AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಹಾಲಿವುಡ್​ಗೆ ಹಾರಲಿದ್ದಾರೆ ಕಂಗನಾ? ಬಾಲಿವುಡ್​ ಅಂಗಳದಲ್ಲಿ ಹೊಸ ಸುದ್ದಿ

ಹಾಲಿವುಡ್​ ನಟ ರಸೆಲ್ ಕ್ರೋವ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಭಾರತದಲ್ಲೂ ಸಾಕಷ್ಟು ಜನರಿಗೆ ಅವರ ನಟನೆ ಇಷ್ಟವಾಗುತ್ತದೆ. ಕಂಗನಾ ರಣಾವತ್​ ಟ್ವಿಟರ್​ನಲ್ಲಿಲ್ಲ. ಆದರೆ, ಅವರ ಅಭಿಮಾನಿಗಳು ಟ್ವಿಟರ್​ನಲ್ಲಿ ಆ್ಯಕ್ಟಿವ್​ ಆಗಿದ್ದಾರೆ.

ಶೀಘ್ರವೇ ಹಾಲಿವುಡ್​ಗೆ ಹಾರಲಿದ್ದಾರೆ ಕಂಗನಾ? ಬಾಲಿವುಡ್​ ಅಂಗಳದಲ್ಲಿ ಹೊಸ ಸುದ್ದಿ
ಶೀಘ್ರವೇ ಹಾಲಿವುಡ್​ಗೆ ಹಾರಲಿದ್ದಾರೆ ಕಂಗನಾ? ಬಾಲಿವುಡ್​ ಅಂಗಳದಲ್ಲಿ ಹೊಸ ಸುದ್ದಿ
TV9 Web
| Edited By: |

Updated on:Aug 14, 2021 | 3:51 PM

Share

ನಟಿ ಕಂಗನಾ ರಣಾವತ್​ ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ನಟನೆ ಜತೆಗೆ ನಿರ್ದೇಶನದಲ್ಲೂ ಅವರು ಬ್ಯುಸಿ. ಈ ಮಧ್ಯೆ ಸಾಕಷ್ಟು ಸಿನಿಮಾ ಆಫರ್​ಗಳು ಅವರ ಕೈಯಲ್ಲಿವೆ. ಹಲವು ಸ್ಕ್ರಿಪ್ಟ್​ಗಳನ್ನು ಕಂಗನಾ ಕೇಳುತ್ತಿದ್ದಾರೆ. ಈ ಮಧ್ಯೆ ಕಂಗನಾಗೆ ಹಾಲಿವುಡ್​ನಿಂದ ಆಫರ್ ಬರುವ ಸೂಚನೆ ಸಿಕ್ಕಿದೆ. ಖ್ಯಾತ ಹಾಲಿವುಡ್​ ನಟ ಕಂಗನಾ ಜತೆ ನಟಿಸೋಕೆ ಪರೋಕ್ಷವಾಗಿ ಓಕೆ ಎಂದಿದ್ದಾರೆ.

ಹಾಲಿವುಡ್​ ನಟ ರಸೆಲ್ ಕ್ರೋವ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಭಾರತದಲ್ಲೂ ಸಾಕಷ್ಟು ಜನರಿಗೆ ಅವರ ನಟನೆ ಇಷ್ಟವಾಗುತ್ತದೆ. ಕಂಗನಾ ರಣಾವತ್​ ಟ್ವಿಟರ್​ನಲ್ಲಿಲ್ಲ. ಆದರೆ, ಅವರ ಅಭಿಮಾನಿಗಳು ಟ್ವಿಟರ್​ನಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ಇತ್ತೀಚೆಗೆ ರಸೆಲ್ ಕ್ರೋವ್ ಅವರನ್ನು ಟ್ಯಾಗ್​ ಮಾಡಿ ಕಂಗನಾ ಅಭಿಮಾನಿಗಳು ಟ್ವೀಟ್​ ಒಂದನ್ನು ಮಾಡಿದ್ದರು. ಅಲ್ಲದೆ, ಕಂಗನಾ-ರಸೆಲ್​ ತೆರೆ ಹಂಚಿಕೊಳ್ಳಬೇಕು ಎನ್ನುವ ಇಚ್ಛೆ ಹೊರ ಹಾಕಿದ್ದರು.

‘ಎರಡು ಭಿನ್ನ ಚಿತ್ರರಂಗದ ಕಲಾವಿದರು ಒಟ್ಟಿಗೆ ಕೆಲಸ ಮಾಡಿದರೆ ಹೇಗಿರುತ್ತದೆ? ಅಕಾಡೆಮಿ ವಿನ್ನರ್​ ರಸೆಲ್​ ಹಾಗೂ ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕಂಗನಾ ಒಟ್ಟಾಗಿ ಸಿನಿಮಾದಲ್ಲಿ ನಟಿಸಬೇಕು’ ಎಂದು ಅಭಿಮಾನಿಯೋರ್ವ ಟ್ವೀಟ್​ ಮಾಡಿದ್ದ. ಇದಕ್ಕೆ ರಸೆಲ್​ ಕೂಡ ಸಮ್ಮತಿ ಸೂಚಿಸಿದ್ದಾರೆ. ಅವರು ಈ ಟ್ವೀಟ್​ಅನ್ನು ರೀಟ್ವೀಟ್​ ಮಾಡಿಕೊಂಡಿದ್ದು, ಸಾಕಷ್ಟು ಅಚ್ಚರಿ ಮೂಡಿಸಿದೆ.

‘ಥಾರ್: ಲವ್ ಆ್ಯಂಡ್​ ಥಂಡರ್’ ಸಿನಿಮಾ ಕೆಲಸಗಳಲ್ಲಿ ರಸೆಲ್ ಬ್ಯುಸಿಯಾಗಿದ್ದಾರೆ. ಇನ್ನು, ಕಂಗನಾ, ‘ಥಲೈವಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕೆಲಸ ಸಂಪೂರ್ಣವಾಗಿ ಪೂರ್ಣಗೊಂಡಿದ್ದು, ರಿಲೀಸ್​ಗೆ ರೆಡಿ ಇದೆ. ಕೊವಿಡ್​ ಕಾರಣದಿಂದ ಸಿನಿಮಾ ಬಿಡುಗಡೆ ತಡವಾಗಿದೆ. ಇದಲ್ಲದೆ, ಧಾಕಡ್​ ಹಾಗೂ ತೇಜಸ್​ ಸಿನಿಮಾಗಳು ಅವರ ಕೈಯಲ್ಲಿವೆ. ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆಯನ್ನು ಟ್ಟಿಟರ್ ಬ್ಲಾಕ್​ ಮಾಡಿದೆ. ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಟ್ವೀಟ್​ ಮಾಡಲಾಗುತ್ತಿದೆ ಎನ್ನುವ ಕಾರಣಕ್ಕೆ ಟ್ವಿಟರ್​ ಈ ನಿರ್ಧಾರಕ್ಕೆ ಬಂದಿದೆ.

ಇದನ್ನೂ ಓದಿ: ಚಿತ್ರಮಂದಿರದಲ್ಲೇ ರಿಲೀಸ್​ ಆಗಲಿದೆ ಜಯಲಲಿತಾ ಬಯೋಪಿಕ್​ ತಲೈವಿ; ಗಾಸಿಪ್​ಗೆ ಕಂಗನಾ ಫುಲ್​ಸ್ಟಾಪ್​

ಪ್ರೇಮಿಗಳೆಲ್ಲಾ ಸಾಚಾನಾ? ಪ್ರೀತಿ ನಿಜನಾ? ನಟಿ ಕಂಗನಾ ಮಾಡ್ತಾರೆ ಕಠಿಣ ಪರೀಕ್ಷೆ

Published On - 3:42 pm, Sat, 14 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್