AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಬಾಕ್ಸ್​ ಆಫೀಸ್​ನಲ್ಲಿ ಮೊದಲ ವಾರ 100 ಕೋಟಿ ರೂಪಾಯಿ ಗಳಿಸಿದ ‘ಸ್ಪೈಡರ್​ ಮ್ಯಾನ್​’  

‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ ಚಿತ್ರ ಈ ಸರಣಿಯ ಫೇವರಿಟ್​ ಸಿನಿಮಾ ಎಂದು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಅದ್ಭುತ ಪ್ರತಿಕ್ರಿಯೆ ಸಿಗುತ್ತಿದೆ. ಹೀಗಾಗಿ, ಈ ಸಿನಿಮಾ ನಾಲ್ಕು ದಿನದಲ್ಲಿ 108 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ವರದಿ ಆಗಿದೆ.

ಭಾರತದ ಬಾಕ್ಸ್​ ಆಫೀಸ್​ನಲ್ಲಿ ಮೊದಲ ವಾರ 100 ಕೋಟಿ ರೂಪಾಯಿ ಗಳಿಸಿದ ‘ಸ್ಪೈಡರ್​ ಮ್ಯಾನ್​’  
ಸ್ಪೈಡರ್​ ಮ್ಯಾನ್​
TV9 Web
| Edited By: |

Updated on:Dec 20, 2021 | 9:53 PM

Share

ಟಾಮ್ ಹಾಲೆಂಡ್ (Tom Holland)​ ನಟನೆಯ ‘ಸ್ಪೈಡರ್​ ಮ್ಯಾನ್​’ (Spider Man) ಸರಣಿಯ ಹೊಸ ಸಿನಿಮಾ ‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ (Spider-Man: No Way Home) ಡಿಸೆಂಬರ್​ 16ರಂದು ಬಿಡುಗಡೆಯಾಗಿ ಬಾಕ್ಸ್​ಆಫೀಸ್​ ಉಡೀಸ್​ ಮಾಡಿದೆ. ಸಿನಿಮಾ ಭಾರತದಲ್ಲಿ ಸಾಕಷ್ಟು ಮೆಚ್ಚುಗೆ ಪಡೆದುಕೊಂಡ ಕಾರಣ ಗಲ್ಲಾಪೆಟ್ಟಿಗೆಯಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಿದೆ. ಈ ಸಿನಿಮಾದ ನಾಲ್ಕು ದಿನಗಳ ಗಳಿಕೆ ನೂರು ಕೋಟಿ ದಾಟಿದೆ. ಹಾಗಾದರೆ ಹಾಲಿವುಡ್​ನ ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದೆಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ ಚಿತ್ರ ಈ ಸರಣಿಯ ಫೇವರಿಟ್​ ಸಿನಿಮಾ ಎಂದು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಅದ್ಭುತ ಪ್ರತಿಕ್ರಿಯೆ ಸಿಗುತ್ತಿದೆ. ಹೀಗಾಗಿ, ಈ ಸಿನಿಮಾ ನಾಲ್ಕು ದಿನದಲ್ಲಿ 108 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ವರದಿ ಆಗಿದೆ. ಈ ಮೂಲಕ ಮೊದಲ ವಾರದ ಕಲೆಕ್ಷನ್​ ವಿಚಾರದಲ್ಲಿ ಬಾಲಿವುಡ್​ನ ಸೂರ್ಯವಂಶಿ ಸಿನಿಮಾವನ್ನು ‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ ಹಿಂದಿಕ್ಕಿದೆ.

‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ ಸಿನಿಮಾ 2ಡಿ, 3ಡಿ, ಐಮ್ಯಾಕ್ಸ್​ 3ಡಿ ಸೇರಿ ಸಾಕಷ್ಟು ವಿಧದಲ್ಲಿ ಪ್ರೇಕ್ಷಕರಿಗೆ ಲಭ್ಯವಿದೆ. ಈ ಮೂಲಕ ನಾನಾ ರೀತಿಯ ಅನುಭವ ಹೊಂದುವ ಅವಕಾಶ ಇದೆ. ಭಾರತೀಯ ಪ್ರೇಕ್ಷಕರು ಸಿನಿಮಾವನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ. ಶನಿವಾರ, ಭಾನುವಾರ ಸಿನಿಮಾದ ಕಲೆಕ್ಷನ್​ ಹೆಚ್ಚಿದೆ. ವಿಶ್ವಾದ್ಯಂತ ಈ ಸಿನಿಮಾ ಡಿಸೆಂಬರ್​ 17 ರಂದು ರಿಲೀಸ್​ ಆಗಿದೆ. ಕ್ರಿಸ್​ಮಸ್​ಗೆ ಒಳ್ಳೆಯ ಗಿಫ್ಟ್​ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಟಾಮ್ ಹಾಲೆಂಡ್ ನಟಿಸಿರುವ ಈ ಚಿತ್ರದ ಟ್ರೇಲರ್ ಹವಾ ಸೃಷ್ಟಿ ಮಾಡಿತ್ತು. ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿ.17ರಂದು ‘ಸ್ಪೈಡರ್ ಮ್ಯಾನ್: ನೋ ವೇ ಹೋಮ್’ ಚಿತ್ರ ಬಿಡುಗಡೆ ಆಗುತ್ತಿದೆ. ವಿಶೇಷ ಎಂದರೆ ಭಾರತದಲ್ಲಿ ಒಂದು ದಿನ ಮೊದಲು ಅಂದರೆ ಡಿಸೆಂಬರ್ 16ರಂದು ರಿಲೀಸ್ ಆಗಿದ್ದು, ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ‘ನಿಮ್ಮ ಬುದ್ಧಿ ಶುದ್ಧವಿಲ್ಲ’ ಎನಿಸಿಕೊಂಡ್ರೂ ಕೇಕೆ ಹಾಕಿ ಕುಣಿದ ಗಂಡಸರನ್ನು ನೋಡಿ ಸಮಂತಾ ಹೇಳಿದ್ದೇನು? 

‘ಈಗ’ ನಟಿಗೆ ಸ್ತನ ಕ್ಯಾನ್ಸರ್​; ಹೊಸ ಫೋಟೋ ನೋಡಿ ಶಾಕ್​ ಆದ ಅಭಿಮಾನಿಗಳು

 

Published On - 7:30 pm, Mon, 20 December 21

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!