತು. ಅದಕ್ಕೆ ರಾಜಮೌಳಿ ನೀಡಿದ ಉತ್ತರ ಅಚ್ಚರಿ ಮೂಡಿಸಿತು. ಈವರೆಗೂ ರಾಜಮೌಳಿ ಅವರಿಗೆ ಹಾಲಿವುಡ್​ನಿಂದ ಯಾವುದೇ ಆಫರ್​ ಬಂದಿಲ್ಲವಂತೆ! ಅದನ್ನು ಅವರು ನೇರವಾಗಿಯೇ ಒಪ್ಪಿಕೊಂಡರು.

ರಾಜಮೌಳಿ ನಿರ್ದೇಶನದ ಸಿನಿಮಾಗಳು ಹಾಲಿವುಡ್​ ಚಿತ್ರಗಳ ರೀತಿಯೇ ಸಾವಿರಾರು ಕೋಟಿ ರೂಪಾಯಿ ವ್ಯವಹಾರ ಮಾಡುತ್ತವೆ. ಹೀಗಿರುವಾಗ ಭವಿಷ್ಯದಲ್ಲಿ ಅವರಿಗೆ ಹಾಲಿವುಡ್​ ನಿರ್ಮಾಣ ಸಂಸ್ಥೆಗಳಿಂದ ಆಫರ್​ ಬರಬಹುದು. ಒಂದು ವೇಳೆ ಅಂತಹ ಅವಕಾಶ ಬಂದರೆ ಆಗಲೂ ಸಹ ಭಾರತೀಯ ನೆಲೆಕ್ಕೆ ಸಂಬಂಧಿಸಿದ ಕಥೆಯನ್ನೇ ಆಯ್ಕೆ ಮಾಡಿಕೊಂಡು, ಹಾಲಿವುಡ್​ ಸಿನಿಮಾ ಮಾಡಿ ಅದನ್ನು ಇಡೀ ಜಗತ್ತಿಗೆ ತೋರಿಸುವುದಾಗಿ ರಾಜಮೌಳಿ ಹೇಳಿದ್ದಾರೆ. ಅವರು ನೀಡಿದ ಈ ಉತ್ತರ ಕೇಳಿ ಫ್ಯಾನ್ಸ್​ ಫಿದಾ ಆಗಿದ್ದಾರೆ.

ಸದ್ಯ ರಾಜಮೌಳಿ ಗಮನವೆಲ್ಲ ‘ಆರ್​ಆರ್​ಆರ್​’ ಸಿನಿಮಾ ಮೇಲಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಅವರು ತೊಡಗಿಕೊಂಡಿದ್ದಾರೆ. ಶುಕ್ರವಾರ (ಡಿ.10) ಬೆಂಗಳೂರಿಗೂ ಬಂದು ಅವರು ಪ್ರಚಾರ ಮಾಡಿದ್ದಾರೆ. ಅವರ ಜೊತೆ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​, ನಿರ್ಮಾಪಕ ಡಿವಿವಿ ದಾನಯ್ಯ ಕೂಡ ಪ್ರಚಾರದಲ್ಲಿ ಪಾಲ್ಗೊಂಡರು. ಜ್ಯೂ. ಎನ್​ಟಿಆರ್​ ಅವರು ಪುನೀತ್ ರಾಜ್​ಕುಮಾರ್​​ ಜತೆಗಿನ ಸ್ನೇಹವನ್ನು ನೆನಪು ಮಾಡಿಕೊಂಡು ‘ಗೆಳೆಯ ಗೆಳೆಯ..’ ಹಾಡು ಹೇಳಿ ಭಾವುಕರಾದರು.

ಜ.7ರಂದು ವಿಶ್ವಾದ್ಯಂತ ಆರ್​ಆರ್​ಆರ್​ ಸಿನಿಮಾ ಬಿಡುಗಡೆ ಆಗಲಿದೆ. ತೆಲುಗಿನಲ್ಲಿ ನಿರ್ಮಾಣ ಆಗಿರುವ ಈ ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮುಂತಾದ ಭಾಷೆಗಳಿಗೆ ಡಬ್​ ಆಗಿಯೂ ತೆರೆಕಾಣುತ್ತಿದೆ.

ಇದನ್ನೂ ಓದಿ:

RRR​ ಸುದ್ದಿಗೋಷ್ಠಿ: ಕರುನಾಡಿಗೆ ಬಂದ ರಾಜಮೌಳಿ, ಆಲಿಯಾ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಹೇಳಿದ್ದೇನು?

ಪುಷ್ಪ, ಆರ್​ಆರ್​ಆರ್​ ಮೀರಿಸಿ ಟ್ರೆಂಡ್​ ಆದ ‘ಗಂಧದ ಗುಡಿ’; ಪುನೀತ್​ ಡಾಕ್ಯುಮೆಂಟರಿಗೆ ಬಹುಪರಾಕ್​

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ