AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಹೆಮ್ಮೆಯ ಕ್ಷಣ: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್​ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಭಾರತಕ್ಕೆ ಹೆಮ್ಮೆಯ ಕ್ಷಣ: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ
ರಾಮ್ ಚರಣ್-ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Mar 11, 2024 | 10:39 AM

Share

96ನೇ ಸಾಲಿನಲ್ಲಿ ಆಸ್ಕರ್ ಅವಾರ್ಡ್ (Oscar Award) ಕಾರ್ಯಕ್ರಮ ಇಂದು (ಮಾರ್ಚ್​ 11) ಅಮೆರಿಕದ ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​​ನಲ್ಲಿ ನಡೆದಿದೆ. ಈ ವೇದಿಕೆ ಮೇಲೆ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ ಸಲ್ಲಿಕೆ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಇದು ಭಾರತಕ್ಕೆ ಹೆಮ್ಮೆಯ ಕ್ಷಣ’ ಎಂದು ಫ್ಯಾನ್ಸ್ ಕರೆದಿದ್ದಾರೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಎಸ್​ಎಸ್​ ರಾಜಮೌಳಿ ತಂಡಕ್ಕೆ ಶುಭಕೋರುತ್ತಿದ್ದಾರೆ.

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್​ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ‘ಅತ್ಯುತ್ತಮ ಸಿನಿಮಾ’ ಸೇರಿ ಪ್ರಮುಖ ಅವಾರ್ಡ್ ಪಡೆದ ‘ಆಪನ್​​ಹೈಮರ್’; ಇಲ್ಲಿದೆ ಆಸ್ಕರ್ ಫುಲ್ ಲಿಸ್ಟ್

ಇಷ್ಟಕ್ಕೆ ನಿಂತಿಲ್ಲ. ಆ್ಯಕ್ಷನ್ ಸಿನಿಮಾಗಳಲ್ಲಿ ಹಿರೋಗಳು ಎಷ್ಟು ಕಷ್ಟಪಡುತ್ತಾರೆ ಎಂಬುದಕ್ಕೆ ವಿಶೇಷ ಗೌರವ ಅರ್ಪಿಸಲು ವಿಶೇಷ ವಿಡಿಯೋ ಮಾಡಲಾಗಿದೆ. ಈ ವಿಡಿಯೋದಲ್ಲಿ ‘ಆರ್​ಆರ್​ಆರ್’ ಚಿತ್ರದ ಆ್ಯಕ್ಷನ್ ದೃಶ್ಯ ಕೂಡ ಇತ್ತು ಅನ್ನೋದು ವಿಶೇಷ. ಈ ಬಗ್ಗೆ ರಾಜಮೌಳಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಆರ್​ಆರ್​ಆರ್​ ಚಿತ್ರಕ್ಕೆ ವಿಶೇಷ ಗೌರವ

ರಾಜಮೌಳಿ ನಿರ್ದೇಶನದ, ರಾಮ್ ಚರಣ್ ಹಾಗೂ ಜೂನಿಯರ್ ಎನ್​ಟಿಆರ್​ ನಟನೆಯ ‘ಆರ್​ಆರ್​ಆರ್’ ಚಿತ್ರ ಮಾಡಿದ ದಾಖಲೆಗಳು ಹಲವು. ಈ ವರ್ಷವೂ ಆಸ್ಕರ್ ಅವಾರ್ಡ್​ನಲ್ಲಿ ‘ಆರ್​ಆರ್​ಆರ್’ ಚಿತ್ರವನ್ನು ನೆನಪಿಸಿಕೊಂಡಿದ್ದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು