AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಹಾಲಿವುಡ್​ಗೆ ಹಾರಲಿದ್ದಾರೆ ಕಂಗನಾ? ಬಾಲಿವುಡ್​ ಅಂಗಳದಲ್ಲಿ ಹೊಸ ಸುದ್ದಿ

ಹಾಲಿವುಡ್​ ನಟ ರಸೆಲ್ ಕ್ರೋವ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಭಾರತದಲ್ಲೂ ಸಾಕಷ್ಟು ಜನರಿಗೆ ಅವರ ನಟನೆ ಇಷ್ಟವಾಗುತ್ತದೆ. ಕಂಗನಾ ರಣಾವತ್​ ಟ್ವಿಟರ್​ನಲ್ಲಿಲ್ಲ. ಆದರೆ, ಅವರ ಅಭಿಮಾನಿಗಳು ಟ್ವಿಟರ್​ನಲ್ಲಿ ಆ್ಯಕ್ಟಿವ್​ ಆಗಿದ್ದಾರೆ.

ಶೀಘ್ರವೇ ಹಾಲಿವುಡ್​ಗೆ ಹಾರಲಿದ್ದಾರೆ ಕಂಗನಾ? ಬಾಲಿವುಡ್​ ಅಂಗಳದಲ್ಲಿ ಹೊಸ ಸುದ್ದಿ
ಶೀಘ್ರವೇ ಹಾಲಿವುಡ್​ಗೆ ಹಾರಲಿದ್ದಾರೆ ಕಂಗನಾ? ಬಾಲಿವುಡ್​ ಅಂಗಳದಲ್ಲಿ ಹೊಸ ಸುದ್ದಿ
TV9 Web
| Edited By: |

Updated on:Aug 14, 2021 | 3:51 PM

Share

ನಟಿ ಕಂಗನಾ ರಣಾವತ್​ ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ನಟನೆ ಜತೆಗೆ ನಿರ್ದೇಶನದಲ್ಲೂ ಅವರು ಬ್ಯುಸಿ. ಈ ಮಧ್ಯೆ ಸಾಕಷ್ಟು ಸಿನಿಮಾ ಆಫರ್​ಗಳು ಅವರ ಕೈಯಲ್ಲಿವೆ. ಹಲವು ಸ್ಕ್ರಿಪ್ಟ್​ಗಳನ್ನು ಕಂಗನಾ ಕೇಳುತ್ತಿದ್ದಾರೆ. ಈ ಮಧ್ಯೆ ಕಂಗನಾಗೆ ಹಾಲಿವುಡ್​ನಿಂದ ಆಫರ್ ಬರುವ ಸೂಚನೆ ಸಿಕ್ಕಿದೆ. ಖ್ಯಾತ ಹಾಲಿವುಡ್​ ನಟ ಕಂಗನಾ ಜತೆ ನಟಿಸೋಕೆ ಪರೋಕ್ಷವಾಗಿ ಓಕೆ ಎಂದಿದ್ದಾರೆ.

ಹಾಲಿವುಡ್​ ನಟ ರಸೆಲ್ ಕ್ರೋವ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಭಾರತದಲ್ಲೂ ಸಾಕಷ್ಟು ಜನರಿಗೆ ಅವರ ನಟನೆ ಇಷ್ಟವಾಗುತ್ತದೆ. ಕಂಗನಾ ರಣಾವತ್​ ಟ್ವಿಟರ್​ನಲ್ಲಿಲ್ಲ. ಆದರೆ, ಅವರ ಅಭಿಮಾನಿಗಳು ಟ್ವಿಟರ್​ನಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ಇತ್ತೀಚೆಗೆ ರಸೆಲ್ ಕ್ರೋವ್ ಅವರನ್ನು ಟ್ಯಾಗ್​ ಮಾಡಿ ಕಂಗನಾ ಅಭಿಮಾನಿಗಳು ಟ್ವೀಟ್​ ಒಂದನ್ನು ಮಾಡಿದ್ದರು. ಅಲ್ಲದೆ, ಕಂಗನಾ-ರಸೆಲ್​ ತೆರೆ ಹಂಚಿಕೊಳ್ಳಬೇಕು ಎನ್ನುವ ಇಚ್ಛೆ ಹೊರ ಹಾಕಿದ್ದರು.

‘ಎರಡು ಭಿನ್ನ ಚಿತ್ರರಂಗದ ಕಲಾವಿದರು ಒಟ್ಟಿಗೆ ಕೆಲಸ ಮಾಡಿದರೆ ಹೇಗಿರುತ್ತದೆ? ಅಕಾಡೆಮಿ ವಿನ್ನರ್​ ರಸೆಲ್​ ಹಾಗೂ ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕಂಗನಾ ಒಟ್ಟಾಗಿ ಸಿನಿಮಾದಲ್ಲಿ ನಟಿಸಬೇಕು’ ಎಂದು ಅಭಿಮಾನಿಯೋರ್ವ ಟ್ವೀಟ್​ ಮಾಡಿದ್ದ. ಇದಕ್ಕೆ ರಸೆಲ್​ ಕೂಡ ಸಮ್ಮತಿ ಸೂಚಿಸಿದ್ದಾರೆ. ಅವರು ಈ ಟ್ವೀಟ್​ಅನ್ನು ರೀಟ್ವೀಟ್​ ಮಾಡಿಕೊಂಡಿದ್ದು, ಸಾಕಷ್ಟು ಅಚ್ಚರಿ ಮೂಡಿಸಿದೆ.

‘ಥಾರ್: ಲವ್ ಆ್ಯಂಡ್​ ಥಂಡರ್’ ಸಿನಿಮಾ ಕೆಲಸಗಳಲ್ಲಿ ರಸೆಲ್ ಬ್ಯುಸಿಯಾಗಿದ್ದಾರೆ. ಇನ್ನು, ಕಂಗನಾ, ‘ಥಲೈವಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕೆಲಸ ಸಂಪೂರ್ಣವಾಗಿ ಪೂರ್ಣಗೊಂಡಿದ್ದು, ರಿಲೀಸ್​ಗೆ ರೆಡಿ ಇದೆ. ಕೊವಿಡ್​ ಕಾರಣದಿಂದ ಸಿನಿಮಾ ಬಿಡುಗಡೆ ತಡವಾಗಿದೆ. ಇದಲ್ಲದೆ, ಧಾಕಡ್​ ಹಾಗೂ ತೇಜಸ್​ ಸಿನಿಮಾಗಳು ಅವರ ಕೈಯಲ್ಲಿವೆ. ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆಯನ್ನು ಟ್ಟಿಟರ್ ಬ್ಲಾಕ್​ ಮಾಡಿದೆ. ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಟ್ವೀಟ್​ ಮಾಡಲಾಗುತ್ತಿದೆ ಎನ್ನುವ ಕಾರಣಕ್ಕೆ ಟ್ವಿಟರ್​ ಈ ನಿರ್ಧಾರಕ್ಕೆ ಬಂದಿದೆ.

ಇದನ್ನೂ ಓದಿ: ಚಿತ್ರಮಂದಿರದಲ್ಲೇ ರಿಲೀಸ್​ ಆಗಲಿದೆ ಜಯಲಲಿತಾ ಬಯೋಪಿಕ್​ ತಲೈವಿ; ಗಾಸಿಪ್​ಗೆ ಕಂಗನಾ ಫುಲ್​ಸ್ಟಾಪ್​

ಪ್ರೇಮಿಗಳೆಲ್ಲಾ ಸಾಚಾನಾ? ಪ್ರೀತಿ ನಿಜನಾ? ನಟಿ ಕಂಗನಾ ಮಾಡ್ತಾರೆ ಕಠಿಣ ಪರೀಕ್ಷೆ

Published On - 3:42 pm, Sat, 14 August 21

Follow Us
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ