AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿವುಡ್​ ಆಫರ್​ ಬಗ್ಗೆ ಅಚ್ಚರಿಯ ಪ್ರತಿಕ್ರಿಯೆ ನೀಡಿದ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ

ರಾಜಮೌಳಿ ನಿರ್ದೇಶನದ ಸಿನಿಮಾಗಳು ಹಾಲಿವುಡ್​ ಚಿತ್ರಗಳ ರೀತಿಯೇ ಸಾವಿರಾರು ಕೋಟಿ ರೂಪಾಯಿ ವ್ಯವಹಾರ ಮಾಡುತ್ತವೆ. ಹಾಲಿವುಡ್​ ಮಂದಿ ಕೂಡ ರಾಜಮೌಳಿ ಅವರನ್ನು ಬೆರಗಿನಿಂದ ನೋಡುತ್ತಾರೆ.

ಹಾಲಿವುಡ್​ ಆಫರ್​ ಬಗ್ಗೆ ಅಚ್ಚರಿಯ ಪ್ರತಿಕ್ರಿಯೆ ನೀಡಿದ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ
ರಾಜಮೌಳಿ
TV9 Web
| Edited By: |

Updated on: Dec 11, 2021 | 8:30 AM

Share

‘ಆರ್​ಆರ್​ಆರ್​’ (RRR Movie) ಸಿನಿಮಾದ  ನಿರ್ದೇಶಕ ರಾಜಮೌಳಿ (SS Rajamouli) ಅವರ ಹವಾ ಏನು ಎಂಬುದು ಎಲ್ಲರಿಗೂ ಗೊತ್ತು. ಈಗಾಗಲೇ ಅವರು ‘ಮಗಧೀರ’, ‘ಬಾಹುಬಲಿ’, ‘ಈಗ’ ಮುಂತಾದ ಸಿನಿಮಾಗಳ ಮೂಲಕ ತಮ್ಮ ಸಾಮರ್ಥ್ಯ ಏನು ಎಂಬುದು ಸಾಬೀತು ಮಾಡಿದ್ದಾರೆ. ಅವರ ಪ್ರತಿ ಹೊಸ ಸಿನಿಮಾದಲ್ಲಿಯೂ ತಾಂತ್ರಿಕ ಶ್ರೀಮಂತಿಕೆ ಹೆಚ್ಚುತ್ತಲೇ ಇದೆ. ಇಡೀ ವಿಶ್ವವೇ ತಿರುಗಿ ನೋಡುವಂತಹ ಸಿನಿಮಾಗಳನ್ನು (SS Rajamouli Movies) ಅವರು ನಿರ್ದೇಶಿಸುತ್ತಾರೆ. ಹಾಲಿವುಡ್​ (Hollywood) ಮಂದಿ ಕೂಡ ರಾಜಮೌಳಿ ಅವರನ್ನು ಬೆರಗಿನಿಂದ ನೋಡುತ್ತಾರೆ. ಇಷ್ಟೆಲ್ಲ ಪ್ರತಿಭಾವಂತನಾಗಿರುವ ರಾಜಮೌಳಿ, ಹಾಲಿವುಡ್​ ಸಿನಿಮಾ ಮಾಡುವುದು ಯಾವಾಗ? ಹಾಲಿವುಡ್​ ನಿರ್ಮಾಪಕರಿಂದ ಅವರಿಗೆ ಆಫರ್​ ಬಂದಿದೆಯೇ? ಈ ಕೌತುಕದ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾದ ಪ್ರಚಾರಕ್ಕಾಗಿ ಇತ್ತೀಚೆಗೆ ರಾಜಮೌಳಿ ಮತ್ತು ಅವರ ತಂಡದವರು ಮುಂಬೈಗೆ ತೆರಳಿದ್ದರು. ಈ ವೇಳೆ ಅವರಿಗೆ ಮಾಧ್ಯಮದವರಿಂದ ಹಾಲಿವುಡ್​ ಕುರಿತ ಪ್ರಶ್ನೆ ಎದುರಾಯಿತು. ಅದಕ್ಕೆ ರಾಜಮೌಳಿ ನೀಡಿದ ಉತ್ತರ ಅಚ್ಚರಿ ಮೂಡಿಸಿತು. ಈವರೆಗೂ ರಾಜಮೌಳಿ ಅವರಿಗೆ ಹಾಲಿವುಡ್​ನಿಂದ ಯಾವುದೇ ಆಫರ್​ ಬಂದಿಲ್ಲವಂತೆ! ಅದನ್ನು ಅವರು ನೇರವಾಗಿಯೇ ಒಪ್ಪಿಕೊಂಡರು.

ರಾಜಮೌಳಿ ನಿರ್ದೇಶನದ ಸಿನಿಮಾಗಳು ಹಾಲಿವುಡ್​ ಚಿತ್ರಗಳ ರೀತಿಯೇ ಸಾವಿರಾರು ಕೋಟಿ ರೂಪಾಯಿ ವ್ಯವಹಾರ ಮಾಡುತ್ತವೆ. ಹೀಗಿರುವಾಗ ಭವಿಷ್ಯದಲ್ಲಿ ಅವರಿಗೆ ಹಾಲಿವುಡ್​ ನಿರ್ಮಾಣ ಸಂಸ್ಥೆಗಳಿಂದ ಆಫರ್​ ಬರಬಹುದು. ಒಂದು ವೇಳೆ ಅಂತಹ ಅವಕಾಶ ಬಂದರೆ ಆಗಲೂ ಸಹ ಭಾರತೀಯ ನೆಲೆಕ್ಕೆ ಸಂಬಂಧಿಸಿದ ಕಥೆಯನ್ನೇ ಆಯ್ಕೆ ಮಾಡಿಕೊಂಡು, ಹಾಲಿವುಡ್​ ಸಿನಿಮಾ ಮಾಡಿ ಅದನ್ನು ಇಡೀ ಜಗತ್ತಿಗೆ ತೋರಿಸುವುದಾಗಿ ರಾಜಮೌಳಿ ಹೇಳಿದ್ದಾರೆ. ಅವರು ನೀಡಿದ ಈ ಉತ್ತರ ಕೇಳಿ ಫ್ಯಾನ್ಸ್​ ಫಿದಾ ಆಗಿದ್ದಾರೆ.

ಸದ್ಯ ರಾಜಮೌಳಿ ಗಮನವೆಲ್ಲ ‘ಆರ್​ಆರ್​ಆರ್​’ ಸಿನಿಮಾ ಮೇಲಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಅವರು ತೊಡಗಿಕೊಂಡಿದ್ದಾರೆ. ಶುಕ್ರವಾರ (ಡಿ.10) ಬೆಂಗಳೂರಿಗೂ ಬಂದು ಅವರು ಪ್ರಚಾರ ಮಾಡಿದ್ದಾರೆ. ಅವರ ಜೊತೆ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​, ನಿರ್ಮಾಪಕ ಡಿವಿವಿ ದಾನಯ್ಯ ಕೂಡ ಪ್ರಚಾರದಲ್ಲಿ ಪಾಲ್ಗೊಂಡರು. ಜ್ಯೂ. ಎನ್​ಟಿಆರ್​ ಅವರು ಪುನೀತ್ ರಾಜ್​ಕುಮಾರ್​​ ಜತೆಗಿನ ಸ್ನೇಹವನ್ನು ನೆನಪು ಮಾಡಿಕೊಂಡು ‘ಗೆಳೆಯ ಗೆಳೆಯ..’ ಹಾಡು ಹೇಳಿ ಭಾವುಕರಾದರು.

ಜ.7ರಂದು ವಿಶ್ವಾದ್ಯಂತ ಆರ್​ಆರ್​ಆರ್​ ಸಿನಿಮಾ ಬಿಡುಗಡೆ ಆಗಲಿದೆ. ತೆಲುಗಿನಲ್ಲಿ ನಿರ್ಮಾಣ ಆಗಿರುವ ಈ ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮುಂತಾದ ಭಾಷೆಗಳಿಗೆ ಡಬ್​ ಆಗಿಯೂ ತೆರೆಕಾಣುತ್ತಿದೆ.

ಇದನ್ನೂ ಓದಿ:

RRR​ ಸುದ್ದಿಗೋಷ್ಠಿ: ಕರುನಾಡಿಗೆ ಬಂದ ರಾಜಮೌಳಿ, ಆಲಿಯಾ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಹೇಳಿದ್ದೇನು?

ಪುಷ್ಪ, ಆರ್​ಆರ್​ಆರ್​ ಮೀರಿಸಿ ಟ್ರೆಂಡ್​ ಆದ ‘ಗಂಧದ ಗುಡಿ’; ಪುನೀತ್​ ಡಾಕ್ಯುಮೆಂಟರಿಗೆ ಬಹುಪರಾಕ್​

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ