ಶೀಘ್ರವೇ ಹಾಲಿವುಡ್​ಗೆ ಹಾರಲಿದ್ದಾರೆ ಕಂಗನಾ? ಬಾಲಿವುಡ್​ ಅಂಗಳದಲ್ಲಿ ಹೊಸ ಸುದ್ದಿ

ಹಾಲಿವುಡ್​ ನಟ ರಸೆಲ್ ಕ್ರೋವ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಭಾರತದಲ್ಲೂ ಸಾಕಷ್ಟು ಜನರಿಗೆ ಅವರ ನಟನೆ ಇಷ್ಟವಾಗುತ್ತದೆ. ಕಂಗನಾ ರಣಾವತ್​ ಟ್ವಿಟರ್​ನಲ್ಲಿಲ್ಲ. ಆದರೆ, ಅವರ ಅಭಿಮಾನಿಗಳು ಟ್ವಿಟರ್​ನಲ್ಲಿ ಆ್ಯಕ್ಟಿವ್​ ಆಗಿದ್ದಾರೆ.

ಶೀಘ್ರವೇ ಹಾಲಿವುಡ್​ಗೆ ಹಾರಲಿದ್ದಾರೆ ಕಂಗನಾ? ಬಾಲಿವುಡ್​ ಅಂಗಳದಲ್ಲಿ ಹೊಸ ಸುದ್ದಿ
ಶೀಘ್ರವೇ ಹಾಲಿವುಡ್​ಗೆ ಹಾರಲಿದ್ದಾರೆ ಕಂಗನಾ? ಬಾಲಿವುಡ್​ ಅಂಗಳದಲ್ಲಿ ಹೊಸ ಸುದ್ದಿ
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 14, 2021 | 3:51 PM

ನಟಿ ಕಂಗನಾ ರಣಾವತ್​ ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ನಟನೆ ಜತೆಗೆ ನಿರ್ದೇಶನದಲ್ಲೂ ಅವರು ಬ್ಯುಸಿ. ಈ ಮಧ್ಯೆ ಸಾಕಷ್ಟು ಸಿನಿಮಾ ಆಫರ್​ಗಳು ಅವರ ಕೈಯಲ್ಲಿವೆ. ಹಲವು ಸ್ಕ್ರಿಪ್ಟ್​ಗಳನ್ನು ಕಂಗನಾ ಕೇಳುತ್ತಿದ್ದಾರೆ. ಈ ಮಧ್ಯೆ ಕಂಗನಾಗೆ ಹಾಲಿವುಡ್​ನಿಂದ ಆಫರ್ ಬರುವ ಸೂಚನೆ ಸಿಕ್ಕಿದೆ. ಖ್ಯಾತ ಹಾಲಿವುಡ್​ ನಟ ಕಂಗನಾ ಜತೆ ನಟಿಸೋಕೆ ಪರೋಕ್ಷವಾಗಿ ಓಕೆ ಎಂದಿದ್ದಾರೆ.

ಹಾಲಿವುಡ್​ ನಟ ರಸೆಲ್ ಕ್ರೋವ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಭಾರತದಲ್ಲೂ ಸಾಕಷ್ಟು ಜನರಿಗೆ ಅವರ ನಟನೆ ಇಷ್ಟವಾಗುತ್ತದೆ. ಕಂಗನಾ ರಣಾವತ್​ ಟ್ವಿಟರ್​ನಲ್ಲಿಲ್ಲ. ಆದರೆ, ಅವರ ಅಭಿಮಾನಿಗಳು ಟ್ವಿಟರ್​ನಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ಇತ್ತೀಚೆಗೆ ರಸೆಲ್ ಕ್ರೋವ್ ಅವರನ್ನು ಟ್ಯಾಗ್​ ಮಾಡಿ ಕಂಗನಾ ಅಭಿಮಾನಿಗಳು ಟ್ವೀಟ್​ ಒಂದನ್ನು ಮಾಡಿದ್ದರು. ಅಲ್ಲದೆ, ಕಂಗನಾ-ರಸೆಲ್​ ತೆರೆ ಹಂಚಿಕೊಳ್ಳಬೇಕು ಎನ್ನುವ ಇಚ್ಛೆ ಹೊರ ಹಾಕಿದ್ದರು.

‘ಎರಡು ಭಿನ್ನ ಚಿತ್ರರಂಗದ ಕಲಾವಿದರು ಒಟ್ಟಿಗೆ ಕೆಲಸ ಮಾಡಿದರೆ ಹೇಗಿರುತ್ತದೆ? ಅಕಾಡೆಮಿ ವಿನ್ನರ್​ ರಸೆಲ್​ ಹಾಗೂ ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕಂಗನಾ ಒಟ್ಟಾಗಿ ಸಿನಿಮಾದಲ್ಲಿ ನಟಿಸಬೇಕು’ ಎಂದು ಅಭಿಮಾನಿಯೋರ್ವ ಟ್ವೀಟ್​ ಮಾಡಿದ್ದ. ಇದಕ್ಕೆ ರಸೆಲ್​ ಕೂಡ ಸಮ್ಮತಿ ಸೂಚಿಸಿದ್ದಾರೆ. ಅವರು ಈ ಟ್ವೀಟ್​ಅನ್ನು ರೀಟ್ವೀಟ್​ ಮಾಡಿಕೊಂಡಿದ್ದು, ಸಾಕಷ್ಟು ಅಚ್ಚರಿ ಮೂಡಿಸಿದೆ.

‘ಥಾರ್: ಲವ್ ಆ್ಯಂಡ್​ ಥಂಡರ್’ ಸಿನಿಮಾ ಕೆಲಸಗಳಲ್ಲಿ ರಸೆಲ್ ಬ್ಯುಸಿಯಾಗಿದ್ದಾರೆ. ಇನ್ನು, ಕಂಗನಾ, ‘ಥಲೈವಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕೆಲಸ ಸಂಪೂರ್ಣವಾಗಿ ಪೂರ್ಣಗೊಂಡಿದ್ದು, ರಿಲೀಸ್​ಗೆ ರೆಡಿ ಇದೆ. ಕೊವಿಡ್​ ಕಾರಣದಿಂದ ಸಿನಿಮಾ ಬಿಡುಗಡೆ ತಡವಾಗಿದೆ. ಇದಲ್ಲದೆ, ಧಾಕಡ್​ ಹಾಗೂ ತೇಜಸ್​ ಸಿನಿಮಾಗಳು ಅವರ ಕೈಯಲ್ಲಿವೆ. ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆಯನ್ನು ಟ್ಟಿಟರ್ ಬ್ಲಾಕ್​ ಮಾಡಿದೆ. ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಟ್ವೀಟ್​ ಮಾಡಲಾಗುತ್ತಿದೆ ಎನ್ನುವ ಕಾರಣಕ್ಕೆ ಟ್ವಿಟರ್​ ಈ ನಿರ್ಧಾರಕ್ಕೆ ಬಂದಿದೆ.

ಇದನ್ನೂ ಓದಿ: ಚಿತ್ರಮಂದಿರದಲ್ಲೇ ರಿಲೀಸ್​ ಆಗಲಿದೆ ಜಯಲಲಿತಾ ಬಯೋಪಿಕ್​ ತಲೈವಿ; ಗಾಸಿಪ್​ಗೆ ಕಂಗನಾ ಫುಲ್​ಸ್ಟಾಪ್​

ಪ್ರೇಮಿಗಳೆಲ್ಲಾ ಸಾಚಾನಾ? ಪ್ರೀತಿ ನಿಜನಾ? ನಟಿ ಕಂಗನಾ ಮಾಡ್ತಾರೆ ಕಠಿಣ ಪರೀಕ್ಷೆ

Published On - 3:42 pm, Sat, 14 August 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!